ಹೆಚ್ಚಳಪಡುವದು ಹೇಗೂ ವಿಹಿತವಲ್ಲ ದಿದ್ದರೂ ಅದು ನನಗೆ ಅವಶ್ಯವಾಗಿದೆ; ಆದದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳ ಮತ್ತು ಪ್ರಕಟನೆಗಳ ವಿಷಯವಾಗಿ ಹೇಳುತ್ತೇನೆ.
Cross references
ಆತನು--ನನ್ನ ಮಾತುಗಳನ್ನು ಈಗ ಕೇಳಿರಿ--ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಕರ್ತನಾದ ನಾನು ದರ್ಶನದಲ್ಲಿ ಅವನಿಗೆ ತಿಳಿಯಪಡಿಸುವೆನು, ಸ್ವಪ್ನದಲ್ಲಿ ಅವನ ಸಂಗಡ ಮಾತನಾಡುವೆನು.
ನಾನು ಸೆರೆಯವರ ಜೊತೆ ಕೆಬಾರ್ ನದಿಯ ಬಳಿಯಲ್ಲಿರುವಾಗ ಮೂವತ್ತ ನೆಯ ವರುಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆದದ್ದೇನಂದರೆ, ಆಕಾಶಗಳು ತೆರೆಯಲ್ಪ ಟ್ಟವು; ನಾನು ದೇವರ ದರ್ಶನಗಳನ್ನು ಕಂಡೆನು.
ಅನಂತರ ಆತ್ಮನು ನನ್ನನ್ನು ಎತ್ತಿ ದೇವರ ಆತ್ಮದಿಂದಾದ ದರ್ಶನದಿಂದ ಕಸ್ದೀಯರ ದೇಶಕ್ಕೆ ಸೆರೆಯವರ ಬಳಿಗೆ ಕರೆದುಕೊಂಡು ಹೋದನು; ಆಗ ನಾನು ನೋಡಿದ ದರ್ಶನವು ನನ್ನಿಂದ ಇಲ್ಲದೆ ಹೋಯಿತು.ಆಮೇಲೆ ಕರ್ತನು ನನಗೆ ತೋರಿಸಿದ ಎಲ್ಲಾ ಸಂಗತಿಗಳನ್ನು ಸೆರೆಯವರೊಂದಿಗೆ ನಾನು ಮಾತನಾಡಿದೆನು.
ನಾನು ನನ್ನ ಕಣ್ಣುಗಳನ್ನೆತ್ತಿ ಮೇಲಕ್ಕೆ ನೋಡಿದೆನು, ಆಗ ಇಗೋ, ನಾರುಮಡಿ ಯನ್ನು ಧರಿಸಿದ್ದ ಒಬ್ಬ ಮನುಷ್ಯನಿಗೆ ಆತನು ನಡುವು ಊಫಜಿನ ಉತ್ತಮ ಬಂಗಾರದಿಂದ ಕಟ್ಟಲ್ಪಟ್ಟಿತ್ತು.
ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.
ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು.
ಜನರಿಗೋಸ್ಕರ ಒಬ್ಬ ಮನುಷ್ಯನು ಸಾಯುವದು ಹಿತವೆಂದು ಯೆಹೂದ್ಯರಿಗೆ ಆಲೋಚನೆ ಹೇಳಿಕೊಟ್ಟ ಕಾಯಫನು ಇವನೇ.
ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ--ಅನನೀಯನೇ ಎಂದು ಅವನನ್ನು ಕರೆಯಲು ಅವನು--ಕರ್ತನೇ, ಇಗೋ, ಇದ್ದೇನೆ ಅಂದನು.
ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು.
ಇದಾದ ಮೇಲೆ ನಾನು ಯೆರೂಸಲೇಮಿಗೆ ತಿರಿಗಿ ಬಂದು ದೇವಾಲಯದಲ್ಲಿ ಪ್ರಾರ್ಥಿಸುತ್ತಾ ಪರವಶ ನಾಗಿದ್ದೆನು; ಆಗ--
ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.
ಓ ರಾಜನೇ, ನಾನು ದಾರಿಯಲ್ಲಿದ್ದಾಗ ಮಧ್ಯಾಹ್ನದಲ್ಲಿ ನನ್ನ ಮತ್ತು ನನ್ನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಸೂರ್ಯನ ಪ್ರಕಾಶಕ್ಕಿಂತ ಹೆಚ್ಚಾದ ಬೆಳಕು ಪರಲೋಕ ದಿಂದ ಪ್ರಕಾಶಿಸುತ್ತಿರುವದನ್ನು ನಾನು ಕಂಡೆನು.
ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ. ಆದರೆ ಎಲ್ಲವುಗಳು ವಿಹಿತವಾಗಿಲ್ಲ; ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತವಾಗಿವೆ, ಆದರೆ ನಾನು ಯಾವ ಅಧಿಕಾರಕ್ಕೂ ಒಳಪಡುವದಿಲ್ಲ.
ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ; ಆದರೆ ಎಲ್ಲವೂ ವಿಹಿತವಾಗಿರುವದಿಲ್ಲ; ಎಲ್ಲಾ ವಿಷಯಗಳು ನನಗೆ ನ್ಯಾಯಸಮ್ಮತವಾಗಿವೆ; ಆದರೆ ಎಲ್ಲವೂ ಭಕ್ತಿವೃದ್ಧಿಯನ್ನುಂಟು ಮಾಡುವದಿಲ್ಲ.
ಈ ಕಾರ್ಯವನ್ನು ಕುರಿತು ನನ್ನ ಅಭಿಪ್ರಾಯವನ್ನು ತಿಳಿಸುತ್ತೇನೆ; ಇದನ್ನು ಒಂದು ವರುಷದ ಹಿಂದೆ ನಡಿಸುವದಕ್ಕೆ ತೊಡಗುವದರಲ್ಲಿಯೂ ಅದನ್ನು ನಡಿಸಬೇಕೆಂದು ಮಾಡುವದರಲ್ಲಿಯೂ ನೀವು ಮುಂದಾಗಿದ್ದದರಿಂದ ಅದು ನಿಮಗೆ ವಿಹಿತವಾಗಿದೆ.
ನನ್ನನ್ನು ಬುದ್ಧಿಹೀನನೆಂದು ಯಾರೂ ನೆನಸಬಾರ ದೆಂದು ತಿರಿಗಿ ನಾನು ಹೇಳುತ್ತೇನೆ ಹಾಗೆ ನೆನಸಿದರೂ ನನ್ನನ್ನು ಬುದ್ಧಿಹೀನನಾಗಿಯಾದರೂ ಸೇರಿಸಿಕೊಳ್ಳಿರಿ; ಯಾಕಂದರೆ ನಾನು ಸಹ ಅಲ್ಪ ಸ್ವಲ್ಪ ಹೊಗಳಿಕೊಳ್ಳ ಬೇಕೆಂದಿದ್ದೇನೆ.
ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು.
ನಾನು ಹೀಗೆ ಹೊಗಳಿಕೊಳ್ಳುವದರಲ್ಲಿ ಬುದ್ಧಿಹೀನ ನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಏನೂ ಅಲ್ಲದವನಾದರೂ ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ ಯಾವದರಲ್ಲಿಯೂ ನಾನು ಕಡಿಮೆಯಾದವನಲ್ಲ.
ನಾನು ಅದನ್ನು ಮನುಷ್ಯ ನಿಂದ ಹೊಂದಲಿಲ್ಲ. ಇಲ್ಲವೆ ನನಗೆ ಯಾರೂ ಉಪದೇಶಿಸಲಿಲ್ಲ. ಆದರೆ ಯೇಸು ಕ್ರಿಸ್ತನಿಂದಲೇ ಅದು ನನಗೆ ಪ್ರಕಟವಾಯಿತು.
ಪ್ರಕಟನೆಗನುಸಾರವಾಗಿ ಅಲ್ಲಿಗೆ ಹೋಗಿ ಅನ್ಯಜನ ರಲ್ಲಿ ನಾನು ಸಾರುವ ಸುವಾರ್ತೆಯನ್ನು ಅಲ್ಲಿದ್ದವರಿಗೆ ತಿಳಿಸಿದೆನು; ಆದರೆ ನಾನು ಪಡುತ್ತಿರುವ ಪ್ರಯಾಸ ವಾಗಲಿ ಪಟ್ಟ ಪ್ರಯಾಸವಾಗಲಿ ನಿಷ್ಫಲವಾಗಬಾರ ದೆಂದು ಮಾನಿಷ್ಠರಿಗೆ ಏಕಾಂತದಲ್ಲಿ ತಿಳಿಸಿದೆನು.
ಇದುವರೆಗೆ ಗುಪ್ತವಾಗಿದ್ದದನ್ನು ಆತನು ಪ್ರಕಟನೆಯಿಂದ ನನಗೆ ಹೇಗೆ ತಿಳಿಸಿದನೆಂಬದನ್ನು ಮೊದಲು ನಾನು ನಿಮಗೆ ಸಂಕ್ಷೇಪವಾಗಿ ಬರೆದೆನು;
ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.