Home Bibles 2 ದಿನವೃತ್ತಾಂತ 7:1 · ಕನ್ನಡ ಬೈಬಲ್
2 ದಿನವೃತ್ತಾಂತ 7:1 · ಕನ್ನಡ ಬೈಬಲ್

ಸೊಲೊಮೋನನು ಪ್ರಾರ್ಥಿಸಿ ತೀರಿಸಿದಾಗ ಬೆಂಕಿಯು ಆಕಾಶದಿಂದ ಇಳಿದು ದಹನ ಬಲಿಗಳನ್ನೆಲ್ಲಾ ದಹಿಸಿಬಿಟ್ಟಿತು.

Cross references

ಆದಿಕಾಂಡ 15:17

ಸೂರ್ಯನು ಮುಳುಗಿದ ಮೇಲೆ ಕತ್ತಲಾದಾಗ ಇಗೋ, ಹೊಗೆಹಾಯುವ ಒಲೆಯೂ ಉರಿಯುವ ದೀಪವೂ ತುಂಡುಗಳ ಮಧ್ಯದಲ್ಲಿ ಹಾದುಹೋದವು.

ನಿರ್ಗಮಕಾಂಡ 29:43

ಅಲ್ಲಿ ನಾನು ಇಸ್ರಾಯೇಲ್‌ ಮಕ್ಕಳನ್ನು ಸಂಧಿಸುವೆನು. ಗುಡಾರವು ನನ್ನ ಮಹಿಮೆಯಿಂದ ಪವಿತ್ರವಾಗುವದು.

ನಿರ್ಗಮಕಾಂಡ 40:34

ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು.

ಲೇವ್ಯಕಾಂಡ 9:23

ಮೋಶೆಯೂ ಆರೋನನೂ ಸಭೆಯ ಗುಡಾರದ ಒಳಗೆ ಹೋಗಿ ಹೊರಗೆ ಬಂದು ಜನರನ್ನು ಆಶೀರ್ವ ದಿಸಿದರು; ಆಗ ಕರ್ತನ ಮಹಿಮೆಯು ಜನರೆಲ್ಲರಿಗೂ ಕಾಣಿಸಿತು.ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.

ಲೇವ್ಯಕಾಂಡ 9:24

ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.

ನ್ಯಾಯಾಧಿಪತಿಗಳು 6:21

ಆಗ ಕರ್ತನ ದೂತನು ತನ್ನ ಕೈಯಲ್ಲಿದ್ದ ಕೋಲಿನ ಕೊನೆಯನ್ನು ಚಾಚಿ ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ಮುಟ್ಟಿದನು. ಆಗ ಬೆಂಕಿಯು ಬಂಡೆ ಯಿಂದ ಎದ್ದು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿ ಗಳನ್ನೂ ದಹಿಸಿಬಿಟ್ಟಿತು. ಆಗ ಕರ್ತನ ದೂತನು ಅವನ ಕಣ್ಣುಗಳಿಗೆ ಕಾಣಿಸದೆ ಹೋದನು.

1 ಅರಸುಗಳು 8:10

ಯಾಜಕರು ಪರಿಶುದ್ಧ ಸ್ಥಳದಿಂದ ಬಂದಾಗ ಮೇಘವು ಕರ್ತನ ಮಂದಿರವನ್ನು ತುಂಬಿತ್ತು.

1 ಅರಸುಗಳು 8:54

ಆಕಾಶದ ಕಡೆಗೆ ಕೈಯೆತ್ತಿ ಕರ್ತನ ಯಜ್ಞವೇದಿಯ ಮುಂದೆ ಮೊಣಕಾಲೂರಿದ್ದ ಸೊಲೊಮೋ ನನು ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿ ಮುಗಿಸಿದ ನಂತರ ಎದ್ದು ನಿಂತನು.

1 ಅರಸುಗಳು 9:1

ಸೊಲೊಮೋನನು ಕರ್ತನ ಮಂದಿರ ವನ್ನೂ ಅರಮನೆಯನ್ನೂ ಕಟ್ಟಲು ಆಶೆ ಯಿಂದ ಇಚ್ಚೈಸಿದ್ದನ್ನೆಲ್ಲಾ ಕಟ್ಟಿಸಿ ತೀರಿಸಿದ ಮೇಲೆ ಏನಾಯಿತಂದರೆ,

1 ಅರಸುಗಳು 18:24

ಆಗ ನೀವು ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ; ನಾನು ಕರ್ತನ ಹೆಸರನ್ನು ಹೇಳಿ ಪ್ರಾರ್ಥಿಸುವೆನು. ಆಗ ಬೆಂಕಿಯಿಂದ ಪ್ರತ್ಯುತ್ತರ ಕೊಡುವ ದೇವರು ತಾನೇ ದೇವರಾಗಿ ರುವನು ಅಂದನು.

1 ಅರಸುಗಳು 18:38

ಆಗ ಕರ್ತನ ಬೆಂಕಿಯು ಇಳಿದು ಬಂದು ದಹನಬಲಿಯನ್ನೂ ಕಟ್ಟಿಗೆ ಗಳನ್ನೂ ಕಲ್ಲುಗಳನ್ನೂ ಮಣ್ಣನ್ನೂ ಸುಟ್ಟುಬಿಟ್ಟು ಕಾಲುವೆ ಯಲ್ಲಿದ್ದ ನೀರನ್ನು ಹೀರಿಬಿಟ್ಟಿತು.

1 ದಿನವೃತ್ತಾಂತ 21:26

ದಾವೀದನು ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ಕರ್ತನನ್ನು ಬೇಡಿಕೊಂಡನು. ಆಗ ಆತನು ಆಕಾಶದಿಂದ ದಹನ ಬಲಿಪೀಠದ ಮೇಲೆ ಅಗ್ನಿಯಿಂದ ಅವ ನಿಗೆ ಪ್ರತ್ಯುತ್ತರಕೊಟ್ಟನು.

2 ದಿನವೃತ್ತಾಂತ 5:13

ತುತೂರಿ ಊದುವವರೂ ಸಂಗೀತಗಾರರೂ ಕರ್ತನನ್ನು ಕೊಂಡಾ ಡುತ್ತಾ ಹೊಗಳುತ್ತಾ ಏಕವಾಗಿ ಒಂದೇ ಶಬ್ದ ಮಾಡಿ ದಾಗ ತುತೂರಿ ತಾಳ ಮೊದಲಾದ ಗೀತ ವಾದ್ಯಗಳಿಂದ ತಮ್ಮ ಶಬ್ದವನ್ನೆತ್ತಿ--ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇರುವದೆಂದೂ ಕರ್ತನನ್ನು ಕೀರ್ತಿಸುವಾಗ ಕರ್ತನ ಆಲಯವು ಮೇಘದಿಂದ ತುಂಬಲ್ಪಟ್ಟಿತು.ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.

2 ದಿನವೃತ್ತಾಂತ 5:14

ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.

ಕೀರ್ತನೆಗಳು 26:8

ಕರ್ತನೇ, ನಿನ್ನ ವಾಸಸ್ಥಾನವನ್ನೂ ಗೌರವದ ನಿವಾಸವನ್ನೂ ನಾನು ಪ್ರೀತಿಸಿದ್ದೇನೆ.

ಯೆಶಾಯ 6:1

ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಕರ್ತನು ಉನ್ನ ತೋನ್ನತವಾಗಿ ಸಿಂಹಾಸನಾರೂಢನಾಗಿರುವದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.

ಯೆಶಾಯ 65:24

ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.

ಯೆಹೆಜ್ಕೇಲ 10:3

ಆ ಮನುಷ್ಯನು ಒಳಗೆ ಹೋಗು ವಾಗ ಕೆರೂಬಿಯರು ಆಲಯದ ಬಳಿಯಲ್ಲಿ ನಿಂತಿ ದ್ದರು. ಮೇಘವು ಒಳಗಿನ ಅಂಗಳವನ್ನು ತುಂಬಿಸಿ ಕೊಂಡಿತ್ತು.

ಯೆಹೆಜ್ಕೇಲ 43:5

ಆಗ ಆತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆ ತಂದಿತು; ಇಗೋ, ಕರ್ತನ ಮಹಿಮೆ ಯಿಂದ ಆಲಯವು ತುಂಬಿಕೊಂಡಿತ್ತು.

ಯೆಹೆಜ್ಕೇಲ 44:4

ಆಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿನ ಮಾರ್ಗವಾಗಿ ಆಲಯದ ಮುಂದೆ ಕರೆದುಕೊಂಡು ಹೋದನು; ನಾನು ನೋಡಲಾಗಿ ಇಗೋ, ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿಕೊಂಡಿತು. ನಾನು ಬೋರಲುಬಿದ್ದೆನು.

ದಾನಿಯೇಲ 9:20

ನಾನು ಮಾತನಾಡುತ್ತಾ ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನೂ ಅರಿಕೆಮಾಡುತ್ತಾ ನನ್ನ ದೇವರ ಪರಿಶುದ್ಧ ಪರ್ವತಕ್ಕೋಸ್ಕರ ನನ್ನ ವಿಜ್ಞಾಪನೆಯನ್ನು ನನ್ನ ದೇವರಾದ ಕರ್ತನ ಮುಂದೆ ಅರ್ಪಿಸುತ್ತಾ ಇದ್ದೆನು.

ಹಗ್ಗಾಯ 2:7

ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಮಲಾಕಿ 3:1

ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.

ಅಪೋಸ್ತಲರ ಕೃತ್ಯಗಳು 4:31

ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.

ಅಪೋಸ್ತಲರ ಕೃತ್ಯಗಳು 16:25

ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡಿದವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು. ಸೆರೆಯಲ್ಲಿದ್ದವರು ಅವುಗಳನ್ನು ಕೇಳುತ್ತಿದ್ದರು.

ಪ್ರಕಟನೆ 21:23

ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.

Interlinear

Choose Theme