ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
Cross references
ಆಗ ಒಂದು ತಲಾಂತು ಹೊಂದಿದ್ದ ವನು ಬಂದು--ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು;
ಬಳಿಕ ಕೆಲವರು ಯೂದಾಯದಿಂದ ಬಂದು--ಮೋಶೆಯ ನೇಮದ ಪ್ರಕಾರ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶ ಮಾಡುತ್ತಿದ್ದರು.
ನಮ್ಮಿಂದ ಅಪ್ಪಣೆಹೊಂದದೆ ನಮ್ಮೊಳಗಿಂದ ಹೊರಟುಹೋದ ಕೆಲವರು--ನೀವು ಸುನ್ನತಿ ಮಾಡಿಸಿಕೊಂಡು ನ್ಯಾಯಪ್ರಮಾಣವನ್ನು ಅನುಸರಿಸಬೇಕೆಂದು ತಮ್ಮ ಮಾತುಗಳಿಂದ ನಿಮ್ಮನ್ನು ತೊಂದರೆಪಡಿಸಿ ನಿಮ್ಮ ಮನಸ್ಸುಗಳನ್ನು ಕಳವಳ ಗೊಳಿಸಿದ್ದಾರೆಂದು ಕೇಳಿದ್ದರಿಂದ
ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.
ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ
ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸಿಕೊಳ್ಳುವದಕ್ಕೆ ಮಾರ್ಪಡಿಸಿಕೊಳ್ಳುವದು ದೊಡ್ಡ ದಲ್ಲ. ಅವರ ಅಂತ್ಯವು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು.
ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಕಳವಳಪಡಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಪ್ರಯತ್ನಿಸುತ್ತಾರೆ.
ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋ ದರರು ನಮ್ಮನ್ನು ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯ ವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.
ಅವರು ನಿಮ್ಮನ್ನು ಮೆಚ್ಚಿಸುವದಕ್ಕೆ ಆಸಕ್ತರಾಗಿದ್ದಾರೆ; ಆದರೆ ಒಳ್ಳೇ ಅಭಿಪ್ರಾಯದಿಂದ ಅಲ್ಲ; ಹೌದು, ನೀವು ತಮ್ಮನ್ನೇ ಮೆಚ್ಚಿಸುವವರಾಗಬೇಕೆಂದು ನಿಮ್ಮನ್ನು ಅಗ ಲಿಸುವದಕ್ಕೆ ಅಪೇಕ್ಷಿಸುತ್ತಾರೆ.
ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡು ವವರೆಲ್ಲರೂ ತಮಗೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ಹಿಂಸೆಯಾಗಬಾರದೆಂಬದಕ್ಕಾಗಿಯೇ ಸುನ್ನತಿಮಾಡಿಸಿ ಕೊಳ್ಳಬೇಕೆಂದು ನಿಮ್ಮನ್ನು ಬಲಾತ್ಕರಿಸುತ್ತಾರೆ.
ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
ಕೆಲವರು ಹೊಟ್ಟೇಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಭಾವನೆಯಿಂದ ಬೇರೆ ಕೆಲವರು ಒಳ್ಳೇಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.
ನಾಯಿಗಳಿಗೆ ಎಚ್ಚರಿಕೆಯಾಗಿರ್ರಿ; ದುಷ್ಟ ಕೆಲಸದವರಿಗೆ ಎಚ್ಚರಿಕೆ ಯಾಗಿರ್ರಿ. ಅಂಗಚ್ಛೇದನೆಯ ವಿಷಯದಲ್ಲಿ ಎಚ್ಚರಿಕೆ ಯಾಗಿರ್ರಿ.
ಯಾರಾದರೂ ರಂಜನೆಯಾದ ಮಾತುಗಳಿಂದ ನಿಮ್ಮನ್ನು ಮೋಸಗೊಳಿಸಿಯಾರೆಂದು ನಾನು ಇದನ್ನು ಹೇಳುತ್ತೇನೆ.
ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನ ಬೋಧನೆ ಯಿಂದ ನಿಮ್ಮನ್ನು ಕೆಡಿಸಿಬಿಟ್ಟಾರು, ಎಚ್ಚರಿಕೆಯಾಗಿರ್ರಿ.
ಕಲ್ಪನಾ ಕಥೆ ಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ ಆಜ್ಞಾಪಿಸಬೇಕೆಂಬದಾಗಿ ನಾನು ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ನಂಬಿಕೆ ಯಿಂದುಂಟಾಗುವ ದೈವಭಕ್ತಿಯನ್ನು ವೃದ್ಧಿಮಾಡುವ
ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
ಯಾವನಾದರೂ ಬೇರೆ ವಿಧವಾದ ಉಪದೇಶ ವನ್ನು ಮಾಡಿ ಅಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ
ಅವರ ಮಾತು ವ್ರಣವ್ಯಾಧಿಯಂತೆ ತಿನ್ನುವದು; ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ;
ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು.
ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು.
ಅನೇಕರು ಅವರೊಳಗೆ ಮುಖ್ಯವಾಗಿ ಸುನ್ನತಿ ಯವರು ಅಧಿಕಾರಕ್ಕೆ ಒಳಗಾಗದವರೂ ವ್ಯರ್ಥವಾದ ಮಾತಿನವರೂ ಮೋಸಗಾರರೂ ಆಗಿದ್ದಾರೆ;
ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
ಚಿಕ್ಕ ಮಕ್ಕಳೇ, ಇದು ಕಡೇ ಗಳಿಗೆಯಾಗಿದೆ;ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ ಪ್ರಕಾರ ಈಗಲೂ ಕ್ರಿಸ್ತ ವಿರೋಧಿಗಳು ಬಹುಮಂದಿ ಇದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.
ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.
ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ
ನಿನ್ನ ಕ್ರಿಯೆಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ನಾನು ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು, ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ;
ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ.
ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು
ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.