ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ ಅವರ ಸೇವೆಗೆ ಯಾಜಕರ ಸರದಿ ಗಳನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ ಯಾಜಕರ ಮುಂದೆ ಸ್ತುತಿಸುವದಕ್ಕೂ ಸೇವೆಮಾಡು ವದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ ಸೇವೆಯ ಬಾಗಲಲ್ಲಿ ತಮ್ಮ ಸರದಿಗಳಾಗಿ ದ್ವಾರಪಾಲಕರನ್ನೂ ನೇಮಿಸಿದನು. ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.
Cross references
ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ--
ಕರ್ತನ ಆತ್ಮನು ನನ್ನಿಂದ ಮಾತನಾಡಿದನು; ಆತನ ವಾಕ್ಯವು ನನ್ನ ಬಾಯಿಯಲ್ಲಿತ್ತು.
ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ ಇಗೋ, ಕರ್ತನ ಮಾತಿನಂತೆ ದೇವರ ಮನುಷ್ಯನು ಯೆಹೂದದಿಂದ ಬೇತೇಲಿಗೆ ಬಂದನು.
ಮಂಜೂಷವನ್ನು ನೆಲೆಯಾಗಿ ಇರಿಸಿದ ತರು ವಾಯ ದಾವೀದನು ಕರ್ತನ ಮನೆಯಲ್ಲಿ ಹಾಡುವ ಸೇವೆಯ ಮೇಲೆ ಇರಿಸಿದವರು ಇವರೇ.
ದ್ವಾರಪಾಲಕರು ಯಾರಂದರೆ -- ಶಲ್ಲೂಮನೂ ಅಕ್ಕೂಬನೂ ಟಲ್ಮೋನನೂ ಅಹೀಮಾನನೂ ಇವರ ಸಹೋದರರೂ. ಇವರಲ್ಲಿ ಶಲ್ಲೂಮನು ಮುಖ್ಯಸ್ಥ ನಾಗಿದ್ದನು.
ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ನಾಲ್ಕು ದಿಕ್ಕುಗಳಲ್ಲಿ ದ್ವಾರಪಾಲಕರಿದ್ದರು.
ಇದಲ್ಲದೆ ದಾವೀದನು ವಿಶೇಷವಾದ ವೀಣೆ ಗಳನ್ನೂ ಕಿನ್ನರಿಗಳನ್ನೂ ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನು ಎತ್ತುವ ಹಾಗೆ ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವ ದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು.
ಇದಲ್ಲದೆ ಕರ್ತನ ಮಂಜೂಷದ ಮುಂದೆ ಸೇವೆ ಮಾಡಲೂ ಇಸ್ರಾಯೇಲಿನ ದೇವರಾದ ಕರ್ತನನ್ನು ಸ್ಮರಿಸುವದಕ್ಕೂ ಕೊಂಡಾಡುವದಕ್ಕೂ ಹೊಗಳುವ ದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು.
ಅವರ ಸಂಗಡ ಶಬ್ದ ಮಾಡ ಬೇಕಾದವರಿಗೋಸ್ಕರ ತುತೂರಿಗಳೂ ತಾಳಗಳೂ ದೇವರ ಗೀತ ವಾದ್ಯಗಳೂ ಸಹಿತವಾಗಿ ಹೇಮಾನನೂ ಯೆದುತೂನನೂ, ಮತ್ತು ಯೆದುತೂನನ ಕುಮಾರರು ದ್ವಾರಪಾಲಕರಾಗಿದ್ದರು.ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗೆ ಹೋದರು; ದಾವೀದನು ತನ್ನ ಮನೆಯವರನ್ನು ಆಶೀ ರ್ವದಿಸುವದಕ್ಕೆ ಹಿಂತಿರುಗಿದನು.
ಹೀಗೆ ದಾವೀದನು ಮುದುಕನಾಗಿಯೂ ದಿವಸಗಳು ತುಂಬಿದವನಾಗಿಯೂ ಇರು ವಾಗ ತನ್ನ ಮಗನಾದ ಸೊಲೊಮೋನನನ್ನು ಇಸ್ರಾ ಯೇಲಿನ ಮೇಲೆ ಅರಸನನ್ನಾಗಿ ಮಾಡಿದನು.
ಗೇರ್ಷೋನನು ಕೆಹಾತನು ಮೆರಾರೀಯು ಎಂಬ ಲೇವಿಯ ಮಕ್ಕಳಲ್ಲಿ ಅವರನ್ನು ವರ್ಗಗಳಾಗಿ ದಾವೀ ದನು ವಿಭಾಗಿಸಿದನು.
ಮೂಷೀಯ ಕುಮಾರರು-- ಮಹ್ಲೀಯು ಏದೆರ್ ಯೆರೇಮೋತ್ ಈ ಮೂರು ಮಂದಿ.
ಆದದರಿಂದ ದಾವೀದನು ಎಲ್ಲಾ ಜಾರನ ಮಕ್ಕಳಲ್ಲಿ ಚಾದೋಕನಿಗೂ ಈತಾಮಾರನ ಮಕ್ಕಳಲ್ಲಿ ಅಹೀಮೇಲೆಕನಿಗೂ ಅವರ ಸೇವೆಯಲ್ಲಿರುವ ವಿಚಾರಗಳ ಪ್ರಕಾರ ವರ್ಗಗಳನ್ನು ವಿಭಾಗಿಸಿದನು.
ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು.
ದ್ವಾರಪಾಲಕರ ವರ್ಗಗಳನ್ನು ಕುರಿತು ಏನಂದರೆ--ಕೊರಹೀಯರೊಳಗೆ ಆಸಾ ಫನ ಕುಮಾರರಲ್ಲಿ ಒಬ್ಬನಾಗಿರುವ ಕೋರೆಯನ ಮಗನಾದ ಮೆಷೆಲೆಮ್ಯನು.
ಕರ್ತನು ತನ್ನ ಕೈ ನನ್ನ ಮೇಲೆ ಇರಿಸಿ ಈ ಮಾದರಿಯ ಕೆಲಸಗಳನ್ನೆಲ್ಲಾ ನನಗೆ ತಿಳಿಯುವಂತೆ ಮಾಡಿದನು ಅಂದನು.
ಇದಲ್ಲದೆ ಅಲ್ಲಿ ಇದ್ದ ಸಮಸ್ತ ಯಾಜಕರು ಪರಿಶುದ್ಧ ವಾಗಿದ್ದು ಸರದಿಗಳ ಪ್ರಕಾರ ಕಾಯದೆ ಇದ್ದದರಿಂದ
ನೀವು ಮಾಡಬೇಕಾದ ಕಾರ್ಯವೇನಂದರೆ, ಸಬ್ಬತ್ತಿ ನಲ್ಲಿ ಪ್ರವೇಶಿಸುವ ಯಾಜಕರೂ ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಪಾಲು ದ್ವಾರಪಾಲಕರಾಗಿರ ಬೇಕು.
ಕರ್ತನ ಆಲಯದಲ್ಲಿ ಯಾವ ಅಪವಿತ್ರವಾದದ್ದೂ ಒಳಗೆ ಪ್ರವೇಶಿಸದ ಹಾಗೆ ಬಾಗಲುಗಳ ಬಳಿಯಲ್ಲಿ ದ್ವಾರಪಾಲಕರನ್ನು ಇರಿಸಿ ದನು.
ಇದಲ್ಲದೆ ದಾವೀದನೂ ಅರಸನ ದರ್ಶಿಯಾದ ಗಾದನೂ ಪ್ರವಾ ದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ ತಾಳ ವೀಣೆ ಕಿನ್ನರಿಗಳನ್ನು ಹಿಡಿದವರಾಗಿ ಕರ್ತನ ಆಲಯದಲ್ಲಿ ಲೇವಿಯರನ್ನು ನಿಲ್ಲಿಸಿದನು. ಕರ್ತನ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹಾಗೆ ಇತ್ತು.
ಹಿಜ್ಕೀಯನು ಅವನವನ ಸೇವೆಯ ಪ್ರಕಾರ ಯಾಜ ಕರ ಲೇವಿಯರ ಸರತಿಗಳನ್ನು ನೇಮಿಸಿದನು. ದಹನ ಬಲಿಗಳನ್ನು ಮತ್ತು ಸಮಾಧಾನದ ಬಲಿಗಳನ್ನು ಅರ್ಪಿ ಸುವದಕ್ಕೂ ಸೇವಿಸುವದಕ್ಕೂ ಕರ್ತನ ಗುಡಾರಗಳ ಬಾಗಲುಗಳಲ್ಲಿ ಸ್ತೋತ್ರ ಮಾಡುವದಕ್ಕೂ ಕೊಂಡಾ ಡುವದಕ್ಕೂ ಯಾಜಕರನ್ನೂ ಲೇವಿಯರನ್ನೂ ನೇಮಿಸಿ ದನು.
ಹೀಗೆಯೇ ಅರಸನ ಆಜ್ಞೆಯ ಪ್ರಕಾರ ಸೇವೆಯು ಸಿದ್ಧಮಾಡಲ್ಪಟ್ಟಿತು. ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ ಲೇವಿಯರು ತಮ್ಮ ತಮ್ಮ ಸರತಿಗಳಲ್ಲಿಯೂ ನಿಂತಿದ್ದರು.
ದಾವೀದನೂ ಆಸಾ ಫನೂ ಹೇಮಾನನೂ ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು; ಹಾಗೆಯೇ ದ್ವಾರಪಾಲಕರು ಪ್ರತಿಯೊಂದು ಬಾಗಲಲ್ಲಿ ಇದ್ದರು; ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು; ಯಾಕಂದರೆ ಅವರ ಸಹೋದರರಾದ ಲೇವಿಯರು ಅವರ ನಿಮಿತ್ತ ಸಿದ್ಧಮಾಡಿದರು.
ಮೋಶೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಯೆರೂ ಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆ ಗೋಸ್ಕರ ಯಾಜಕರನ್ನು ಅವರ ಸರತಿಯ ಪ್ರಕಾರವೂ ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು.
ಲೇವಿಯರ ಮುಖ್ಯಸ್ಥರಾದ ಹಷ ಬ್ಯನೂ ಶೇರೇಬ್ಯನೂ ಕದ್ಮೀಯೇಲನ ಮಗನಾದ ಯೇಷೂವನೂ ಅವರಿಗೆದುರಾಗಿ ನಿಂತ ಅವರ ಸಹೋದರರೂ ದೇವರ ಮನುಷ್ಯನಾದ ದಾವೀದನ ಆಜ್ಞೆಯ ಪ್ರಕಾರ ಹೊಗಳುವದಕ್ಕೂ ಸ್ತೋತ್ರಮಾಡು ವದಕ್ಕೂ ವರ್ಗ ವರ್ಗಗಳಾಗಿದ್ದರು.
ಮತ್ತನ್ಯನೂ ಬಕ್ಬುಕ್ಯನೂ ಒಬದ್ಯನೂ ಮೆಷುಲ್ಲಾಮನೂ ಟಲ್ಮೋ ನನೂ ಅಕ್ಕೂಬನೂ ಬೊಕ್ಕಸಗಳ ಬಾಗಲುಗಳನ್ನು ಕಾಯುವವರಾಗಿದ್ದರು.
ದೇವರ ಮನುಷ್ಯ ನಾದ ದಾವೀದನ ಗೀತವಾದ್ಯಗಳನ್ನು ಹಿಡಿಯುವ ಜೆಕರ್ಯನ ಸಹೋದರರಾದ ಶೆಮಾಯನೂ ಅಜರೇ ಲನೂ ಮಿಲಲೈಯನೂ ಗಿಲಾಲೈಯನೂ. ಮಾಯೈ ಯನೂ ನೆತನೇಲನೂ ಯೆಹೂದನೂ ಹನಾನೀಯೂ ನಡೆದರು; ಶಾಸ್ತ್ರಿಯಾದ ಎಜ್ರನು ಇವರ ಮುಂದೆ ನಡೆದನು.
ಯೂದಾಯದ ಅರಸನಾದ ಹೆರೋದನ ದಿನ ಗಳಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರಿಯನೆಂದು ಹೆಸರಿದ್ದ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ಕುಮಾರ್ತೆಯರಿಗೆ ಸಂಬಂಧಪಟ್ಟವಳು. ಆಕೆಯ ಹೆಸರು ಎಲಿಸಬೇತ್.
ಹೀಗಿರಲಾಗಿ ಅವನು ತನ್ನ ವರ್ಗದ ಸರತಿಯ ಮೇರೆಗೆ ದೇವರ ಮುಂದೆ ಯಾಜಕನ ಉದ್ಯೋಗವನ್ನು ಮಾಡುತ್ತಿದ್ದಾಗ
ತರುವಾಯ ಆತನು ಅವನನ್ನು ತೆಗೆದು ಹಾಕಿ ದಾವೀದನು ಅವರ ಅರಸನಾಗಿರುವಂತೆ ಎಬ್ಬಿಸಿದನು; ಇದಲ್ಲದೆ ಆತನು ಅವನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನಾನು ಇಷಯನ ಮಗನಾದ ದಾವೀದನನ್ನು ಕಂಡುಕೊಂಡೆನು, ಅವನು ನನ್ನ ಹೃದಯವು ಒಪ್ಪುವ ಮನುಷ್ಯನು ಮತ್ತು ಅವನು ನನ್ನ ಚಿ
ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು.