ಸತ್ಯಕ್ಕೆ ವಿರುದ್ಧವಾಗಿ ನಾವೇನು ಮಾಡದೆ ಸತ್ಯಕ್ಕಾಗಿಯೇ ಮಾಡುತ್ತೇವೆ.
Cross references
ಆಗ ಮೋಶೆಯು--ಈ ಕಾರ್ಯಗಳನ್ನೆಲ್ಲಾ ಮಾಡುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ; ಅವು ಗಳು ನನ್ನ ಸ್ವಂತ ಆಲೋಚನೆಗಳಂತೆ ಮಾಡಲಿಲ್ಲವೆಂದು ನೀವು ಇದರಿಂದ ತಿಳುಕೊಳ್ಳುವಿರಿ.
ಅದಕ್ಕೆ ವಿಾಕಾಯೆಹುವು ನೀನು ಸಮಾ ಧಾನದಿಂದ ತಿರಿಗಿ ನಿಜವಾಗಿ ಬಂದರೆ ಕರ್ತನು ನನ್ನ ಮುಖಾಂತರ ಮಾತನಾಡಿದ್ದಿಲ್ಲವೆಂದು ಜನರೇ, ನೀವೆ ಲ್ಲರೂ ಕೇಳಿರಿ ಅಂದನು.
ಆಗ ಅರಸನು ಐವತ್ತು ಮಂದಿಗೆ ಪ್ರಧಾನನನ್ನು ಅವನ ಐವತ್ತು ಮಂದಿಯ ಸಂಗಡ ಇವನ ಬಳಿಗೆ ಕಳುಹಿಸಿದನು. ಅವನು ಇವನ ಬಳಿಗೆ ಹೋದಾಗ ಇಗೋ, ಇವನು ಬೆಟ್ಟದ ತುದಿಯ ಮೇಲೆ ಕುಳಿತಿದ್ದನು. ಆಗ ಅವನು ಎಲೀಯನಿಗೆ--ದೇವರ ಮನುಷ್ಯನೇ, ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು.
ಅವನು ಆ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋದನು. ಅವನು ಮಾರ್ಗದಲ್ಲಿ ಏರಿ ಹೋಗುತ್ತಿ ರುವಾಗ ಚಿಕ್ಕ ಹುಡುಗರು ಪಟ್ಟಣದಿಂದ ಹೊರಟು ಬಂದು ಅವನನ್ನು ಹಾಸ್ಯಮಾಡಿ ಅವನಿಗೆ--ಬೋಳ ತಲೆಯವನೇ, ಏರಿ ಹೋಗು; ಬೋಳ ತಲೆಯವನೇ, ಏರಿ ಹೋಗು ಅಂದರು.
ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
ಅಲೆದಾಡುವ ಪಕ್ಷಿಯಂತೆಯೂ ಹಾರಾ ಡುವ ಬಾನಕ್ಕಿಯಂತೆಯೂ ಕಾರಣವಿಲ್ಲದ ನಾಶವು ಬರುವದಿಲ್ಲ.
ಆದರೆ ಯೇಸು--ಅವನಿಗೆ ಅಡ್ಡಿಮಾಡಬೇಡಿರಿ; ಯಾಕಂದರೆ ನನ್ನ ಹೆಸರಿನಲ್ಲಿ ಅದ್ಭುತಕಾರ್ಯವನ್ನು ಮಾಡಿ ನನ್ನ ವಿಷಯದಲ್ಲಿ ಹಗುರಾಗಿ ಕೆಟ್ಟದ್ದನ್ನು ಮಾತನಾಡುವ ಒಬ್ಬನಾದರೂ ಇಲ್ಲ.
ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು;
ಆಗ ಯೋಹಾನನು--ಬೋಧಕನೇ, ಒಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನಿಗೆ ಅಡ್ಡಿಮಾಡಿದೆವು; ಯಾಕಂದರೆ ಅವನು ನಮ್ಮೊಂದಿಗೆ (ನಿನ್ನನ್ನು) ಹಿಂಬಾಲಿ ಸುವದಿಲ್ಲ ಅಂದನು.
ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
ಆದರೆ ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿಯಾದ ಸಪ್ಫೈರಳೊಂದಿಗೆ ತನ್ನ ಒಂದು ಆಸ್ತಿಯನ್ನು ಮಾರಿ
ಆಗ ಅವರು ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ಅವರನ್ನು ಕಳುಹಿಸಿ ಕೊಟ್ಟರು.
ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದದರಿಂದ
ನೀವೂ ನನ್ನಾತ್ಮವೂ ಕರ್ತನಾದ ಯೇಸುವಿನ ಸಾಮರ್ಥ್ಯ ಸಹಿತ ಒಟ್ಟುಗೂಡಿ ಬಂದಿರಲಾಗಿ
ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾನು ನಾಚಿಕಪಡುವದಿಲ್ಲ; ಆದರೆ ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಭಕ್ತವೃದ್ಧಿಗಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟನು.
ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ; ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರ ಬಾರದೆಂದು ಅಪೇಕ್ಷಿಸುತ್ತೇನೆ.
ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.
ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.