ಅವರು ನಿನಗೆ ವಿರೋಧವಾಗಿ ಪಾಪಮಾಡಿ ದ್ದರಿಂದ ಆಕಾಶವು ಮುಚ್ಟಲ್ಪಟ್ಟು ಮಳೆ ಇಲ್ಲದಿರು ವಾಗ ನೀನು ಅವರನ್ನು ಶಿಕ್ಷಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸಿ ನಿನ್ನ ಹೆಸರನ್ನು ಕೊಂಡಾಡಿ ತಮ್ಮ ಪಾಪವನ್ನು ಬಿಟ್ಟು ತಿರುಗಿಕೊಂಡರೆ
Cross references
ನಿಮ್ಮ ಬಲದ ಗರ್ವವನ್ನು ಮುರಿದು ಹಾಕಿ ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಹಿತ್ತಾಳೆಯಂತೆಯೂ ಮಾಡುವೆನು.
ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ಮಳೆಯಾಗದಂತೆ ಮಾಡಿ ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡದ ಹಾಗೆಯೂ ಕರ್ತನು ನಮಗೆ ಕೊಡುವ ಆ ಉತ್ತಮ ದೇಶದಲ್ಲಿಂದ ನೀವು ಬೇಗ ನಾಶವಾಗದ ಹಾಗೆಯೂ ಎಚ್ಚರಿಕೆ ತಂದುಕೊಳ್ಳಿರಿ.
ನಿನ್ನ ತಲೆಯ ಮೇಲಿರುವ ಆಕಾಶವು ತಾಮ್ರ ವಾಗಿಯೂ ನಿನ್ನ ಕೆಳಗಿರುವ ಭೂಮಿಯು ಕಬ್ಬಿಣ ವಾಗಿಯೂ ಇರುವವು.
ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
ಮಳೆ ಇಲ್ಲದ ಹಾಗೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದು ಬಿಡಲು ಮಿಡಿತೆಗಳಿಗೆ ಆಜ್ಞಾಪಿಸಿದರೂ
ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು.
ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು.
ಕರ್ತನು ಹೀಗನ್ನುತ್ತಾನೆ--ನಾನು ಬಿಟ್ಟು ಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ಇಲ್ಲವೆ ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೇನು? ಇಗೋ, ನಿಮ್ಮ ಅಕ್ರಮ ಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ; ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.
ಆಗ ಕರ್ತನು ನನಗೆ ಹೇಳಿದ್ದೇನಂದರೆ --ಮೋಶೆಯೂ ಸಮುವೇಲನೂ ನನ್ನ ಮುಂದೆ ನಿಂತರೂ ನನ್ನ ಮನಸ್ಸು ಈ ಜನರ ಮೇಲೆ ಇರುವದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿ ಬಿಡು; ಅವರು ಹೋಗಲಿ.
ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ ಅದರ ಜೀವನಾಧಾ ರವನ್ನು ತೆಗೆದುಹಾಕಿ ಕ್ಷಾಮವು ಬರುವ ಹಾಗೆ ಮಾಡಿ ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದು ಬಿಡುವಾಗ,
ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು ನ್ಯಾಯವನ್ನೂ ನೀತಿಯನ್ನೂ ಅನುಸರಿಸಿದರೆ ತನ್ನ ಪ್ರಾಣವನ್ನು ಉಳಿಸಿಕೊಂಡು ಬದುಕುವನು.
ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ.
ಚೀಯೋನಿನಲ್ಲಿ ಕೊಂಬು ಊದಿರಿ; ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ.
ಬೇತೇಲಿಗೆ ಬಂದು ದ್ರೋಹಮಾಡಿರಿ, ಗಿಲ್ಗಾಲಿ ನಲ್ಲಿ ದ್ರೋಹಗಳನ್ನು ಮತ್ತಷ್ಟು ಮಾಡಿರಿ, ಪ್ರತಿ ಬೆಳಗಿನ ಜಾವದಲ್ಲಿ ನಿಮ್ಮ ಯಜ್ಞಗಳನ್ನು ತನ್ನಿರಿ; ಹತ್ತ ನೆಯ ಒಂದು ಪಾಲನ್ನು ಮೂರು ವರ್ಷವಾದ ಮೇಲೆ ತನ್ನಿರಿ.
ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಎಲೀಯನ ದಿವಸಗಳಲ್ಲಿ ಮೂರು ವರುಷ ಆರು ತಿಂಗಳು ಆಕಾಶವು ಮುಚ್ಚಲ್ಪಟ್ಟು ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರೂ
ಅವರ ಪ್ರವಾದನೆಯ ದಿನ ಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹೊಡೆಯುವದಕ್ಕೂ ಅಧಿಕಾರ ಉಂಟು.