ಇಸ್ರಾಯೇ ಲಿನ ಮಕ್ಕಳೆಲ್ಲರೂ ಬೆಂಕಿಯು ಇಳಿದದ್ದನ್ನು ಮನೆಯ ಮೇಲೆ ಇರುವ ಕರ್ತನ ಮಹಿಮೆಯನ್ನು ಕಂಡಾಗ ನೆಲಕ್ಕೆ ತಮ್ಮ ಮುಖಗಳನ್ನು ಬಾಗಿಸಿ ಆರಾಧಿಸಿ ಕರ್ತ ನನ್ನು ಕೊಂಡಾಡಿ--ಆತನು ಒಳ್ಳೆಯವನು, ಆತನ ಕೃಪೆಯು ಯುಗಯುಗಕ್ಕೂ ಇರುವದು ಎಂದು ಹೇಳಿ ದರು.
Cross references
ಕರ್ತನು ಇಸ್ರಾಯೇಲ್ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
ಆಗ ಮೋಶೆಯೂ ಆರೋನನೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಕೂಟದ ಮುಂದೆ ಅಡ್ಡಬಿದ್ದರು.
ಆಗ ಅವರು ಬೋರಲು ಬಿದ್ದು--ಓ ದೇವರೇ, ಎಲ್ಲಾ ಶರೀರಾತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀನು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳು ತ್ತೀಯೋ ಅಂದರು.
ಜನರೆಲ್ಲರು ಇದನ್ನು ನೋಡಿದಾಗ ಬೋರಲು ಬಿದ್ದು--ಕರ್ತನು ತಾನೇ ದೇವರು, ಕರ್ತನು ತಾನೇ ದೇವರು ಅಂದರು.
ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ.
ದಾವೀದನು ಸಮಸ್ತ ಸಭೆಗೆ--ಈಗ ನಿಮ್ಮ ದೇವರಾದ ಕರ್ತನನ್ನು ಸ್ತುತಿಸಿರಿ ಅಂದನು. ಆಗ ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಕರ್ತ ನನ್ನು ಸ್ತುತಿಸುತ್ತಾ ತಮ್ಮ ತಲೆಗಳನ್ನು ಬಾಗಿಸಿ ಕರ್ತನನ್ನೂ ಅರಸನನ್ನೂ ಆರಾಧಿಸಿದರು.
ತುತೂರಿ ಊದುವವರೂ ಸಂಗೀತಗಾರರೂ ಕರ್ತನನ್ನು ಕೊಂಡಾ ಡುತ್ತಾ ಹೊಗಳುತ್ತಾ ಏಕವಾಗಿ ಒಂದೇ ಶಬ್ದ ಮಾಡಿ ದಾಗ ತುತೂರಿ ತಾಳ ಮೊದಲಾದ ಗೀತ ವಾದ್ಯಗಳಿಂದ ತಮ್ಮ ಶಬ್ದವನ್ನೆತ್ತಿ--ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇರುವದೆಂದೂ ಕರ್ತನನ್ನು ಕೀರ್ತಿಸುವಾಗ ಕರ್ತನ ಆಲಯವು ಮೇಘದಿಂದ ತುಂಬಲ್ಪಟ್ಟಿತು.ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.
ಆಗ ಯೆಹೋ ಷಾಫಾಟನು ತನ್ನ ಮುಖವನ್ನು ನೆಲಕ್ಕೆ ಬಾಗಿಸಿದನು; ಯೆಹೂದದವರೆಲ್ಲರೂ ಯೆರೂಸಲೇಮಿನ ನಿವಾಸಿಗಳೆ ಲ್ಲರೂ ಕರ್ತನ ಮುಂದೆ ಅಡ್ಡಬಿದ್ದು ಕರ್ತನನ್ನು ಆರಾ ಧಿಸಿದರು.
ಅವನು ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಸೈನ್ಯದ ಮುಂದೆ ಅವರು ಹೊರಡುವಾಗ ಪರಿಶುದ್ಧತ್ವದ ಪ್ರಭೆಯನ್ನು ಸ್ತುತಿಸುವದಕ್ಕೆ ಕರ್ತನನ್ನು ಕೊಂಡಾಡಿರಿ, ಯಾಕಂದರೆ ಆತನ ಕೃಪೆಯು ಯುಗ ಯುಗಕ್ಕೂ ಇರುವದೆಂದು ಹೇಳುವದಕ್ಕೆ ಕರ್ತ ನಿಗೆ ಸಂಗೀತಗಾರರನ್ನು ನೇಮಿಸಿದನು.
ಆಗ ಸಭೆಯವರೆಲ್ಲರೂ ಆರಾಧಿಸಿದರು. ದಹನಬಲಿ ಅರ್ಪಿಸಿ ತೀರಿಸುವ ಪರ್ಯಂತರ ಹಾಡುಗಾರರು ಹಾಡಿದರು, ತುತೂರಿ ಊದುವವರು ಊದಿದರು.
ಅವರು ಅರ್ಪಿಸುವದು ತೀರಿದಾಗ ಅರಸನೂ ಅವನ ಸಂಗಡ ಇದ್ದವರೆಲ್ಲರೂ ಬೊಗ್ಗಿ ಆರಾಧಿಸಿ ದರು.
ಇದಲ್ಲದೆ ಅರಸನಾದ ಹಿಜ್ಕೀಯನೂ ಪ್ರಧಾ ನರೂ ದಾವೀದನ ಮತ್ತು ಪ್ರವಾದಿಯಾದ ಆಸಾಫನ ಮಾತುಗಳಿಂದ ಕರ್ತನನ್ನು ಸ್ತುತಿಸಬೇಕೆಂದು ಲೇವಿ ಯರಿಗೆ ಹೇಳಿದರು. ಆಗ ಅವರು ಸಂತೋಷವಾಗಿ ಸ್ತುತಿಸಿ ಬೊಗ್ಗಿಕೊಂಡು ಆರಾಧಿಸಿದರು.
ಆಗ ಅವರು ಕರ್ತನನ್ನು ಕೊಂಡಾಡಿ ಹೊಗಳಿ ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇಸ್ರಾಯೇಲಿನ ಮೇಲೆ ಉಂಟೆಂದೂ ಪರಸ್ಪರವಾಗಿ ಹಾಡಿದರು. ಅವರು ಕರ್ತನನ್ನು ಹೊಗ ಳಿದಾಗ ಕರ್ತನ ಮಂದಿರದ ಅಸ್ತಿವಾರವನ್ನು ಹಾಕುವ ನಿಮಿತ್ತ ಜನರೆಲ್ಲರು ಮಹಾಧ್ವನಿಯಿಂದ ಆರ್ಭಟಿಸಿ ದರು.
ಬನ್ನಿರಿ, ನಮ್ಮನ್ನು ಉಂಟುಮಾಡಿದ ಕರ್ತನ ಮುಂದೆ ಮೊಣಕಾಲು ಊರೋಣ ಆತನಿಗೆ ಎರಗಿ ಆರಾಧಿಸೋಣ.
ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ
ಕರ್ತನನ್ನು ಕೊಂಡಾಡಿರಿ, ಆತನು ಒಳ್ಳೆಯವನು; ಆತನ ಕರುಣೆಯು ಎಂದೆಂದಿಗೂ ಅದೆ.
ಕರ್ತನು ನಮಗೆ ಮಾಡಿದ್ದೆಲ್ಲಾದರ ಪ್ರಕಾರ, ಕರ್ತನ ಪ್ರೀತಿ ಕೃಪೆಗಳನ್ನೂ ಕರ್ತನ ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು; ಆತನು ತನ್ನ ಅಂತಃಕರುಣೆಯ ಪ್ರಕಾರವೂ ತನ್ನ ಕೃಪೆಯ ಮಹಾ ಒಳ್ಳೇತನದ ಪ್ರಕಾರವೂ ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ.
ಅವರು ತರುವಾಯ ತಿರುಗಿಕೊಂಡು ತಾವು ಬಿಡುಗಡೆಯಾಗಿ ಕಳುಹಿಸಿಬಿಟ್ಟಿದ್ದ ದಾಸದಾಸಿ ಯರನ್ನು ತಿರಿಗಿ ಬರಮಾಡಿ ಅವರನ್ನು ದಾಸ ದಾಸಿಯ ರಾಗಿಯೂ ವಶಮಾಡಿಕೊಂಡರು.
ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು.
ಈತನಾ ದರೋ ಸದಾಕಾಲವಿರುವದರಿಂದ ಬದಲಾವಣೆಯಾ ಗದ ಯಾಜಕತ್ವವನ್ನು ಹೊಂದಿದ್ದಾನೆ.