ನಿನ್ನ ಜನರು ನೀನು ಅಟ್ಟಿಬಿಡುವ ಯಾವ ಸ್ಥಳ ದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧ ಮಾಡಲು ಹೊರಟು ಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿಗೆ ಕಟ್ಟಿಸಿದ ಈ ಆಲಯದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ
Cross references
ನೀನು ಮಿದ್ಯಾನ್ಯರ ಕಡೆಯಿಂದ ಇಸ್ರಾಯೇಲ್ ಮಕ್ಕಳ ಮುಯ್ಯನ್ನು ತೀರಿಸು, ತರು ವಾಯ ನಿನ್ನ ಜನರ ಸಂಗಡ ನೀನು ಕೂಡಿಸಲ್ಪಡುವಿ ಅಂದನು.
ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಕುದುರೆಗಳನ್ನೂ ರಥ ಗಳನ್ನೂ ನಿನಗಿಂತ ಹೆಚ್ಚಾದ ಜನರನ್ನೂ ನೋಡಿದರೆ ಅವರಿಗೆ ಭಯಪಡಬೇಡ; ಐಗುಪ್ತದೇಶದೊಳಗಿಂದ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ.
ನನ್ನ ಸೇವಕನಾದ ಮೋಶೆಯು ಸತ್ತನು; ಈಗ ನೀನು ಈ ಜನರೆಲ್ಲರ ಸಹಿತವಾಗಿ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶಕ್ಕೆ ಹೋಗು.
ಆಗ ಕರ್ತನು ಯೆಹೋಶುವನಿಗೆ--ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ನೀನು ಸಮಸ್ತ ಯುದ್ಧಸ್ಥರಾದ ಜನರನ್ನು ಕೂಡಿಸಿಕೊಂಡು ಎದ್ದು ಆಯಿಗೆ ಏರಿ ಹೋಗು. ನೋಡು, ನಾನು ಆಯಿಯ ಅರಸನನ್ನೂ ಅವನ ಜನವನ್ನೂ ಪಟ್ಟಣ ವನ್ನೂ ಸೀಮೆಯನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.
ಯೆಹೋಶುವನು ಸತ್ತ ತರುವಾಯ ಆದದ್ದೇನಂದರೆ, ಇಸ್ರಾಯೇಲ್ ಮಕ್ಕಳು ಕರ್ತನಿಗೆ--ಕಾನಾನ್ಯರ ಮೇಲೆ ಮೊದಲು ನಮಗಾಗಿ ಯುದ್ಧಕ್ಕೆ ಹೋಗುವವರು ಯಾರು ಎಂದು ಕೇಳಿದರು.
ಈಗ ನೀನು ಹೋಗಿ ಆ ಅಮಾಲೇಕ್ಯರನ್ನು ಹೊಡೆದು ಅವರಿಗೆ ಇದ್ದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿ ಅವರನ್ನು ಕನಿಕರಿಸದೆ ಪುರುಷರನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಮೊಲೆ ಕೂಸುಗಳನ್ನೂ ದನ ಕುರಿ ಒಂಟೆ ಕತ್ತೆಗಳನ್ನೂ ಕೊಂದುಹಾಕು ಎಂಬದು.
ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ ಅವರು ತೀರಿಹೋಗುವ ವರೆಗೂ ಅವರ ಸಂಗಡ ಯುದ್ಧಮಾಡಬೇಕೆಂದು ಕರ್ತನು ನಿನ್ನನ್ನು ಕಳುಹಿಸಿದನು.
ನಿನಗೆ ನಿವಾಸದ ಮಂದಿರವನ್ನು ನೀನು ಎಂದೆಂದಿಗೂ ಅದರಲ್ಲಿ ವಾಸವಾಗಿರುವ ಹಾಗೆ ಶಾಶ್ವತ ಸ್ಥಳವನ್ನು ನಿಜವಾಗಿಯೂ ಕಟ್ಟಿಸಿದ್ದೇನೆ ಎಂದು ಹೇಳಿದನು.
ನಿನ್ನ ಜನರು ನೀನು ಕಳುಹಿಸುವ ಯಾವ ಸ್ಥಳದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧವನ್ನು ಮಾಡಲು ಹೊರಟುಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿ ಗೋಸ್ಕರ ಕಟ್ಟಿಸಿದ ಈ ಮನೆಯ ಮಾರ್ಗವಾಗಿಯೂ ಅವರು ಕರ್ತನಾದ ನಿನಗೆ ಪ್ರಾರ್ಥನೆ ಮಾಡಿದಾಗ
ಆದರೆ ನನ್ನ ಹೆಸರು ಅಲ್ಲಿ ಇರುವ ಹಾಗೆ ಯೆರೂಸಲೇಮನ್ನೂ ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ಇರಲು ದಾವೀದನನ್ನೂ ಆದುಕೊಂಡಿದ್ದೇನೆ ಎಂದು ಹೇಳಿದ್ದಾನೆ.
ಆದರೆ ಕೂಷಿಯನಾದ ಜೆರಹನು ಅವರಿಗೆ ವಿರೋ ಧವಾಗಿ ಹೊರಟು ಮಾರೇಷದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ರಾಣುವೆಯೂ ಮುನ್ನೂರು ರಥಗಳೂ ಇದ್ದವು.
ಆದದರಿಂದ ರಥಗಳ ಅಧಿಪತಿ ಗಳು ಯೆಹೋಷಾಫಾಟನನ್ನು ನೋಡಿದಾಗ--ನಿಶ್ಚ ಯವಾಗಿ ಇವನೇ ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಳ್ಳಲು ಕರ್ತನು ಅವ ನಿಗೆ ಸಹಾಯಕೊಟ್ಟನು. ಇದಲ್ಲದೆ ದೇವರು ಅವರನ್ನು ಅವನ ಕಡೆಯಿಂದ ತೊಲಗಿಸಿದನು.
ಆದದರಿಂದ ಯೆಹೂದ ದವರು ಕರ್ತನನ್ನು ಹುಡುಕಲು ಕೂಡಿಕೊಂಡರು. ನಿಶ್ಚಯವಾಗಿ ಸಮಸ್ತ ಯೆಹೂದದ ಪಟ್ಟಣಗಳಿಂದ ಕರ್ತನನ್ನು ಹುಡುಕಲು ಬಂದರು.
ಓ ಕರ್ತನೇ, ಪರಲೋಕದಲ್ಲಿರುವ ದೇವರು ನೀನಲ್ಲವೋ? ನೀನು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀಯಲ್ಲವೋ? ಯಾವನೂ ನಿನ್ನನ್ನು ಎದುರಿಸಕೂಡದ ಹಾಗೆ ನಿನ್ನ ಕೈಯಲ್ಲಿ ಶಕ್ತಿಯೂ ಪರಾಕ್ರಮವೂ ಇಲ್ಲವೋ?
ಇದರ ನಿಮಿತ್ತ ಅರಸನಾದ ಹಿಜ್ಕೀಯನೂ ಆಮೋ ಚನ ಮಗನಾಗಿರುವ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು.
ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
ಯಾವಾಗ ಬರಹಕ್ಕೆ ರುಜುಹಾಕಿದ್ದಾ ಯಿತ್ತೆಂದು ದಾನಿಯೇಲನಿಗೆ ತಿಳಿಯಿತೋ ಆಗ ಅವನು ತನ್ನ ಮನೆಗೆ ಹೋದನು; ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆಯಲ್ಪಟ್ಟಿದ್ದ ರಿಂದ ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ಸ್ತೋತ್ರವನ್ನೂ ಸಲ್ಲಿಸಿ ದನು.