ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
Cross references
ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಇವುಗಳನ್ನು ಹೇಳಿದನು.
ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
ಹೀಗೆ ಶರೀರಕ್ಕನುಸಾರ ವಾಗಿ ನಡೆಯದೆ ಆತ್ಮನಿಗನುಸಾರವಾಗಿ ನಡೆಯುವವ ರಾದ ನಮ್ಮಲ್ಲಿ ನ್ಯಾಯಪ್ರಮಾಣದ ನೀತಿಯು ನೆರ ವೇರುವದು.
ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.
ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ತರುವಾಯ ಮುಖಾಮುಖಿ ಯಾಗಿ ನೋಡುವೆವು; ಈಗ ನಾನು ಅಪೂರ್ಣವಾಗಿ ತಿಳಿದಿದ್ದೇನೆ. ತರುವಾಯ ದೇವರು ನನ್ನನ್ನು ತಿಳಿದು ಕೊಂಡಂತೆಯೇ ನಾನೂ ತಿಳಿದುಕೊಳ್ಳುತ್ತೇನೆ.ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾ ತನ ಸಾರೂಪ್ಯವನ್ನೂ ಧರಿಸಿಕೊಳ್ಳುವೆವು.
ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.
ಕ್ರಿಸ್ತ ಯೇಸುವಿನಲ್ಲಿ ಸುನ್ನತಿಯಾಗುವದರಿಂದ ಏನೂ ಪ್ರಯೋಜನವಿಲ್ಲ, ಸುನ್ನತಿಯಾಗದೆ ಇರುವದ ರಿಂದಲೂ ಏನೂ ಪ್ರಯೋಜನವಿಲ್ಲ; ಆದರೆ ಹೊಸ ಸೃಷ್ಟಿಯೇ ಬೇಕು.
ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು.
ನೀವು ನೂತನ ಮನುಷ್ಯನನ್ನು ಧರಿಸಿಕೊಂಡವರಾಗಿದ್ದೀರಿ ಅವನನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ಜ್ಞಾನದಲ್ಲಿ ಅವನು ನೂತನವಾಗುತ್ತಾನೆ.
ಈ ಬೋಧನೆಯು ಸ್ತುತ್ಯನಾದ ದೇವರ ಮಹಿಮೆಯ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯು ನನ್ನ ವಶಕ್ಕೆ ಕೊಡಲ್ಪಟ್ಟಿತು.
ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
ಯಾವನಾದರೂ ವಾಕ್ಯವನ್ನು ಕೇಳುವವ ನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು.
ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ