ನೀನು ಅಕಾಶದಿಂದ ಅಂದರೆ ನೀನು ವಾಸಮಾಡುವ ಸ್ಥಳದಿಂದ ಕೇಳಿ ಮನ್ನಿಸಿ ಮನುಷ್ಯನ ಹೃದಯವನ್ನು ತಿಳಿಯುವ ನೀನು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರಕೊಡು; ಯಾಕಂದರೆ ನೀನೊಬ್ಬನೇ ಸಮಸ್ತ ಮನುಷ್ಯ ಮಕ್ಕಳ ಹೃದಯಗಳನ್ನು ತಿಳಿದವನಾಗಿದ್ದೀ.
Cross references
ಆಗ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ, ನಿಮ್ಮನ್ನು ಪರೀಕ್ಷಿಸುವದಕ್ಕೂ ನೀವು ಪಾಪ ಮಾಡದಂತೆ ಆತನ ಭಯವು ನಿಮಗಿರುವದಕ್ಕೂ ದೇವರು ಬಂದಿದ್ದಾನೆ ಅಂದನು.
ಆದರೆ ನೀವು ಕರ್ತನಿಗೆ ಭಯ ಪಟ್ಟು ನಿಮ್ಮ ಪೂರ್ಣ ಹೃದಯದಿಂದ ಸತ್ಯದಲ್ಲಿ ಆತ ನನ್ನು ಸೇವಿಸಿರಿ. ಆತನು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದನೆಂದು ಆಲೋ ಚಿಸಿರಿ.ಆದರೆ ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ ನೀವೂ ನಿಮ್ಮ ಅರಸನೂ ನಾಶವಾಗುವಿರಿ ಅಂದನು.
ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.
ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.
ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.
ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.