ಇಗೋ, ನಾನು ನಿಮ್ಮ ಬಳಿಗೆ ಬರುವದಕ್ಕೆ ಸಿದ್ಧವಾಗಿರುವದು ಇದು ಮೂರನೆಯ ಸಾರಿ; ನಾನು ನಿಮಗೆ ಭಾರವಾಗಿ ರುವದಿಲ್ಲ; ನಾನು ನಿಮ್ಮ ಸೊತ್ತನು ಆಶಿಸದೆ ನಿಮ್ಮನ್ನೇ ಆಶಿಸುತ್ತೇನೆ. ಯಾಕಂದರೆ ಮಕ್ಕಳು ತಂದೆತಾಯಿ ಗಳಿಗೋಸ್ಕರ ಆಸ್ತಿಯನ್ನು ಕೂಡಿಸಿಡುವದು ತಕ್ಕದ್ದಲ್ಲ, ತಂದೆತಾಯಿಗಳು ಮಕ
Cross references
ಕರ್ತನು ನನ್ನ ಯಜಮಾನನನ್ನು ಬಹಳವಾಗಿ ಆಶೀರ್ವದಿಸಿದ್ದರಿಂದ ಅವನು ದೊಡ್ಡವನಾದನು. ಆತನು ಅವನಿಗೆ ಕುರಿದನಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಟ್ಟಿದ್ದಾನೆ.
ಆಗ ರಾಹೇಲಳು ಮತ್ತು ಲೇಯಳು ಅವನಿಗೆ--ನಮ್ಮ ತಂದೆಯ ಮನೆಯಲ್ಲಿ ನಮಗೆ ಭಾಗವೂ ಬಾಧ್ಯತೆಯೂ ಇನ್ನೇನದೆ?
ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲು ವವನು ಜ್ಞಾನಿಯಾಗಿದ್ದಾನೆ.ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.
ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಡುವನು; ಪಾಪಿಯ ಸೊತ್ತು ನೀತಿ ವಂತರಿಗೆ ಇಡಲ್ಪಟ್ಟಿದೆ.
ಮನೆಯೂ ಐಶ್ವರ್ಯವೂ ಪಿತೃಗಳ ಸ್ವಾಸ್ಥ್ಯವು; ವಿವೇಕಿಯಾದ ಹೆಂಡತಿಯು ಕರ್ತ ನಿಂದಲೇ.
ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸು, ಪ್ರವಾದಿಸಿ ಅವರಿಗೆ ಹೀಗೆ ಹೇಳು--ದೇವರಾದ ಕರ್ತನು ಕುರುಬರಿಗೆ ಹೀಗೆ ಹೇಳುತ್ತಾನೆ--ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬ ರಿಗೆ ಅಯ್ಯೋ, ಕುರುಬರು ಮಂದೆಗಳನ್ನು ಮೇಯಿಸ ಬಾರದೋ?
ನಾನು ಯಾರ ಬೆಳ್ಳಿಯನ್ನಾಗಲಿ ಇಲ್ಲವೆ ಭಂಗಾರವನ್ನಾಗಲಿ ಇಲ್ಲವೆ ವಸ್ತ್ರವನ್ನಾಗಲಿ ಬಯಸಲಿಲ್ಲ.
ನಿಮ್ಮನ್ನು ನಾಚಿಕೆಪಡಿಸುವದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮ್ಮನ್ನು ಎಚ್ಚರಿಸುವ ದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ.
ಆದರೆ ಕರ್ತನ ಚಿತ್ತವಿದ್ದರೆ ನಾನು ಬೇಗ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿ ರುವವರ ಮಾತನ್ನಲ್ಲ, ಅವರ ಶಕ್ತಿಯನ್ನೇ ಗೊತ್ತು ಮಾಡಿಕೊಳ್ಳುವೆನು.
ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೆ ಪರ ಹಿತವನ್ನು ಚಿಂತಿಸಲಿ.
ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟ ಮಾಡಲಿ; ನೀವು ಕೂಡಿಬಂದದ್ದು ನ್ಯಾಯತೀರ್ಪಿಗೊಳಗಾಗು ವದಕ್ಕೆ ಕಾರಣವಾಗಬಾರದು. ಮಿಕ್ಕಾದ ಸಂಗತಿಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.
ನಾನು ಮಕೆದೋನ್ಯವನ್ನು ಹಾದು ಹೋಗುವಾಗ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನಾನು ಮಕೆದೋನ್ಯವನ್ನು ಹಾದು ಹೋಗಲೇಬೇಕು.
ಈ ಭರವಸದಿಂದ ನಿಮಗೆ ಎರಡನೆಯ ಪ್ರಯೋಜನವುಂಟಾಗುವಂತೆ ನಾನು ಮೊದಲು ನಿಮ್ಮ ಬಳಿಗೆ ಬರಬೇಕೆಂತಲೂ
ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು.
ಆದದರಿಂದ ಅತಿಪ್ರಿಯರೂ ಇಷ್ಟವಾದ ವರೂ ಆದ ನನ್ನ ಸಹೋದರರೇ, ನನ್ನ ಸಂತೋಷವೂ ಕಿರೀಟವೂ ಆಗಿರುವ ನನ್ನ ಅತಿ ಪ್ರಿಯರೇ, ಕರ್ತನಲ್ಲಿ ದೃಢವಾಗಿ ನಿಲ್ಲಿರಿ.
ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವೆನೆಂತಲ್ಲ ಆದರೆ ನಿಮ್ಮ ಲೆಕ್ಕಕ್ಕೆ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸು ತ್ತೇನೆ. ಆದರೆ ಬೇಕಾದದ್ದೆಲ್ಲ ನನಗುಂಟು, ಸಮೃದ್ಧಿ ಯಾಯಿತು.
ನಿಮಗೆ ತಿಳಿದಿ ರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ. ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವ ರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ.
ನೀವು ನಮಗೆ ಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳ ವರಾಗಿ ದೇವರ ಸುವಾರ್ತೆಯನ್ನು ಹೇಳುವದಕ್ಕೆ ಮಾತ್ರ ವಲ್ಲದೆ ನಿಮಗೋಸ್ಕರ ನಾವು ನಮ್ಮ ಪ್ರಾಣವನ್ನೇ ಕೊಡುವದಕ್ಕೆ ಇಷ್ಟವುಳ್ಳವರಾಗಿದ್ದೆವು.
ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ದಿ ಹೇಳುತ್ತಾ ಆದರಿಸುತ್ತಾ ಬಂದೆವು.
ನಮ್ಮ ಕರ್ತನಾದ ಯೇಸು ಕ್ರಿಸ್ತನು ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ ಇಲ್ಲವೆ ಆನಂದವೂ ಇಲ್ಲವೆ ಸಂತೋಷದ ಕಿರೀಟವೂ ಯಾವದು? ನೀವೇ ಅಲ್ಲವೇ?ನೀವೇ ನಮ್ಮ ಹೆಚ್ಚಳವೂ ಸಂತೋಷವೂ ಆಗಿದ್ದೀರಿ.
ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.