Home Bibles 2 ಕೊರಿಂಥದವರಿಗೆ 1:22 · ಕನ್ನಡ ಬೈಬಲ್
2 ಕೊರಿಂಥದವರಿಗೆ 1:22 · ಕನ್ನಡ ಬೈಬಲ್

ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.

Cross references

ಯೋಹಾನ 6:27

ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.

ರೋಮಾಪುರದವರಿಗೆ 4:11

ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.

ರೋಮಾಪುರದವರಿಗೆ 8:9

ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ.

ರೋಮಾಪುರದವರಿಗೆ 8:14

ಯಾಕಂದರೆ ಯಾರಾರು ದೇವರ ಆತ್ಮನಿಂದ ನಡಿಸಲ್ಪಡುತ್ತಾರೋ ಅವರು ದೇವರ ಪುತ್ರರಾಗಿದ್ದಾರೆ.

ರೋಮಾಪುರದವರಿಗೆ 8:23

ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ.

2 ಕೊರಿಂಥದವರಿಗೆ 5:5

ಅದಕ್ಕಾಗಿಯೇ ನಮ್ಮನ್ನು ಸಿದ್ಧಮಾಡಿದ ದೇವರು ತಾನೇ ನಮಗೆ ಆತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.

ಎಫೆಸದವರಿಗೆ 1:13

ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.

ಎಫೆಸದವರಿಗೆ 4:30

ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.

2 ತಿಮೋಥೆಯ 2:19

ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.

ಪ್ರಕಟನೆ 2:17

ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನೂ ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವನ್ನು ತಿನ್ನುವದಕ್ಕೆ ನಾನು ಕೊಡು ವೆನು; ಇದಲ್ಲದೆ ಅವನಿಗೆ ಹೊಸ ಹೆಸರು ಬರೆದಿರುವ ಬಿಳೀ ಕಲ್ಲನ್ನು ಕೊಡುವೆನು ಅದನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿ

ಪ್ರಕಟನೆ 7:3

ನಾವು ನಮ್ಮ ದೇವರ ಸೇವಕರ ಹಣೆಗಳಲ್ಲಿ ಮುದ್ರಿಸುವ ತನಕ ಭೂಮಿಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದನು.

ಪ್ರಕಟನೆ 9:4

ಭೂಮಿಯ ಮೇಲಿರುವ ಹುಲ್ಲನ್ನಾಗಲೀ ಯಾವ ಹಸುರಾದ ದ್ದನ್ನಾಗಲೀ ಯಾವ ಮರವನ್ನಾಗಲೀ ಕೆಡಿಸದೆ ಹಣೆಯಮೇಲೆ ದೇವರ ಮುದ್ರೆಯಿಲ್ಲದ ಮನುಷ್ಯರನ್ನು ಮಾತ್ರ ಬಾಧಿಸಬೇಕೆಂದು ಅವುಗಳಿಗೆ ಅಪ್ಪಣೆಯಾಯಿತು.

Interlinear

Choose Theme