ಇಲ್ಲವೆ ನನ್ನ ಜನರ ಮಧ್ಯದಲ್ಲಿ ಜಾಡ್ಯವನ್ನು ಕಳುಹಿಸಿದರೂ ನನ್ನ ಹೆಸರಿನಿಂದ ಕರೆಯಲ್ಪಟ್ಟ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆ ಮಾಡಿ ನನ್ನ ಮುಖವನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ ನಾನು ಆಕಾಶದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ ಅವರ ದೇಶವನ್ನು ಗುಣಮಾಡುವೆನು.
Cross references
ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ
ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.
ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ.
ಇದಲ್ಲದೆ ನಾನು ನಿನ್ನ ಮುಂದೆ ಇಟ್ಟ ಈ ಎಲ್ಲಾ ಆಶೀರ್ವಾದವೂ ಶಾಪವೂ ನಿನಗೆ ಸಂಭವಿಸಿದ ಮೇಲೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ತಳ್ಳಿಬಿಟ್ಟ ಎಲ್ಲಾ ಜನಾಂಗಗಳ ಮಧ್ಯದಲ್ಲಿ ನೀನು ನೆನಪುಮಾಡಿ
ನೀನು ಆಕಾಶದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ ಅವರು ನಡೆಯಬೇಕಾದ ಒಳ್ಳೇ ಮಾರ್ಗವನ್ನು ಕಲಿಸಿ ಬಾಧ್ಯೆತೆಯಾಗಿ ನಿನ್ನ ಜನರಿಗೆ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು.
ನೀನು ನಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ಅವರು ಬದು ಕುವ ವರೆಗೆ ಅವರು ನಿನಗೆ ಭಯಪಟ್ಟು ನಿನ್ನ ಮಾರ್ಗ ದಲ್ಲಿ ನಡೆಯುವ ಹಾಗೆ
ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿರಲಾಗಿ ಅವರು ಸೆರೆಯಾಗಿ ಒಯ್ಯಲ್ಪಟ್ಟ ದೇಶದಲ್ಲಿ ಮನಸ್ಸು ತಿರಿಗಿಸಿ ಪಶ್ಚಾತ್ತಾಪ ಪಟ್ಟು--ನಾವು ಪಾಪಮಾಡಿದ್ದೇವೆ, ಅಕೃತ್ಯಮಾಡಿ ದುಷ್ಟರಾಗಿ ನಡೆದಿದ್ದೇವೆ ಎಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ಪ್ರಾರ್ಥನೆ ಮಾಡಿ
ಆಗ ಯೆಹೋಷಾಫಾಟನು ಭಯಪಟ್ಟು ಕರ್ತನನ್ನು ಹುಡುಕಲು ನಿರ್ಣಯಿಸಿ ಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸಮಾಡ ಬೇಕೆಂದು ಸಾರಿಸಿದನು.
ಆದದರಿಂದ ಯೆಹೂದ ದವರು ಕರ್ತನನ್ನು ಹುಡುಕಲು ಕೂಡಿಕೊಂಡರು. ನಿಶ್ಚಯವಾಗಿ ಸಮಸ್ತ ಯೆಹೂದದ ಪಟ್ಟಣಗಳಿಂದ ಕರ್ತನನ್ನು ಹುಡುಕಲು ಬಂದರು.
ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು.
ಮನಸ್ಸೆಯ ಇತರ ಕ್ರಿಯೆಗಳೂ ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ ಇಸ್ರಾಯೇಲಿನ ದೇವರಾದ ಕರ್ತನ ನಾಮದಲ್ಲಿ ಅವನ ಸಂಗಡ ಮಾತನಾಡಿದ ಪ್ರವಾದಿಗಳ ಮಾತುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
ನೀನು--ನನ್ನ ಮುಖವನ್ನು ನೀವು ಹುಡುಕಿರಿ ಎಂದು ಹೇಳಿದಿಯಲ್ಲಾ. ಕರ್ತನೇ, ನಿನ್ನ ಮುಖವನ್ನು ಹುಡು ಕುವೆನು ಎಂದು ನನ್ನ ಹೃದಯವು ನಿನಗೆ ಹೇಳಿತು.
ಭೂಮಿಯನ್ನು ನಡುಗಿಸಿ ಸೀಳಿಬಿಟ್ಟಿದ್ದೀ; ಅದರ ಬಿರುಕುಗಳನ್ನು ಸರಿಮಾಡು; ಅದು ಕದಲು ತ್ತದೆ.
ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ; ವ್ಯರ್ಥವಾಗಿ ನನ್ನನ್ನು ಹುಡುಕಿರಿ ಎಂದು ಯಾಕೋಬನ ವಂಶ ದವರಿಗೆ ನಾನು ಹೇಳಲಿಲ್ಲ, ಕರ್ತನಾದ ನಾನೇ ನೀತಿ ಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.
ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
ವಿಮೋಚಕನು ಚೀಯೋನಿಗೂ ಯಾಕೋಬ್ಯರಲ್ಲಿ ತಮ್ಮ ದ್ರೋಹದಿಂದ ತಿರುಗುವವರಿಗೂ ಬರುವೆ ನೆಂದು ಕರ್ತನು ಅನ್ನುತ್ತಾನೆ.ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
ನಾವು ನಿನ್ನವರಾಗಿದ್ದೇವೆ; ಅವರ ಮೇಲೆ ನೀನು ದೊರೆತನ ಮಾಡಲಿಲ್ಲ; ಅವರು ನಿನ್ನ ಹೆಸರಿನಿಂದ ಕರೆಯಲ್ಪಡಲಿಲ್ಲ.
ಕರ್ತನು ಹೀಗೆ ಅನ್ನುತ್ತಾನೆ--ಮಾತನಾಡು, ಏನಂದರೆ ಮನು ಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳು ವವು; ಧಾನ್ಯ ಕೊಯ್ಯುವವನು ಉಳಿಸಿದ ಕೈ ಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವವು.
ಏಳು ಮಂದಿಯನ್ನು ಹೆತ್ತವಳು ಕುಂದುತ್ತಾಳೆ; ತನ್ನ ಪ್ರಾಣವನ್ನು ಬಿಡುತ್ತಾಳೆ; ಹಗಲಿರುವಾಗಲೇ ಅವಳ ಸೂರ್ಯನು ಅಸ್ತಮಿಸುತ್ತಾನೆ; ಅವಳು ನಾಚಿಕೆಪಡುತ್ತಾಳೆ; ಅವಮಾನ ಗೊಳ್ಳುತ್ತಾಳೆ; ಇದಲ್ಲದೆ ಅವರ ಶೇಷವನ್ನು ಅದರ ಶತ್ರುಗಳ ಮುಂದೆ ಕತ್ತಿಗೆ ಒಪ್ಪಿಸುವೆನು ಎಂದು ಕರ್ತನು ಅನ್ನುತ್ತಾನೆ.
ಆಗ ಪ್ರವಾದಿಯಾದ ಯೆರೆವಿಾಯನು ಈ ವಾಕ್ಯಗಳ ನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದ ಅರಸನಾದ ಚಿದ್ಕೀಯನಿಗೆ ಹೇಳಿದನು.
ಈ ಪ್ರಕಾರ ಕಸ್ದೀಯರ ದೇಶದಲ್ಲಿ ಕೊಂದುಹಾಕಲ್ಪ ಟ್ಟವರೂ ಅದರ ಬೀದಿಗಳಲ್ಲಿ ತಿವಿಯಲ್ಪಟ್ಟವರೂ ಬೀಳುವರು.
ಆಗ ಅವರು ಅರಸನನ್ನು ಹಿಡಿದು, ಬಾಬೆಲಿನ ಅರಸನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು; ಅಲ್ಲಿ ಅವನು ಅವನ ವಿಷಯ ನ್ಯಾಯತೀರ್ಪು ಮಾಡಿದನು.
ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ.
ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು ನ್ಯಾಯವನ್ನೂ ನೀತಿಯನ್ನೂ ಅನುಸರಿಸಿದರೆ ತನ್ನ ಪ್ರಾಣವನ್ನು ಉಳಿಸಿಕೊಂಡು ಬದುಕುವನು.
ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?
ಮನುಷ್ಯ ಪುತ್ರನೇ. ನೀನು ನಿನ್ನ ಜನರ ಮಕ್ಕಳಿಗೆ ಹೇಳು--ನೀತಿವಂತನ ನೀತಿಯು ಅವನ ಅಪರಾಧದ ದಿನದಲ್ಲಿ ಅವನನ್ನು ತಪ್ಪಿಸುವದಿಲ್ಲ; ಹಾಗೆಯೇ ದುಷ್ಟನ ದುಷ್ಟತ್ವವು ಅವನು ತನ್ನ ದುಷ್ಟತ್ವವನ್ನು ಬಿಟ್ಟು ತಿರುಗುವ ದಿನದಲ್ಲಿ ಅದರಿಂದ ಬೀಳುವದಿಲ್ಲ; ನೀತಿವಂತನು ಪಾಪಮಾಡುವ ದಿನದಲ್ಲಿ ನೀತಿಯಿಂದ ಬದುಕ ಲಾರನು.
ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ.
ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ.