ನಮಗೆ ಇಂಥ ನಿರೀಕ್ಷೆ ಇರುವಲ್ಲಿ ನಾವು ಅತಿ ಸ್ಪಷ್ಟವಾಗಿ ಮಾತನಾಡುತ್ತೇವೆ.
Cross references
ಆಗ ಯೆಹೂದ್ಯರು ಆತನ ಸುತ್ತಲು ಬಂದು ಆತನಿಗೆ--ಇನ್ನು ಎಷ್ಟರ ವರೆಗೆ ನಮ್ಮನ್ನು ಸಂದೇಹಪಡಿಸುತ್ತೀ? ನೀನು ಕ್ರಿಸ್ತ ನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು ಅಂದರು.
ಇವುಗಳನ್ನು ನಾನು ಸಾಮ್ಯಗಳಿಂದ ನಿಮಗೆ ಹೇಳಿದ್ದೇನೆ; ಆದರೆ ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯ ನಿಮಗೆ ಸ್ಪಷ್ಟವಾಗಿ ತಿಳಿಸುವ ಸಮಯ ಬರುತ್ತದೆ.
ಆತನ ಶಿಷ್ಯರು ಆತನಿಗೆ--ಇಗೋ, ಈಗ ನೀನು ಸಾಮ್ಯರೂಪದಲ್ಲಿ ಮಾತನಾಡದೆ ಸ್ಪಷ್ಟವಾಗಿಯೇ ಮಾತನಾಡುತ್ತೀ.
ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು.
ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ
ಆದರೆ ಬಾರ್ನಬನು ಅವನನ್ನು ಅಪೊಸ್ತಲರ ಬಳಿಗೆ ಕರೆದುಕೊಂಡು ಹೋಗಿ ಅವನು ಹೇಗೆ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ ಆತನು ಅವನ ಸಂಗಡ ಮಾತನಾಡಿ ದ್ದನ್ನೂ ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿದ್ದನ್ನೂ ಅವರಿಗೆ ವಿವರವಾಗಿ ತಿಳಿಯಪಡಿಸಿದನು.
ಕರ್ತನಾದ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿ ಗ್ರೀಕರೊಂದಿಗೆ ತರ್ಕಿಸುತ್ತಿ ದ್ದನು. ಆದರೆ ಅವರು ಅವನನ್ನು ಕೊಲ್ಲುವದಕ್ಕೆ ಪ್ರಯತ್ನ ಮಾಡಿದರು.
ಹೀಗಿರಲಾಗಿ ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ ಅದ್ಭುತಕಾರ್ಯ ಗಳೂ ಆಗುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟದ್ದರಿಂದ ಅವರು ಬಹುಕಾಲ ಅಲ್ಲಿದ್ದು ಆತನಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದರು.
ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತುಸಾವಿರ ಮಾತು ಗಳನ್ನಾಡುವದಕ್ಕಿಂತ ನನ್ನ ಬುದ್ಧಿಯಿಂದ ಐದೇ ಮಾತು ಗಳನ್ನಾಡಿ ಇತರರಿಗೆ ಉಪದೇಶಮಾಡುವದು ನನಗೆ ಇಷ್ಟವಾದದ್ದು.
ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ
ಹೀಗಿದ್ದರೂ--ನಾನು ನಂಬಿದೆನು, ಆದದರಿಂದ ಮಾತನಾಡಿದೆನು ಎಂದು ಬರೆಯಲ್ಪಟ್ಟಿರುವ ಪ್ರಕಾರ ನಂಬಿಕೆಯ ಆತ್ಮವನ್ನೇ ಹೊಂದಿ ನಾವು ಸಹ ನಂಬುತ್ತೇವೆ; ಆದದರಿಂದ ಮಾತನಾಡುತ್ತೇವೆ.
ನಿಮ್ಮೊಂದಿಗೆ ಮಾತನಾಡು ವದಕ್ಕೆ ನನಗೆ ಬಹಳ ಧೈರ್ಯವೂ ನಿಮ್ಮ ವಿಷಯದಲ್ಲಿ ನನಗೆ ಬಹಳ ಹೆಚ್ಚಳವೂ ಉಂಟು; ನಾನು ಆದರಣೆ ಯಿಂದ ತುಂಬಿದವನಾಗಿ ನಮಗಾಗುವ ಎಲ್ಲಾ ಸಂಕಟಗಳಲ್ಲಿ ಅತ್ಯಧಿಕವಾದ ಸಂತೋಷದಿಂದ ಇದ್ದೇನೆ.
ನಿಮ್ಮೆದುರಿನಲ್ಲಿರುವಾಗ ದೀನನಾಗಿಯೂ ದೂರದಲ್ಲಿರುವಾಗ ನಿಮ್ಮ ಕಡೆಗೆ ದಿಟ್ಟತನ ತೋರಿಸುವವನಾಗಿಯೂ ಆಗಿದ್ದಾನೆಂದು ನೀವು ತಿಳಿಯುವ ಪೌಲನೆಂಬ ನಾನೇ ಕ್ರಿಸ್ತನ ಶಾಂತ ಮನಸ್ಸಿನಿಂದಲೂ ಸಾತ್ವಿಕತ್ವದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.
ನಾನು ಅದನ್ನು ಹೇಳಬೇಕಾದ ರೀತಿಯಲ್ಲಿ ಪ್ರಕಟಿಸುವಂತೆ ಅನುಗ್ರಹ ಮಾಡಬೇಕೆಂದು ಬೇಡಿಕೊಳ್ಳಿರಿ;
ಫಿಲಿಪ್ಪಿ ಪಟ್ಟಣದಲ್ಲಿ ನಮಗೆ ಹಿಂಸೆ ಮತ್ತು ಅವಮಾನವು ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನು ನೀವು ಬಲ್ಲಿರಿ.
ಸಭಾಸೇವಕರಾಗಿ ಚೆನ್ನಾಗಿ ಕೆಲಸಮಾಡಿದವರು ತಮಗೆ ಒಳ್ಳೇ ಪದವಿಯನ್ನೂ ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹು ಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.