ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನೀರಿನ ಅಪಾಯಗಳು ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯ ಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳು ಸಹೋ ದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು.
Cross references
ಅನೇಕ ದಿವಸಗಳು ಹೋದಮೇಲೆ ಯೆಹೂ ದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿ ಕೊಂಡರು.
ತರುವಾಯ ಬಾರ್ನಬನು ಸೌಲನನ್ನು ಹುಡುಕುವದಕ್ಕಾಗಿ ತಾರ್ಸಕ್ಕೆ ಹೊರಟುಹೊಗಿ
ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.
ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.
ಅನ್ಯಜನರೂ ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳೊಂದಿಗೆ ಅಪೊಸ್ತಲರನ್ನು ಅವಮಾನಪಡಿಸುವದಕ್ಕೂ ಕಲ್ಲೆಸೆದು ಕೊಲ್ಲುವದಕ್ಕೂ ಪ್ರವರ್ತಿಸಿದಾಗ
ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.
ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಈ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು.
ಆದರೆ ಪೌಲನು ಸಹೋದರರಿಂದ ದೇವರ ಕೃಪೆಗೆ ಒಪ್ಪಿಸಲ್ಪಟ್ಟು ಸೀಲನನ್ನು ಆರಿಸಿಕೊಂಡು ಹೊರಟನು.ಅವನು ಸಭೆಗಳನ್ನು ದೃಢಪಡಿಸುತ್ತಾ ಸಿರಿಯ ಮತ್ತು ಕಿಲಿಕ್ಯಗಳ ಮಾರ್ಗವಾಗಿ ಹೋದನು.
ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.
ಗಲ್ಲಿಯೋನನು ಅಖಾಯದ ಪ್ರತಿನಿಧಿ ಯಾಗಿದ್ದಾಗ ಯೆಹೂದ್ಯರು ಒಮ್ಮನಸ್ಸಿನಿಂದ ಪೌಲನಿಗೆ ವಿರೋಧವಾಗಿ ಧಂಗೆ ಎಬ್ಬಿಸಿ ನ್ಯಾಯಸ್ಥಾನದ ಮುಂದೆ ಹಿಡುಕೊಂಡು ಬಂದು--
ಪೌಲನಿಗೆ ಹರಕೆಯಿದ್ದ ಕಾರಣ ಕೆಂಖ್ರೆಯದಲ್ಲಿ ತಲೆಬೋಳಿಸಿಕೊಂಡು ಅವನು ಅಲ್ಲಿ ಬಹಳ ಕಾಲ ಇದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಪ್ರಿಸ್ಕಿಲ್ಲ ಅಕ್ವಿಲ್ಲರ ಕೂಡ ಅಲ್ಲಿಂದ ಸಿರಿಯಾಕ್ಕೆ ಸಮುದ್ರ ಪ್ರಯಾಣಮಾಡಿ
ಇದಾದ ಮೇಲೆ ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮೇಲ್ಭಾ ಗದ ತೀರಗಳನ್ನು ದಾಟಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡನು.
ಅದೇ ಸಮಯದಲ್ಲಿ ಆ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.
ನಾನು ಬಹು ನಮ್ರತೆಯಿಂದಲೂ ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೆನು. ಇದರಲ್ಲಿ ಯೆಹೂದ್ಯರು ಹೊಂಚುಹಾಕಿದ್ದರಿಂದ ಸಂಕಷ್ಟಗಳು ಸಂಭವಿಸಿದವು.
ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯ ದಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲ ಯದಲ್ಲಿ ಕಂಡು ಜನರೆಲ್ಲರನ್ನು ಉದ್ರೇಕಿಸಿ ಅವನನ್ನು ಹಿಡಿದು--
ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು.
ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು.
ಅವನನ್ನು ಕೊಲ್ಲುವದಕ್ಕಾಗಿ ದಾರಿಯಲ್ಲಿ ಹೊಂಚು ಹಾಕುತ್ತಾ ಅವನನ್ನು ಯೆರೂಸಲೇಮಿನಿಂದ ಕರೆಯಿಸ ಬೇಕೆಂದು ಅವನಿಗೆ ವಿರೋಧವಾಗಿ ಬೇಡಿಕೊಂಡರು.
ಅವರು ಸಹ ನಮ್ಮನ್ನು ಬಹಳವಾಗಿ ಗೌರವಿಸಿ ಸನ್ಮಾನಿಸಿದರು; ನಾವು ಹೊರಟಾಗ ನಮಗೆ ಅವಶ್ಯ ವಾದವುಗಳನ್ನು ತಂದು ಹಡಗಿನಲ್ಲಿಟ್ಟರು.
ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
ನಾನು ಸ್ಪೇನ್ ದೇಶಕ್ಕೆ ಯಾವ ಸಮಯದಲ್ಲಿಯಾದರೂ ಪ್ರಯಾಣ ಕೈಕೊಂಡರೆ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನನ್ನ ಪ್ರಯಾಣದಲ್ಲಿ ನಾನು ನಿಮ್ಮನ್ನು ನೋಡುವೆನೆಂದು ಭರವಸವುಂಟು. ಇದಲ್ಲದೆ ಮೊದಲು ನಿಮ್ಮ ಅನ್ಯೋನ್ಯತೆಯಲ್ಲಿ ಸಂತೃಪ್ತನಾಗಿ ಮುಂದೆ ನನ್ನ ಮಾರ್ಗದಲ್ಲಿ ನಿಮ್ಮಿಂದ ಸಾಗಕ
ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧ ಮಾಡಿದ್ದು ಕೇವಲ ಮನುಷ್ಯರೀತಿಯಾಗಿದ್ದು ಸತ್ತವರು ಎದ್ದು ಬರುವದಿಲ್ಲವಾದರೆ ಅದರಿಂದ ನನಗೇನು ಪ್ರಯೋಜನ? ಹಾಗಾದರೆ ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.
ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು.
ದಮಸ್ಕದಲ್ಲಿ ಅರಸನಾದ ಅರೇತನ ಅಧೀನದಲ್ಲಿದ್ದ ಅಧಿಪತಿಯು ನನ್ನನ್ನು ಹಿಡಿಯಬೇಕೆಂದು ದಮಸ್ಕದವರ ಪಟ್ಟಣವನ್ನು ಸೈನ್ಯದೊಂದಿಗೆ ಕಾಯುತ್ತಿದ್ದನು.ಆಗ ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿ ಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು.
ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರಿಗಿ ದಮಸ್ಕಕ್ಕೆ ಬಂದೆನು.
ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋ ದರರು ನಮ್ಮನ್ನು ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯ ವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.
ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.