ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸಿಕೊಳ್ಳುವದಕ್ಕೆ ಮಾರ್ಪಡಿಸಿಕೊಳ್ಳುವದು ದೊಡ್ಡ ದಲ್ಲ. ಅವರ ಅಂತ್ಯವು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು.
Cross references
ಆದರೆ ಅವನ ಸೇವಕರು ನಾಮಾನನ ಬಳಿಗೆ ಬಂದು ಅವನ ಸಂಗಡ ಮಾತನಾಡಿ--ನನ್ನ ತಂದೆಯೇ, ಪ್ರವಾದಿಯು ದೊಡ್ಡ ಕಾರ್ಯವನ್ನು ನಿನಗೆ ಹೇಳಿದ್ದರೆ ನೀನು ಮಾಡುತ್ತಿದ್ದಿಯಲ್ಲವೋ? ಅವನು ನಿನಗೆ ಸ್ನಾನಮಾಡಿ ಶುದ್ಧನಾಗೆಂದು ಹೇಳಿದರೆ ಅಡ್ಡಿ ಏನು ಅಂದರು.
ಆದದರಿಂದ ಕರ್ತನು ಇಸ್ರಾಯೇಲಿನಿಂದ ತಲೆಬಾಲಗಳನ್ನೂ ಕೊಂಬೆ ರೆಂಬೆಗಳನ್ನೂ ಒಂದು ದಿನದಲ್ಲಿ ಕತ್ತರಿಸಿ ಹಾಕುವನು.
ಆದರೆ ಕರ್ತನು ನಮಗೆ ಬಾಬೆಲಿನಲ್ಲಿ ಪ್ರವಾದಿ ಗಳನ್ನು ಎಬ್ಬಿಸಿದ್ದಾನೆಂದು ನೀವು ಹೇಳಿದ್ದರಿಂದ
ಸಮಾಧಾನ ವಿಲ್ಲದಿರುವಾಗ ಅವರು ಸಮಾಧಾನವೆಂದು ಹೇಳಿದ್ದರಿಂ ದಲೂ ಮತ್ತು ಇಗೋ, ಒಬ್ಬನು ಗೋಡೆಯನ್ನು ಕಟ್ಟಿದರೆ ಮತ್ತೊಬ್ಬನು ಅದಕ್ಕೆ ಸುಣ್ಣ ಹಚ್ಚಿದ್ದರಿಂದಲೂ
ನಾನು ಯಾವನನ್ನು ದುಃಖಪಡಿಸಲಿಲ್ಲವೋ ಆ ನೀತಿವಂತನ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿ ದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನ ದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕು ಮಾಡುವದನ್ನು ಬಿಡುವದಿಲ್ಲವೋ?
ನಾವು ನಿಮಗೋಸ್ಕರ ಆತ್ಮಸಂಬಂಧ ವಾದವುಗಳನ್ನು ಬಿತ್ತಿದ ಮೇಲೆ ನಿಮ್ಮಿಂದ ಶಾರೀರಿಕ ವಾದವುಗಳನ್ನು ಕೊಯ್ಯುವದು ದೊಡ್ಡದೋ?
ಅಪರಾಧ ನಿರ್ಣಯದ ಸೇವೆಯು ಪ್ರಭಾವದಿಂದಿರುವದಾದರೆ ನೀತಿಯ ಸೇವೆಯು ಎಷ್ಟೋ ಅಧಿಕವಾದ ಪ್ರಭಾವವುಳ್ಳದ್ದಾಗಿರಬೇಕು.
ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.
ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೆ ಸುವಾರ್ತೆಯನ್ನು ನಾವೇ ಆಗಲಿ ಪರಲೋಕದಿಂದ ಬಂದ ದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.
ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ.
ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.
ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
ತಮ್ಮ ದುರ್ನೀತಿಗೆ ಸರಿಯಾದ ದುಷ್ಪಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕ ರಾಗಿದ್ದು ಕಳಂಕಕ್ಕೂ ನಿಂದೆಗೂ ಕಾರಣರಾಗಿದ್ದಾರೆ.
ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ
ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.
ತಳವಿಲ್ಲದ ತಗ್ಗಿನ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರು.
ನಾನು ಕಂಡ ಮೃಗವು ಚಿರತೆಯಂತಿತ್ತು; ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು; ಅದಕ್ಕೆ ಘಟಸರ್ಪವು ತನ್ನ ಶಕ್ತಿಯನ್ನೂ ತನ್ನ ಆಸನವನ್ನು ಮಹಾ ಅಧಿಕಾರವನ್ನೂ ಕೊಟ್ಟಿತು.
ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.
ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು.
ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು.
ಆ ಸಾವಿರ ವರುಷಗಳು ತೀರಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವದು.