ಸೊಲೊಮೋನನು ಪ್ರಾರ್ಥಿಸಿ ತೀರಿಸಿದಾಗ ಬೆಂಕಿಯು ಆಕಾಶದಿಂದ ಇಳಿದು ದಹನ ಬಲಿಗಳನ್ನೆಲ್ಲಾ ದಹಿಸಿಬಿಟ್ಟಿತು.
Cross references
ಸೂರ್ಯನು ಮುಳುಗಿದ ಮೇಲೆ ಕತ್ತಲಾದಾಗ ಇಗೋ, ಹೊಗೆಹಾಯುವ ಒಲೆಯೂ ಉರಿಯುವ ದೀಪವೂ ತುಂಡುಗಳ ಮಧ್ಯದಲ್ಲಿ ಹಾದುಹೋದವು.
ಅಲ್ಲಿ ನಾನು ಇಸ್ರಾಯೇಲ್ ಮಕ್ಕಳನ್ನು ಸಂಧಿಸುವೆನು. ಗುಡಾರವು ನನ್ನ ಮಹಿಮೆಯಿಂದ ಪವಿತ್ರವಾಗುವದು.
ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು.
ಮೋಶೆಯೂ ಆರೋನನೂ ಸಭೆಯ ಗುಡಾರದ ಒಳಗೆ ಹೋಗಿ ಹೊರಗೆ ಬಂದು ಜನರನ್ನು ಆಶೀರ್ವ ದಿಸಿದರು; ಆಗ ಕರ್ತನ ಮಹಿಮೆಯು ಜನರೆಲ್ಲರಿಗೂ ಕಾಣಿಸಿತು.ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
ಆಗ ಕರ್ತನ ದೂತನು ತನ್ನ ಕೈಯಲ್ಲಿದ್ದ ಕೋಲಿನ ಕೊನೆಯನ್ನು ಚಾಚಿ ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ಮುಟ್ಟಿದನು. ಆಗ ಬೆಂಕಿಯು ಬಂಡೆ ಯಿಂದ ಎದ್ದು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿ ಗಳನ್ನೂ ದಹಿಸಿಬಿಟ್ಟಿತು. ಆಗ ಕರ್ತನ ದೂತನು ಅವನ ಕಣ್ಣುಗಳಿಗೆ ಕಾಣಿಸದೆ ಹೋದನು.
ಯಾಜಕರು ಪರಿಶುದ್ಧ ಸ್ಥಳದಿಂದ ಬಂದಾಗ ಮೇಘವು ಕರ್ತನ ಮಂದಿರವನ್ನು ತುಂಬಿತ್ತು.
ಆಕಾಶದ ಕಡೆಗೆ ಕೈಯೆತ್ತಿ ಕರ್ತನ ಯಜ್ಞವೇದಿಯ ಮುಂದೆ ಮೊಣಕಾಲೂರಿದ್ದ ಸೊಲೊಮೋ ನನು ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿ ಮುಗಿಸಿದ ನಂತರ ಎದ್ದು ನಿಂತನು.
ಸೊಲೊಮೋನನು ಕರ್ತನ ಮಂದಿರ ವನ್ನೂ ಅರಮನೆಯನ್ನೂ ಕಟ್ಟಲು ಆಶೆ ಯಿಂದ ಇಚ್ಚೈಸಿದ್ದನ್ನೆಲ್ಲಾ ಕಟ್ಟಿಸಿ ತೀರಿಸಿದ ಮೇಲೆ ಏನಾಯಿತಂದರೆ,
ಆಗ ನೀವು ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ; ನಾನು ಕರ್ತನ ಹೆಸರನ್ನು ಹೇಳಿ ಪ್ರಾರ್ಥಿಸುವೆನು. ಆಗ ಬೆಂಕಿಯಿಂದ ಪ್ರತ್ಯುತ್ತರ ಕೊಡುವ ದೇವರು ತಾನೇ ದೇವರಾಗಿ ರುವನು ಅಂದನು.
ಆಗ ಕರ್ತನ ಬೆಂಕಿಯು ಇಳಿದು ಬಂದು ದಹನಬಲಿಯನ್ನೂ ಕಟ್ಟಿಗೆ ಗಳನ್ನೂ ಕಲ್ಲುಗಳನ್ನೂ ಮಣ್ಣನ್ನೂ ಸುಟ್ಟುಬಿಟ್ಟು ಕಾಲುವೆ ಯಲ್ಲಿದ್ದ ನೀರನ್ನು ಹೀರಿಬಿಟ್ಟಿತು.
ದಾವೀದನು ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ಕರ್ತನನ್ನು ಬೇಡಿಕೊಂಡನು. ಆಗ ಆತನು ಆಕಾಶದಿಂದ ದಹನ ಬಲಿಪೀಠದ ಮೇಲೆ ಅಗ್ನಿಯಿಂದ ಅವ ನಿಗೆ ಪ್ರತ್ಯುತ್ತರಕೊಟ್ಟನು.
ತುತೂರಿ ಊದುವವರೂ ಸಂಗೀತಗಾರರೂ ಕರ್ತನನ್ನು ಕೊಂಡಾ ಡುತ್ತಾ ಹೊಗಳುತ್ತಾ ಏಕವಾಗಿ ಒಂದೇ ಶಬ್ದ ಮಾಡಿ ದಾಗ ತುತೂರಿ ತಾಳ ಮೊದಲಾದ ಗೀತ ವಾದ್ಯಗಳಿಂದ ತಮ್ಮ ಶಬ್ದವನ್ನೆತ್ತಿ--ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇರುವದೆಂದೂ ಕರ್ತನನ್ನು ಕೀರ್ತಿಸುವಾಗ ಕರ್ತನ ಆಲಯವು ಮೇಘದಿಂದ ತುಂಬಲ್ಪಟ್ಟಿತು.ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.
ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.
ಕರ್ತನೇ, ನಿನ್ನ ವಾಸಸ್ಥಾನವನ್ನೂ ಗೌರವದ ನಿವಾಸವನ್ನೂ ನಾನು ಪ್ರೀತಿಸಿದ್ದೇನೆ.
ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಕರ್ತನು ಉನ್ನ ತೋನ್ನತವಾಗಿ ಸಿಂಹಾಸನಾರೂಢನಾಗಿರುವದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.
ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
ಆ ಮನುಷ್ಯನು ಒಳಗೆ ಹೋಗು ವಾಗ ಕೆರೂಬಿಯರು ಆಲಯದ ಬಳಿಯಲ್ಲಿ ನಿಂತಿ ದ್ದರು. ಮೇಘವು ಒಳಗಿನ ಅಂಗಳವನ್ನು ತುಂಬಿಸಿ ಕೊಂಡಿತ್ತು.
ಆಗ ಆತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆ ತಂದಿತು; ಇಗೋ, ಕರ್ತನ ಮಹಿಮೆ ಯಿಂದ ಆಲಯವು ತುಂಬಿಕೊಂಡಿತ್ತು.
ಆಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿನ ಮಾರ್ಗವಾಗಿ ಆಲಯದ ಮುಂದೆ ಕರೆದುಕೊಂಡು ಹೋದನು; ನಾನು ನೋಡಲಾಗಿ ಇಗೋ, ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿಕೊಂಡಿತು. ನಾನು ಬೋರಲುಬಿದ್ದೆನು.
ನಾನು ಮಾತನಾಡುತ್ತಾ ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನೂ ಅರಿಕೆಮಾಡುತ್ತಾ ನನ್ನ ದೇವರ ಪರಿಶುದ್ಧ ಪರ್ವತಕ್ಕೋಸ್ಕರ ನನ್ನ ವಿಜ್ಞಾಪನೆಯನ್ನು ನನ್ನ ದೇವರಾದ ಕರ್ತನ ಮುಂದೆ ಅರ್ಪಿಸುತ್ತಾ ಇದ್ದೆನು.
ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡಿದವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು. ಸೆರೆಯಲ್ಲಿದ್ದವರು ಅವುಗಳನ್ನು ಕೇಳುತ್ತಿದ್ದರು.
ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.