ಮಳೆ ಇಲ್ಲದ ಹಾಗೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದು ಬಿಡಲು ಮಿಡಿತೆಗಳಿಗೆ ಆಜ್ಞಾಪಿಸಿದರೂ
Cross references
ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ ಇಗೋ, ನಾಳೆಯೇನಾನು ನಿನ್ನ ಮೇರೆಯಲ್ಲಿ ಮಿಡತೆಗಳನ್ನು ಬರಮಾಡು ವೆನು.
ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲಮಾಡಿ ನಿನ್ನನ್ನು ಅವರಿಗಿಂತ ದೊಡ್ಡದಾದ ಬಲವುಳ್ಳ ಜನಾಂಗವನ್ನಾಗಿ ಮಾಡುವೆನು ಅಂದನು.
ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು.
ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ಮಳೆಯಾಗದಂತೆ ಮಾಡಿ ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡದ ಹಾಗೆಯೂ ಕರ್ತನು ನಮಗೆ ಕೊಡುವ ಆ ಉತ್ತಮ ದೇಶದಲ್ಲಿಂದ ನೀವು ಬೇಗ ನಾಶವಾಗದ ಹಾಗೆಯೂ ಎಚ್ಚರಿಕೆ ತಂದುಕೊಳ್ಳಿರಿ.
ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನಿನ್ನ ದೇಶದಲ್ಲಿ ನಿನಗೆ ಏಳು ವರುಷ ಬರವು ಆಗಬೇಕೋ ಇಲ್ಲವೆ ಮೂರು ತಿಂಗಳು ನಿನ್ನ ಶತ್ರುಗಳು ನಿನ್ನನ್ನು ಹಿಂದಟ್ಟುವಾಗ ನೀನು ಅವರ ಮುಂದೆ ಓಡಿಹೋಗಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿವಸ ಬಾಧೆ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದಾತನಿಗೆ ನಾನು ಏನು ಪ್ರತ್ಯುತ್ತರ ತಕ್ಕೊಂಡು ಹೋಗಬೇಕು ಯೋಚಿಸಿನೋಡು ಅಂದನು.
ಅವರು ನಿನಗೆ ವಿರೋಧವಾಗಿ ಪಾಪಮಾಡಿ ದ್ದರಿಂದ ಆಕಾಶವು ಮುಚ್ಟಲ್ಪಟ್ಟು ಮಳೆ ಇಲ್ಲದಿರು ವಾಗ ನೀನು ಅವರನ್ನು ಶಿಕ್ಷಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸಿ ನಿನ್ನ ಹೆಸರನ್ನು ಕೊಂಡಾಡಿ ತಮ್ಮ ಪಾಪವನ್ನು ಬಿಟ್ಟು ತಿರುಗಿಕೊಂಡರೆ
ದೇಶದಲ್ಲಿ ಬರವು, ಜಾಡ್ಯವು, ಉರಿಗಾಳಿಯು, ಬೂದಿಯು, ಮಿಡಿತೆ, ಕಂಬಳಿಹುಳ ಇವುಗಳು ಇದ್ದರೆ ಇಲ್ಲವೆ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣ ಗಳಲ್ಲಿ ಅವರನ್ನು ಸಂಕಟಪಡಿಸಿದರೆ ಯಾವ ಬಾಧೆ ಯಾವ ಬೇನೆ ಇದ್ದರೂ ತನ್ನ ಬಾಧೆಯನ್ನೂ ವ್ಯಸನ ವನ್ನೂ ತಿಳಿಯುವ ಒಬ್ಬ ಮನುಷ್ಯನಾದರೂ
ಆತನು ಅದನ್ನು ಕಡಿಯುವದಾದರೆ ಇಲ್ಲವೆ ಮುಚ್ಚುವದಾದರೆ ಅಥವಾ ಒಟ್ಟು ಗೂಡಿಸುವದಾದರೆ ಆತನನ್ನು ತಡೆಯುವವರು ಯಾರಿದ್ದಾರೆ?
ಇಗೋ, ಆತನು ಕೆಡವುತ್ತಾನೆ; ಅದು ತಿರುಗಿ ಕಟ್ಟಲ್ಪಡುವದಿಲ್ಲ. ಆತನು ಮನುಷ್ಯನಿಂದ ಮುಚ್ಚಿಬಿಡುತ್ತಾನೆ; ಅದು ತೆರೆ ಯಲ್ಪಡುವದಿಲ್ಲ.
ಆತನು ಹೇಳಲು ಮಿಡಿತೆಗಳೂ ಲೆಕ್ಕವಿಲ್ಲದ ಕಂಬಳಿ ಹುಳಗಳೂ ಬಂದವು,
ಫಲ ವುಳ್ಳ ಭೂಮಿಯನ್ನು ಬಂಜರಾಗಿಯೂ ಅದರ ನಿವಾಸಿ ಗಳ ಕೆಟ್ಟತನಕ್ಕೋಸ್ಕರ ಮಾರ್ಪಡಿಸುತ್ತಾನೆ.
ಇಲ್ಲದಿದ್ದರೆ ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಅದರ ಮೇಲೆ ನನ್ನ ರೋಷ ವನ್ನು ರಕ್ತದಲ್ಲಿ ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟರೆ,
ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ.
ನಾನು ನಿಮ್ಮಲ್ಲಿ ಕಳುಹಿಸದಂಥ, ನನ್ನ ದೊಡ್ಡ ಸೈನ್ಯವಾದ ಹುಳವೂ ಕಂಬಳಿ ಹುಳವೂ ಒಳಗೆ ನಾಶಮಾಡುವ ಹುಳವೂ ಮಿಡತೆಗಳೂ ತಿಂದ ವರುಷಗಳಿಗೆ ಬದಲಾಗಿ ನಿಮಗೆ ಕೊಡುವೆನು.
ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಎಲೀಯನ ದಿವಸಗಳಲ್ಲಿ ಮೂರು ವರುಷ ಆರು ತಿಂಗಳು ಆಕಾಶವು ಮುಚ್ಚಲ್ಪಟ್ಟು ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರೂ
ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,
ಅವರ ಪ್ರವಾದನೆಯ ದಿನ ಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹೊಡೆಯುವದಕ್ಕೂ ಅಧಿಕಾರ ಉಂಟು.