ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
Cross references
ಆದದರಿಂದ ಈಗ ಕರ್ತನಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಆತನನ್ನು ಸೇವಿಸಿರಿ. ನಿಮ್ಮ ತಂದೆಗಳು ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಸೇವಿ ಸಿದ ದೇವರುಗಳನ್ನು ತೊರೆದುಬಿಟ್ಟು ಕರ್ತನನ್ನೇ ನೀವು ಸೇವಿಸಿರಿ.
ಕರ್ತನ ಮಾರ್ಗಗಳನ್ನು ಕೈಕೊಂಡೆನು; ನಾನು ನನ್ನ ದೇವರನ್ನು ತೊರೆದುಬಿಡುವ ದುಷ್ಟತ್ವಮಾಡಲಿಲ್ಲ.
ಆತನು ನನ್ನನ್ನು ಕೊಂದರೂ ನಾನು ಆತನಲ್ಲಿ ಭರವಸೆ ಇಡುವೆನು, ಆದರೆ ನನ್ನ ಮಾರ್ಗ ಗಳನ್ನು ಉಳಿಸಿಕೊಳ್ಳುವೆನು.
ಆದರೆ ನಾನು ಹಿಡಿಯುವ ಮಾರ್ಗವನ್ನು ಆತನು ತಿಳಿದಿದ್ದಾನೆ, ನನ್ನನ್ನು ಶೋಧಿಸಿದಾಗ ನಾನು ಬಂಗಾರದ ಹಾಗೆ ಹೊರಗೆ ಬರುವೆನು.
ನಿಮ್ಮನ್ನು ನೀತಿವಂತರೆನ್ನುವದು ನನಗೆ ದೂರವಿರಲಿ; ನಾನು ಸತ್ತು ಹೋಗುವ ವರೆಗೂ ನನ್ನ ಯಥಾರ್ಥತ್ವವನ್ನು ನನ್ನಿಂದ ತೊಲ ಗಿಸುವದಿಲ್ಲ.
ನನ್ನ ಕಣ್ಣುಗಳೊಡನೆ ಒಡಂಬಡಿಕೆ ಮಾಡಿದೆನು; ಕನ್ನಿಕೆಯ ಮೇಲೆ ಲಕ್ಷ್ಯವಿಡುವದು ಹೇಗೆ?
ನನ್ನ ದೇವರಾದ ಓ ಕರ್ತನೇ, ನಾನು ಇದನ್ನು ಮಾಡಿದರೆ, ಅಂದರೆ ನನ್ನ ಕೈಗಳಲ್ಲಿ ಅಪರಾ ಧವಿದ್ದರೆ,
ಇದೆಲ್ಲಾ ನಮ್ಮ ಮೇಲೆ ಬಂತು; ಆದರೆ ನಿನ್ನನ್ನು ಮರೆತುಬಿಡಲಿಲ್ಲ; ನಿನ್ನ ಒಡಂಬಡಿಕೆಯಲ್ಲಿ ಸುಳ್ಳಾ ಡಲಿಲ್ಲ.
ಓ ಕರ್ತನೇ, ನಾನು ನಿನ್ನ ಮುಂದೆ ಸತ್ಯವಾಗಿಯೂ ಯಥಾರ್ಥ ಹೃದಯದಿಂದಲೂ ನಡೆದು ನಿನ್ನ ದೃಷ್ಟಿ ಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಪು ಮಾಡಿಕೋ ಎಂದು ಬೇಡಿಕೊಂಡು ವ್ಯಥೆಪಟ್ಟು ಅತ್ತನು.
ಆಗ ಪೌಲನು ಆಲೋಚನಾ ಸಭೆಯನ್ನು ದೃಷ್ಟಿಸಿ ನೋಡುತ್ತಾ--ಜನರೇ, ಸಹೋ ದರರೇ, ನಾನು ಈ ದಿನದ ವರೆಗೆ ದೇವರ ಮುಂದೆ ಒಳ್ಳೇಮನಸ್ಸಾಕ್ಷಿಯಿಂದ ಜೀವಿಸಿದ್ದೇನೆ ಎಂದು ಹೇಳಿದನು.
ಈ ವಿಷಯ ದೇವರ ಮುಂದೆಯೂ ಮನುಷ್ಯರ ಮುಂದೆಯೂ ಯಾವಾಗಲೂ ನಾನು ದೋಷರಹಿತವಾದ ಮನಸ್ಸಾಕ್ಷಿಯುಳ್ಳವನಾಗಿರುವಂತೆ ಅಭ್ಯಾಸಮಾಡಿಕೊಳ್ಳುತ್ತೇನೆ.
ಈ ಮಾತನ್ನು ನಾನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ; ಪವಿ ತ್ರಾತ್ಮನಲ್ಲಿ ನನ್ನ ಮನಸ್ಸಾಕ್ಷಿಯು ನನಗೆ ಸಾಕ್ಷಿ ಕೊಡುತ್ತದೆ.
ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಮನುಷ್ಯಜ್ಞಾನ ವಾಕ್ಯಗಳನ್ನು ನಾನು ಪ್ರಯೋಗಿಸದೆ ಆತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.
ಇವುಗಳನ್ನು ಮಾನುಷ್ಯಜ್ಞಾನವು ಕಲಿಸಿದ ಮಾತು ಗಳಿಂದ ಹೇಳದೆ ಪರಿಶುದ್ಧಾತ್ಮನು ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮ ಸಂಬಂಧವಾದವುಗಳನ್ನು ಆತ್ಮೀಕವಾದವುಗಳೊಂದಿಗೆ ಹೋಲಿಸುತ್ತೇವೆ.
ನಾನೇ ನಾನಾಗಿ ಏನೂ ತಿಳಿಯದವನಾಗಿದ್ದೇನೆ; ಆದಾಗ್ಯೂ ಅದರಿಂದ ನಾನು ನೀತಿವಂತನಾಗಲಿಲ್ಲ; ನನ್ನನ್ನು ವಿಚಾರಿಸುವಾತನು ಕರ್ತನೇ.
ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ.
ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
ಆದದರಿಂದ ನಾನು ಹೀಗೆ ಮನಸ್ಸು ಮಾಡಿದಾಗ ಹಗುರು ಭಾವನೆಯನ್ನು ತೋರಿಸಿದೆನೋ? ಇಲ್ಲವೆ ನಾನು ಉದ್ದೇಶಿಸದವು ಗಳು ಹೌದು, ಹೌದು ಅಂದ ಮೇಲೆ ಅಲ್ಲ, ಅಲ್ಲ ಅನ್ನುವಂತೆ ಮಾನುಷ್ಯ ರೀತಿಯಲ್ಲಿ ಉದ್ದೇಶಿಸು ತ್ತೇನೋ?
ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ
ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ.
ಯಾರು ನಮ್ಮನ್ನು ಶರೀರಾ ನುಸಾರವಾಗಿ ಎಣಿಸುತ್ತಾರೋ ಅವರಿಗೆ ದಿಟ್ಟತನವನ್ನು ತೋರಿಸಬೇಕೆಂದು ನಾನು ಯೋಚಿಸುತ್ತಾ ಇದ್ದೇನೆ: ನಾವು ನಿಮ್ಮಲ್ಲಿಗೆ ಬಂದಿರುವಾಗ ಅಂಥ ದಿಟ್ಟತನವನ್ನು ತೋರಿಸುವದಕ್ಕೆ ಅವಕಾಶವಾಗಬಾರದೆಂದು ನಿಮ್ಮನು ಬೇಡಿಕೊಳ್ಳುತ್ತೇನೆ.
ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಹೇಗೆ ಮೋಸ ಹೋದಳೋ ಹಾಗೆಯೇ ನಿಮ್ಮ ಮನಸ್ಸುಗಳು ಕ್ರಿಸ್ತನ ವಿಷಯದಲ್ಲಿರಬೇಕಾದ ಸರಳತೆಯನ್ನು ಬಿಟ್ಟು ಕೆಟ್ಟು ಹೋದೀತೆಂದು ನನಗೆ ಭಯವುಂಟು.
ನಾನಂತೂ ನನಗಿರುವದನ್ನು ನಿಮಗೋಸ್ಕರ ಅತಿ ಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರಿ.
ಪ್ರತಿಯೊಬ್ಬನು ತನ್ನ ಸ್ವಂತ ಕೆಲಸವನ್ನು ಪರಿಶೋಧಿ ಸಲಿ; ಆಗ ಅವನು ತನ್ನಲ್ಲಿಯೇ ಸಂತೋಷಪಡುವದಕ್ಕೆ ಆಸ್ಪದವಾಗುವದೇ ಹೊರತು ಮತ್ತೊಬ್ಬನಲ್ಲಿ ಅಲ್ಲ;
ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
ಉತ್ತಮ ಕಾರ್ಯ ಗಳು ಯಾವವೆಂದು ನೀವು ವಿವೇಚಿಸುವವರಾಗ ಬೇಕೆಂತಲೂ ಕ್ರಿಸ್ತನ ದಿನದವರೆಗೆ ನೀವು ಸರಳ ರಾಗಿಯೂ ನಿರ್ಮಲರಾಗಿಯೂ ಇರಬೇಕೆಂತಲೂ
ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ.
ಶುದ್ಧ ಹೃದಯದಿಂದಲೂ ಒಳ್ಳೇಮನಸ್ಸಾಕ್ಷಿ ಯಿಂದಲೂ ನಿಷ್ಕಪಟವಾದ ನಂಬಿಕೆಯಿಂದಲೂ ಉಂಟಾಗುವ ಪ್ರೀತಿಯೇ ಆಜ್ಞೆಯ ಅಂತ್ಯವಾಗಿದೆ.
ನಂಬಿಕೆಯನ್ನೂ ಒಳ್ಳೇ ಮನಸ್ಸಾಕ್ಷಿಯನ್ನೂ ಹಿಡಿದುಕೋ; ಕೆಲವರು ನಂಬಿಕೆ ಯನ್ನು ತಳ್ಳಿಬಿಟ್ಟು ಅದರ ವಿಷಯದಲ್ಲಿ ಹಡಗು ಒಡೆದ ವರಂತೆ ಇದ್ದಾರೆ;ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.
ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯಗಳ ಮಾದರಿಯಾಗಿ ತೋರಿಸಿಕೊಂಡು ಬೋಧನೆಯಲ್ಲಿ ನಿರ್ಮಲತ್ವವನ್ನೂ ಗೌರವವನ್ನೂ ಯಥಾರ್ಥತೆಯನ್ನೂ ಖಂಡಿಸಲಾಗದಂಥ ಸ್ವಸ್ಥವಾದ ಮಾತನ್ನೂ ತೋರಿಸು;
ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳ ಬೇಕೆಂದು ಅಪೇಕ್ಷಿಸುವವರಾದ ನಮಗೆ ಒಳ್ಳೇ ಮನಸ್ಸಾಕ್ಷಿ ಇದೆಯೆಂದು ನಂಬಿದ್ದೇವೆ.
ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.
ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.
ಒಳ್ಳೇಮನಸ್ಸಾಕ್ಷಿ ಯುಳ್ಳವರಾಗಿರ್ರಿ; ಆಗ ನೀವು ಕೆಟ್ಟದ್ದನ್ನು ಮಾಡುವವ ರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೆಪಡುವವರು.
ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ.