ಏಳನೇ ತಿಂಗಳಿನ ಇಪ್ಪತ್ತ ಮೂರನೇ ದಿವಸದಲ್ಲಿ ಅವನು ಜನರನ್ನು ತಮ್ಮ ಡೇರೆ ಗಳಿಗೆ ಕಳುಹಿಸಿಬಿಟ್ಟನು. ಕರ್ತನು ದಾವೀದನಿಗೂ ಸೊಲೊಮೋನನಿಗೂ ತನ್ನ ಜನವಾದ ಇಸ್ರಾಯೇ ಲಿಗೂ ಮಾಡಿದ ಉಪಕಾರಕ್ಕೋಸ್ಕರ ಅವರು ಹೃದಯ ದಲ್ಲಿ ಆನಂದವಾಗಿ ಸಂತೋಷಪಡುತ್ತಾ ಹೋದರು.
Cross references
ದೇವರು ಮೋಶೆಗೆ ಮಾಡಿದವುಗಳೆಲ್ಲವನ್ನೂ ಕರ್ತನು ಇಸ್ರಾಯೇಲ್ಯರನ್ನು ಐಗುಪ್ತದೊಳಗಿಂದ ಹೊರಗೆ ತಂದದ್ದನ್ನೂ ಮಿದ್ಯಾ ನಿನ ವೈದಿಕನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿ
ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.
ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
ಅವುಗಳನ್ನು ನಿನ್ನ ದೇವರಾದ ಕರ್ತನ ಮುಂದೆ ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳ ಲ್ಲಿರುವ ಲೇವಿಯನೂ ತಿನ್ನಬೇಕು; ಆಗ ನಿನ್ನ ಎಲ್ಲಾ ಕೈ ಕೆಲಸದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ನೀನು ಸಂತೋಷಪಡಬೇಕು.
ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು.
ಆ ಹಬ್ಬದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳಲ್ಲಿರುವ ಲೇವಿಯನೂ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ಸಂತೋಷಪಡಬೇಕು.
ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.
ಈಗ ಓ ದೇವರಾದ ಕರ್ತನೇ, ನೀನು ನಿನ್ನ ಬಲದ ಮಂಜೂಷದ ಸಂಗಡ ನಿನ್ನ ವಿಶ್ರಾಂತಿಗೆ ಏರು; ಓ ದೇವರಾದ ಕರ್ತನೇ, ನಿನ್ನ ಯಾಜಕರು ರಕ್ಷಣೆಯನ್ನು ಧರಿಸಿಕೊಳ್ಳಲಿ; ನಿನ್ನ ಪರಿ ಶುದ್ಧರು ಒಳ್ಳೇದರಲ್ಲಿ ಸಂತೋಷಪಡಲಿ.ಓ ದೇವರಾದ ಕರ್ತನೇ, ನಿನ್ನ ಅಭಿಷಿಕ್ತನಿಗೆ ನಿನ್ನ ಮುಖ ವನ್ನು ತಿರುಗಿಸಬೇಡ; ನಿನ್ನ ಸೇವಕನಾದ ದಾವೀದ ನಿಗೆ ಅನುಗ್ರಹಿಸಿದ ಕೃಪೆಗಳನ್ನು ಜ್ಞಾಪಕಮಾಡು ಎಂದು ಬೇಡಿಕೊಂಡನು.
ಆಗ ದೇವರು ಜನರನ್ನು ಸಿದ್ಧಮಾಡಿದ್ದರಿಂದ ಹಿಜ್ಕೀಯನೂ ಜನರೆಲ್ಲರೂ ಸಂತೋಷಪಟ್ಟರು; ಯಾಕಂದರೆ ಈ ಕಾರ್ಯವು ಅಕಸ್ಮಾತ್ತಾಗಿ ಆಯಿತು.
ಇಸ್ರಾ ಯೇಲಿನ ಅರಸನಾಗಿರುವ ದಾವೀದನ ಮಗನಾದ ಸೊಲೊಮೋನನ ಕಾಲ ಮೊದಲುಗೊಂಡು ಯೆರೂ ಸಲೇಮಿನಲ್ಲಿ ಇದರ ಹಾಗೆ ನಡೆದಿರಲಿಲ್ಲವಾದದ ರಿಂದ ಹೀಗೆಯೇ ಯೆರೂಸಲೇಮಿನಲ್ಲಿ ಮಹಾ ಸಂತೋಷ ಉಂಟಾಗಿತ್ತು.ಆಗ ಲೇವಿಯರಾದ ಯಾಜಕರೂ ಎದ್ದು ಜನರನ್ನು ಆಶೀರ್ವದಿಸಿದರು. ಅವರ ಶಬ್ದವು ಕೇಳಲ್ಪಟ್ಟಿತು. ಅವರ ಪ್ರಾರ್ಥನೆಯು ಆತನ ಪರಿಶುದ್ಧವಾದ ನಿವಾಸಸ್ಥಾನಕ್ಕೆ ಅಂದರೆ ಪರಲೋಕಕ್ಕೆ ಮುಟ್ಟಿತು.
ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ.
ನೀತಿವಂತರೇ, ಕರ್ತನಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯಉಳ್ಳವರೇ, ಉತ್ಸಾಹ ಧ್ವನಿಮಾಡಿರಿ.
ಕರ್ತನೇ, ನಿನ್ನ ಕ್ರಿಯೆಯಿಂದ ನನ್ನನ್ನು ಸಂತೋಷ ಪಡಿಸಿದ್ದೀ. ನಿನ್ನ ಕೈಕೆಲಸಗಳಲ್ಲಿ ನಾನು ಜಯ ಧ್ವನಿಗೈಯುತ್ತೇನೆ.
ಸಂತೋಷ ದಿಂದ ಕರ್ತನನ್ನು ಸೇವಿಸಿರಿ; ಹಾಡುತ್ತಾ ಆತನ ಮುಂದೆ ಬನ್ನಿರಿ.
ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ; ಕರ್ತನನ್ನು ಹುಡುಕುವವರ ಹೃದಯವು ಸಂತೋಷಿಸಲಿ.
ಕರ್ತನೇ, ನೀನು ಆದುಕೊಂಡವರ ಸುಖವನ್ನು ನಾನು ನೋಡಿ ನಿನ್ನ ಜನಾಂಗದ ಸಂತೋಷ ದೊಂದಿಗೆ ಸಂತೋಷಿಸಿ ನಿನ್ನ ಬಾಧ್ಯತೆಯ ಸಂಗಡ ಹೊಗಳಿಕೊಳ್ಳುವೆನು.
ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿ ತನ್ನ ಮನೆಯವರೆಲ್ಲರ ಸಂಗಡ ದೇವರಲ್ಲಿ ನಂಬಿಕೆಯಿಟ್ಟು ಉಲ್ಲಾಸಗೊಂಡನು.
ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ.