ಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
Cross references
ಹೀಗೆ ಮೋಶೆಯು ಕರ್ತನ ಬಳಿಗೆ ತಿರಿಗಿ ಹೋಗಿ ಹೇಳಿದ್ದೇನಂದರೆ, ಅಯ್ಯೋ, ಈ ಜನರು ದೊಡ್ಡ ಪಾಪವನ್ನು ಮಾಡಿದ್ದಾರೆ. ಅವರು ತಮಗೆ ಚಿನ್ನದ ದೇವರುಗಳನ್ನು ಮಾಡಿಕೊಂಡಿದ್ದಾರೆ.
ಆಗ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದೆನು; ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿತ್ತು; ಒಡಂಬಡಿ ಕೆಯ ಎರಡು ಹಲಗೆಗಳು ನನ್ನ ಎರಡು ಕೈಗಳಲ್ಲಿ ಇದ್ದವು.
ಹೀಗಿರಲಾಗಿ ಕರ್ತನು ನಿಮ್ಮನ್ನು ನಾಶಮಾಡು ತ್ತೇನೆಂದು ಹೇಳಿದ್ದರಿಂದ ನಾನು ಮುಂಚೆ ಬಿದ್ದುಕೊಂಡ ಹಾಗೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಕರ್ತನ ಮುಂದೆ ಬಿದ್ದಿದ್ದೆನು.
ಸಮುವೇಲನು ತಾನು ಸಾಯುವ ದಿವಸದ ವರೆಗೂ ಸೌಲನನ್ನು ತಿರಿಗಿ ನೋಡಲು ಬರಲಿಲ್ಲ. ಆದರೆ ಸಮುವೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿದ್ದ ಕೋಸ್ಕರ ಕರ್ತನು ಪಶ್ಚಾತ್ತಾಪಪಟ್ಟನು.
ನಾನು ಈ ಕಾರ್ಯವನ್ನು ಕೇಳಿದಾಗ ನನ್ನ ವಸ್ತ್ರವನ್ನೂ ನನ್ನ ನಿಲುವಂಗಿಯನ್ನೂ ಹರಿದು ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕಿತ್ತು ಭ್ರಮೆಗೊಂಡು ಕುಳಿತಿದ್ದೆನು.
ಎಜ್ರನು ಪ್ರಾರ್ಥಿಸಿ ಅರಿಕೆಮಾಡಿ ಅಳುತ್ತಾ ದೇವರ ಆಲಯದ ಮುಂದೆ ಬಿದ್ದಿರಲು ಇಸ್ರಾಯೇಲ್ಯರಲ್ಲಿ ಸ್ತ್ರೀಯರೂ ಪುರುಷರೂ ಮಕ್ಕಳೂ ಮಹಾ ದೊಡ್ಡ ಕೂಟವಾಗಿ ಅವನ ಬಳಿಯಲ್ಲಿ ಕೂಡಿಕೊಂಡರು. ಜನರು ಬಹಳವಾಗಿ ಅತ್ತರು.
ಅವರು ನಿನ್ನ ನ್ಯಾಯಪ್ರಮಾಣವನ್ನು ಕೈ ಕೊಳ್ಳದ ನಿಮಿತ್ತ ಹೊಳೆಗಳಂತೆ ನನ್ನ ಕಣ್ಣೀರು ಹರಿಯುತ್ತದೆ.
ಇಸ್ರಾಯೇಲಿನ ಮನೆತನದವರೇ,ಕರ್ತನು ನಿಮಗೆ ಹೇಳುವ ವಾಕ್ಯವನ್ನು ಕೇಳಿರಿ;
ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು.
ಯೇಸು ಪ್ರತ್ಯುತ್ತರ ವಾಗಿ--ಓ ನಂಬಿಕೆಯಿಲ್ಲದ ವಕ್ರಸಂತತಿಯೇ, ನಾನು ಎಷ್ಟು ಕಾಲ ನಿಮ್ಮೊಂದಿಗಿರಲಿ ಮತ್ತು ನಿಮ್ಮನ್ನು ಸಹಿಸಲಿ ಎಂದು ಹೇಳಿ--ನಿನ್ನ ಮಗನನ್ನು ಇಲ್ಲಿಗೆ ಕರಕೊಂಡು ಬಾ ಅಂದನು.
ಅದೇನಂದರೆ ನನ್ನ ಹೃದಯದಲ್ಲಿ ದೊಡ್ಡ ಭಾರವೂ ಎಡೆಬಿಡದ ದುಃಖವೂ ಉಂಟು.
ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
ನಿಮ್ಮಲ್ಲಿ ಜಾರತ್ವವಿದೆಯೆಂದು ಸಾಧಾರಣ ವಾಗಿ ಹೇಳಲ್ಪಟ್ಟಿದೆ; ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.
ಜಾರರ ಸಹವಾಸವನ್ನು ಮಾಡಬಾರದೆಂದು ಒಂದು ಪತ್ರಿಕೆಯಲ್ಲಿ ನಿಮಗೆ ಬರೆದಿದ್ದೆನು.
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳನ್ನು ನಾನು ತೆಗೆದುಬಿಟ್ಟು ಸೂಳೆಯ ಅಂಗಗಳಾಗ ಮಾಡಬಹುದೋ? ಹಾಗೆ ಎಂದಿಗೂ ಆಗಬಾರದು.
ಆದರೆ ನಾನು ತಿರಿಗಿ ನಿಮ್ಮ ಬಳಿಗೆ ದುಃಖದಿಂದ ಬರುವದಿಲ್ಲವೆಂದು ನನ್ನಲ್ಲಿ ತೀರ್ಮಾನಿಸಿಕೊಂಡೆನು.
ಆದರೂ ನಿಮಗೆ ದುಃಖವಾಯಿತೆಂದು ನಾನು ಸಂತೋಷಪಡದೆ ನೀವು ದುಃಖಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಈಗ ಸಂತೋಷ ಪಡುತ್ತೇನೆ; ಯಾಕಂದರೆ ನೀವು ದೇವರ ಚಿತ್ತಾನುಸಾರ ವಾಗಿ ದುಃಖಿಸಿದ್ದರಿಂದ ನಮ್ಮಿಂದ ಯಾವದರಲ್ಲಿಯೂ ನೀವು ನಷ್ಟಪಡಲಿಲ್ಲವಲ್ಲಾ.
ಆದಕಾರಣ ನಿಮ್ಮ ಪ್ರೀತಿಯನ್ನೂ ನಿಮ್ಮ ವಿಷಯವಾಗಿರುವ ನಮ್ಮ ಹೊಗಳಿ ಕೆಯನ್ನೂ ಇವರಿಗೂ ಸಭೆಗಳಿಗೂ ವ್ಯಕ್ತಪಡಿಸಿರಿ.
ಆದರೂ ನಾವು ನಿಮ್ಮನ್ನು ಹೊಗಳಿದ್ದು ವ್ಯರ್ಥವಾಗದೆ ನಾನು ಹೇಳಿದ ಪ್ರಕಾರವೇ ನೀವು ಸಿದ್ಧವಾಗಿರಬೇಕೆಂದು ಆ ಸಹೋದರರನ್ನು ಕಳುಹಿಸಿದ್ದೇನೆ.
ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು.
ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ--ನಾನು ತಿರಿಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವದಿಲ್ಲವೆಂದು ಹೇಗೆ ಹೇಳಿದೆನೋ ಹಾಗೆಯೇ ಈಗಲೂ ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುತ್ತಿರುವವರಿಗೂ ಮಿಕ್ಕಾದವರೆಲ್ಲರಿಗೂ ನಾನು ಬರೆಯುತ್ತೇನೆ.
ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ
ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ.
(ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ; ಅವರ ವಿಷಯದಲ್ಲಿ ನಾನು ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.
ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
ದೇವರ ಚಿತ್ತವೇನಂದರೆ, ನೀವು ಶುದ್ಧರಾಗಿರಬೇಕೆಂಬದೇ; ಆದದರಿಂದ ಹಾದರಕ್ಕೆ ದೂರವಾಗಿರಬೇಕು.
ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.
ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.
ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ.
ಬೇರೆಯವರನ್ನು ಬೆಂಕಿಯಿಂದ ಎಳಕೊಂಡು ಭಯದಿಂದ ರಕ್ಷಿಸಿರಿ. ಶರೀರದಿಂದ ಮೈಲಿಗೆಯಾದ ಅಂಗಿಯನ್ನು ಹಗೆಮಾಡಿರಿ.
ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.
ಇವುಗಳನ್ನು ಸಾಕ್ಷೀಕರಿಸುವಾತನು--ಖಂಡಿತ ವಾಗಿ ನಾನು ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಆಮೆನ್. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.