ಕಡೇ ಮಾತೇನಂದರೆ ಸಹೋದರರೇ, ನಿಮಗೆ ಶುಭವಾಗಲಿ. ಸಂಪೂರ್ಣರಾಗಿರ್ರಿ; ಆದರಣೆ ಹೊಂದಿದವರಾಗಿರ್ರಿ, ಒಂದೇ ಮನಸ್ಸುಳ್ಳವರಾಗಿರ್ರಿ, ಸಮಾಧಾನದಲ್ಲಿ ಜೀವಿಸಿರಿ; ಆಗ ಪ್ರೀತಿಯುಳ್ಳ ಶಾಂತಿಯ ದೇವರು ನಿಮ್ಮ ಸಂಗಡ ಇರುವನು.
Cross references
ತಮ್ಮ ತಂದೆಯು ಅವನನ್ನು ಅವನ ಎಲ್ಲಾ ಸಹೋದರರಿಗಿಂತ ಹೆಚ್ಚು ಪ್ರೀತಿ ಮಾಡುತ್ತಾನೆಂದು ಅವನ ಸಹೋದರರು ನೋಡಿ ಅವನನ್ನು ದ್ವೇಷಿಸಿ ಅವನ ಸಂಗಡ ಸಮಾಧಾನವಾಗಿ ಮಾತಾಡಲಾರದೆ ಇದ್ದರು.
ಅವನು ಅವರಿಗೆ--ಮಾರ್ಗದಲ್ಲಿ ಜಗಳವಾಡಬೇಡಿರಿ ಎಂದು ಅವರಿಗೆ ಹೇಳಿದ ಮೇಲೆ ಅವರು ಹೋದರು.
ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ.
ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು.
ಆಗ ಯೇಸು ನಿಂತುಕೊಂಡು ಅವನನ್ನು ಕರೆಯಬೇಕೆಂದು ಆಜ್ಞಾಪಿಸಲು ಅವರು ಆ ಕುರುಡನನ್ನು ಕರೆದು--ಸಮಾಧಾನವಾಗಿರು; ಏಳು, ಆತನು ನಿನ್ನನ್ನು ಕರೆಯುತ್ತಾನೆ ಎಂದು ಅವನಿಗೆ ಹೇಳಿದರು.
ಇದಲ್ಲದೆ ಮತ್ತೊಬ್ಬನು ಸಹ--ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುವೆನು; ಆದರೆ ನಾನು ಮೊದಲು ಹೋಗಿ ನನ್ನ ಮನೆಯಲ್ಲಿದ್ದವರಿಗೆ ಬೀಳ್ಕೊಡುವಂತೆ ನನಗೆ ಅಪ್ಪಣೆಕೊಡು ಅಂದನು.ಆಗ ಯೇಸು ಅವನಿಗೆ--ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು.
ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ (ಇರುವಂತೆ) ಅವರೂ ಒಂದಾಗಿ ಪರಿಪೂರ್ಣರಾಗಿ ರುವರು; ನೀನು ನನ್ನನ್ನು ಕಳುಹಿಸಿದ್ದೀ ಎಂತಲೂ ನನ್ನನ್ನು ಪ್ರೀತಿ ಮಾಡಿದಂತೆ ಅವರನ್ನು ನೀನು ಪ್ರೀತಿಮಾಡಿದ್ದೀ ಎಂತಲೂ ಲೋಕವು ತಿಳಿದುಕೊಳ್ಳುವದು.
ಏನಂದರೆ ವಿಗ್ರಹಗಳಿಗೆ ಅರ್ಪಿಸಿದ ಭೋಜನ ಪದಾರ್ಥಗಳನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ಜಾರತ್ವವನ್ನೂ ನೀವು ವಿಸರ್ಜಿಸಬೇಕೆಂಬದೇ. ಇವುಗಳಿಂದ ನಿಮ್ಮನ್ನು ನೀವು ಕಾಪಾಡಿಕೊಂಡರೆ ನಿಮಗೆ ಒಳ್ಳೇದಾಗುವದು. ನಿಮಗೆ ಶುಭವಾಗಲಿ.
ಯೆರೂಸಲೇಮಿನಲ್ಲಿ ಬರುವ ಈ ಹಬ್ಬಕ್ಕೆ ನಾನು ಹೇಗಾದರೂ ಅಲ್ಲಿ ಇರತಕ್ಕದ್ದು; ದೇವರ ಚಿತ್ತವಾದರೆ ನಾನು ಹಿಂದಿರುಗಿ ನಿಮ್ಮ ಬಳಿಗೆ ಬರುತ್ತೇನೆ ಎಂದು ಹೇಳಿ ಅವರ ಅಪ್ಪಣೆ ತಕ್ಕೊಂಡು ಎಫೆಸದಿಂದ ಸಮುದ್ರ ಪ್ರಯಾಣಮಾಡಿ ದನು.
ಯೆಹೂದ್ಯರು ಹೇಗೆ ಆ ಮನುಷ್ಯನಿಗಾಗಿ ಹೊಂಚುಹಾಕುತ್ತಿದ್ದಾರೆಂದು ನನಗೆ ತಿಳಿದಾಗ ಕೂಡಲೇ ಅವನನ್ನು ನಾನು ನಿನ್ನ ಬಳಿಗೆ ಕಳುಹಿಸಿ ಅವನ ಮೇಲೆ ತಪ್ಪು ಹೊರಿಸುವವರು ಅವನಿಗೆ ವಿರೋಧವಾಗಿ ಮಾತನಾಡುವದನ್ನು ನಿನ್ನ ಮುಂದೆಯೇ ಹೇಳಬೇಕೆಂದು ಅವರಿಗೆ ಸಹ ನಾನು ಅಪ್ಪಣೆಕೊಟ್ಟೆನು; ಶ
ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.
ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ.
ಆದದರಿಂದ ನಾವು ಸಮಾಧಾನವನ್ನುಂಟು ಮಾಡುವವುಗಳನೂ ಪರಸ್ಪರ ಭಕ್ತಿವೃದ್ಧಿಯನ್ನುಂಟು ಮಾಡುವವುಗಳನ್ನೂ ಅನುಸರಿಸೋಣ.
ನೀವು ಕ್ರಿಸ್ತ ಯೇಸು ವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ತಾಳ್ಮೆಯೂ ಆದರಣೆಯೂ ಉಳ್ಳ ದೇವರು ನಿಮಗೆ ಅನುಗ್ರಹಿಸಲಿ.
ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
ಶಾಂತಿದಾಯಕನಾದ ದೇವರು ನಿಮ್ಮೆಲ್ಲರೊಂದಿಗಿ ರಲಿ. ಆಮೆನ್.
ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವ ರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ.
ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ. ಇದಲ್ಲದೆ ನೀವು ಪರಿ ಪೂರ್ಣತೆಗೆ ಬರಬೇಕೆಂಬದೇ ನಮ್ಮ ಇಷ್ಟ.
ಕರ್ತನಾದ ಯೇಸುಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ. ಆಮೆನ್.
ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿ ಕೊಳ್ಳುವದಕ್ಕೆ ಆಸಕ್ತರಾಗಿರ್ರಿ.
ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯು ನಂಬಿಕೆಯಿಂದ ಕೂಡಿದ ಪ್ರೀತಿಯು ಸಹೋದರರಿಗೆ ಇರಲಿ.ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಯಥಾರ್ಥವಾಗಿ ಪ್ರೀತಿಸುವವರೆಲ್ಲರ ಮೇಲೆ ಕೃಪೆಯು ಇರಲಿ. ಆಮೆನ್.
ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿ ದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ಒಂದೇ ಆತ್ಮದಲ್ಲಿ ದೃಢ ವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೊಸ್ಕರ ಐಕ್ಯಮತ್ಯದಿಂದಲೂ ಒಂದೇ ಮನಸ್ಸಿನಿಂದಲೂ ಹೆ
ಕ್ರಿಸ್ತನಲ್ಲಿ ಆದರಣೆ, ಪ್ರೀತಿಯ ಸಂತೈಸುವಿಕೆ, ಆತ್ಮನ ಅನ್ಯೋನ್ಯತೆ, ದಯಾ ವಾತ್ಸಲ್ಯಗಳು ಇರುವದಾದರೆ
ಆದಾಗ್ಯೂ ಈಗಾ ಗಲೇ ನಾವು ಯಾವದನ್ನು ಹೊಂದಿಕೊಂಡಿದ್ದೇವೋ ಅದೇ ಸೂತ್ರವನ್ನು ಅನುಸರಿಸಿ ನಡೆದುಕೊಳ್ಳುತ್ತಾ ಒಂದೇ ಮನಸ್ಸುಳ್ಳವರಾಗಿರೋಣ.
ಕರ್ತನಲ್ಲಿ ಒಂದೇ ಮನಸ್ಸುಳ್ಳವರಾಗಿರಬೇಕೆಂದು ಯುವೊದ್ಯಳನ್ನೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.
ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ.
ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಆಗ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.
ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ.
ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
ಇದಲ್ಲದೆ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿ ಯಿಂದ ಬಹಳವಾಗಿ ಸನ್ಮಾನ ಮಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ; ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರ್ರಿ.
ಯಾವಾಗಲೂ ಸಂತೋಷಿಸಿರಿ;
ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ.
ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲ ದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.
ಯೌವನದ ಇಚ್ಚೆಗಳಿಂದ ಸಹ ಓಡಿಹೋಗು; ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳು ವವರ ಸಂಗಡ ನೀತಿ ವಿಶ್ವಾಸ ಪ್ರೀತಿ ಸಮಾಧಾನ ಇವುಗಳನ್ನು ಅನುಸರಿಸು.
ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.
ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು