ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
Cross references
ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.
ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ.
ಯಾಕಂದರೆ ಯಾರಾರು ದೇವರ ಆತ್ಮನಿಂದ ನಡಿಸಲ್ಪಡುತ್ತಾರೋ ಅವರು ದೇವರ ಪುತ್ರರಾಗಿದ್ದಾರೆ.
ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ.
ಅದಕ್ಕಾಗಿಯೇ ನಮ್ಮನ್ನು ಸಿದ್ಧಮಾಡಿದ ದೇವರು ತಾನೇ ನಮಗೆ ಆತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.
ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನೂ ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವನ್ನು ತಿನ್ನುವದಕ್ಕೆ ನಾನು ಕೊಡು ವೆನು; ಇದಲ್ಲದೆ ಅವನಿಗೆ ಹೊಸ ಹೆಸರು ಬರೆದಿರುವ ಬಿಳೀ ಕಲ್ಲನ್ನು ಕೊಡುವೆನು ಅದನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿ
ನಾವು ನಮ್ಮ ದೇವರ ಸೇವಕರ ಹಣೆಗಳಲ್ಲಿ ಮುದ್ರಿಸುವ ತನಕ ಭೂಮಿಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದನು.
ಭೂಮಿಯ ಮೇಲಿರುವ ಹುಲ್ಲನ್ನಾಗಲೀ ಯಾವ ಹಸುರಾದ ದ್ದನ್ನಾಗಲೀ ಯಾವ ಮರವನ್ನಾಗಲೀ ಕೆಡಿಸದೆ ಹಣೆಯಮೇಲೆ ದೇವರ ಮುದ್ರೆಯಿಲ್ಲದ ಮನುಷ್ಯರನ್ನು ಮಾತ್ರ ಬಾಧಿಸಬೇಕೆಂದು ಅವುಗಳಿಗೆ ಅಪ್ಪಣೆಯಾಯಿತು.