ಆತನು ತನ್ನ ಬಾಯಿಂದ--ನನ್ನ ಜನ ರಾದ ಇಸ್ರಾಯೇಲನ್ನು ಐಗುಪ್ತದೇಶದಿಂದ ಬರ ಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವದಕ್ಕೆ ಇಸ್ರಾಯೇಲನ ಸಮಸ್ತ ಗೋತ್ರಗಳೊಳಗಿಂದ ಯಾವ ಪಟ್ಟಣವನ್ನೂ ಆದುಕೊಳ್ಳಲಿಲ್ಲ; ನನ್ನ ಜನರಾದ ಇಸ್ರಾ ಯೇಲಿನ ಮೇಲೆ ಆಳುವವನಾಗಿರಲು ನಾನು ಒಬ್ಬನ ನ್ನಾದರೂ ಆದುಕೊಳ್ಳಲಿಲ್ಲ.
Cross references
ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
ಆತನ ವಿಷಯದಲ್ಲಿ ಜಾಗ್ರತೆ ಯಾಗಿದ್ದು ಆತನ ಮಾತಿಗೆ ವಿಧೇಯನಾಗು. ಆತನಿಗೆ ಕೋಪವನ್ನೆಬ್ಬಿಸಬೇಡ; ನನ್ನ ಹೆಸರು ಆತನಲ್ಲಿ ಇರುವ ದರಿಂದ ಆತನು ನಿಮ್ಮ ದ್ರೋಹಗಳನ್ನು ಮನ್ನಿಸುವದಿಲ್ಲ.
ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.
ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
ಆಗ ಸಮುವೇಲನು ಸಮಸ್ತ ಜನರಿಗೆ--ಕರ್ತನು ಆದುಕೊಂಡವನನ್ನು ನೋಡಿರಿ; ಎಲ್ಲಾ ಜನರಲ್ಲಿ ಇವನಿಗೆ ಸಮಾನನಾದವನು ಯಾವನೂ ಇಲ್ಲವಲ್ಲಾ ಅಂದನು. ಜನರೆಲ್ಲರೂ ಆರ್ಭಟಿಸಿ--ಅರಸನಾದವನು ಬಾಳಲಿ ಅಂದರು.
ಸಮು ವೇಲನು ಸೌಲನಿಗೆ--ನೀನು ಬುದ್ಧಿಹೀನವಾದ ಕೆಲಸ ಮಾಡಿದ್ದೀ; ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕರ್ತನು ಇಸ್ರಾಯೇಲ್ಯರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವದಕ್ಕೆ ಇದ್ದನು.
ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು.
ನಿಶ್ಚಯವಾಗಿ ನಾನು ಐಗುಪ್ತದಿಂದ ಇಸ್ರಾಯೇಲ್ ಮಕ್ಕಳನ್ನು ಬರಮಾಡಿದ ಕಾಲ ಮೊದಲುಗೊಂಡು ಇಂದಿನ ವರೆಗೂ ಮನೆ ಯಲ್ಲಿ ವಾಸಮಾಡದೆ ಡೇರೆಯಲ್ಲಿಯೂ ಗುಡಾರ ದಲ್ಲಿಯೂ ವಾಸಮಾಡಿಕೊಂಡಿದ್ದೆನು.
ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ.
ನನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲು ಗೊಂಡು ನನ್ನ ನಾಮವು ಅದರಲ್ಲಿ ಇರುವ ನಿಮಿತ್ತ ಮಂದಿರವನ್ನು ಕಟ್ಟುವದಕ್ಕೆ ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ನಾನು ಆದು ಕೊಳ್ಳದೆ ನನ್ನ ಜನರಾದ ಇಸ್ರಾಯೇಲಿನ ಮೇಲೆ ಇರಲು ನಾನು ದಾವೀದನನ್ನು ಆದುಕೊಂಡೆನು ಅಂದನು.
ಇದಲ್ಲದೆ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಇರಿಸುವೆನೆಂದು ಕರ್ತನು ಯಾವದನ್ನು ಕುರಿತು ಹೇಳಿದ್ದನೋ ಆ ಕರ್ತನ ಮನೆಯಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು.
ನಾನು ಐಗುಪ್ತದಿಂದ ಇಸ್ರಾ ಯೇಲಿನ ಮಕ್ಕಳನ್ನು ಬರಮಾಡಿದ ದಿವಸ ಮೊದಲು ಗೊಂಡು ಇಂದಿನ ವರೆಗೂ ಮನೆಯಲ್ಲಿ ವಾಸಮಾಡದೆ ಡೇರೆಯಿಂದ ಡೇರೆಗೂ ಗುಡಾರದಿಂದ ಗುಡಾರಕ್ಕೂ ಹೋಗುತ್ತಿದ್ದೆನು.
ನಿನ್ನ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀನು ಕೇಳುವ ಹಾಗೆ ಅಲ್ಲಿ ನನ್ನ ಹೆಸರು ಇರುವದೆಂದು ನೀನು ಹೇಳಿದ ಈ ಸ್ಥಳದ ಮೇಲೆಯೂ ಈ ಆಲಯದ ಮೇಲೆಯೂ ಹಗಲಿರುಳು ನಿನ್ನ ಕಣ್ಣುಗಳು ತೆರೆದಿರಲಿ.
ನನ್ನ ಹೆಸರು ಯುಗಯುಗಾಂತರಕ್ಕೂ ಅಲ್ಲಿ ಇರುವ ಹಾಗೆ ಈ ಮನೆಯನ್ನು ಆದುಕೊಂಡು ಪರಿಶುದ್ಧ ಮಾಡಿದ್ದೇನೆ; ನನ್ನ ಕಣ್ಣುಗಳೂ ನನ್ನ ಹೃದಯವೂ ಅಲ್ಲಿ ಯಾವಾಗಲೂ ಇರುವವು.
ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನನ್ನು ಬಲಪಡಿಸಿಕೊಂಡು ರಾಜ್ಯವನ್ನು ಆಳಿದನು. ರೆಹಬ್ಬಾಮನು ಆಳಲು ಆರಂಭಿಸಿದಾಗ ನಾಲ್ವತ್ತೊಂದು ವರುಷದವನಾಗಿದ್ದು ಅಲ್ಲಿ ತನ್ನ ನಾಮವನ್ನು ಇರಿಸಲು ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಕರ್ತನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರುಷ ಆಳಿದನು. ಅವನ ತಾಯಿಯ ಹೆಸರು ನಯಮಾ; ಅವಳು ಅಮ್ಮೋನ್ಯಳಾಗಿದ್ದಳು.
ಅವರು ಅದರಲ್ಲಿ ನಿವಾಸ ಮಾಡಿ ನಿನ್ನ ಹೆಸರಿಗೆ ಪರಿಶುದ್ಧವಾದ ಸ್ಥಾನವನ್ನು ಕಟ್ಟಿಸಿ
ನಿನ್ನ ಹೆಸರು ಈ ಆಲಯದಲ್ಲಿರುವದರಿಂದ ಕತ್ತಿಯೂ ನ್ಯಾಯತೀರಿಸುವ ಶಿಕ್ಷೆಯೂ ಜಾಡ್ಯವೂ ಬರವೂ ಏನಾದರೂ ನಮ್ಮ ಮೇಲೆ ಬಂದರೆ ನಾವು ಈ ಆಲಯದ ಮುಂದೆಯೂ ನಿನ್ನ ಸಮ್ಮುಖದಲ್ಲಿಯೂ ನಿಂತು ನಮ್ಮ ಇಕ್ಕಟ್ಟಿನಲ್ಲಿ ನಿನ್ನನ್ನು ಕೂಗುವಾಗ ನೀನು ಕೇಳಿ ರಕ್ಷಿಸುವವನಾಗಿದ್ದೀ ಎಂದು ಹೇಳಿದರು.
ನಿಮ್ಮ ಪಿತೃ ಗಳ ಹಾಗೆ ನಿಮ್ಮ ಕುತ್ತಿಗೆಯನ್ನು ಕಠಿಣಪಡಿಸಬೇಡಿರಿ. ಕರ್ತನಿಗೆ ಕೈಕೊಟ್ಟು ಆತನು ಯುಗಯುಗಕ್ಕೂ ಪರಿಶುದ್ಧ ಮಾಡಿದ ಆತನ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಕರ್ತನನ್ನು ಸೇವಿಸಿರಿ. ಆಗ ತನ್ನ ಉಗ್ರಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವನು.
ಇದ ಲ್ಲದೆ--ಯೆರೂಸಲೇಮಿನಲ್ಲಿ ನನ್ನ ಹೆಸರು ಯುಗ ಯುಗಕ್ಕೂ ಇರುವದೆಂದು ಕರ್ತನು ಹೇಳಿದ ಕರ್ತನ ಆಲಯದಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.
ದೇವರು--ಈ ಆಲಯದಲ್ಲಿಯೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಯೆರೂ ಸಲೇಮಿನಲ್ಲಿಯೂ ನಾನು ನನ್ನ ಹೆಸರನ್ನು ಯುಗ ಯುಗಕ್ಕೂ ಇರಿಸುವೆನೆಂದೂ ಮೋಶೆಯಿಂದ
ಅದರ ಸಂಗಡ ಯೆರೂಸ ಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕೋಸ್ಕರ ಜನರಿಂದಲೂ ಯಾಜಕರಿಂದಲೂ ಕೊಡಲ್ಪಟ್ಟ ಮನಃ ಪೂರ್ವಕವಾದ ಅರ್ಪಣೆಯನ್ನೂ ತಕ್ಕೊಂಡು ಹೋಗಿ
ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು.
ಆಗ ಕರ್ತನ ದೂತನು ಸೈತಾನನಿಗೆ--ಸೈತಾನನೇ, ಕರ್ತನು ನಿನ್ನನ್ನು ಗದರಿಸಲಿ; ಹೌದು, ಯೆರೂಸಲೇಮನ್ನು ಆದುಕೊಂಡ ಕರ್ತನು ನಿನ್ನನ್ನು ಗದರಿಸಲಿ; ಅದು ಬೆಂಕಿಯೊಳಗಿಂದ ಎಳೆದ ಕೊಳ್ಳೆಯಾಗಿದೆಯಲ್ಲವೋ ಅಂದನು.