ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
Cross references
ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳು ವದಕ್ಕೂ ಬಹಿರಂಗವಾಗಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗೆಯದೆ
ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.
ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ.
ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ
ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
ನಂಬಿಕೆಯನ್ನೂ ಒಳ್ಳೇ ಮನಸ್ಸಾಕ್ಷಿಯನ್ನೂ ಹಿಡಿದುಕೋ; ಕೆಲವರು ನಂಬಿಕೆ ಯನ್ನು ತಳ್ಳಿಬಿಟ್ಟು ಅದರ ವಿಷಯದಲ್ಲಿ ಹಡಗು ಒಡೆದ ವರಂತೆ ಇದ್ದಾರೆ;ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.
ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
ಪ್ರಯಾಸ ಪಡುವ ವ್ಯವಸಾಯಗಾರನು ಫಲಗಳಲ್ಲಿ ಮೊದಲನೆಯ ದಾಗಿ ಪಾಲುಗಾರನಾಗಿರತಕ್ಕದ್ದು.
ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು.
ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿಗಳನ್ನು ಮುಚ್ಚಿಸತಕ್ಕದ್ದು.
ನಂಬಿಕೆ ಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತ ದೇಶವನ್ನು ತೊರೆದುಬಿಟ್ಟನು. ಯಾಕಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.
ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.
ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ
ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು
ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು
ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.