ಆದರೆ ಮರಣದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು; ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿ ಹೋಗುವಂಥ ದ್ದಾಗಿದ್ದರೂ ಅದರ ನಿಮಿತ್ತ ಇಸ್ರಾಯೇಲ್ಯರು ಅವನ ಮುಖವನ್ನು ದೃಷ್ಟಿಸಿ ನೋಡಲಾರದೆ ಇದ್ದರು.
Cross references
ಕರ್ತನಾದ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ಅವರಿಗೆ ತೊಡಿಸಿದನು.
ಕರ್ತನು ಮೋಶೆಗೆ--ಬೆಟ್ಟವನ್ನೇರಿ ನನ್ನ ಬಳಿಗೆ ಬಂದು ಅಲ್ಲೇ ಇರು. ನಾನು ನಿನಗೆ ಕಲ್ಲಿನ ಹಲಗೆಗಳನ್ನು ಅವರಿಗೆ ಕಲಿಸುವದಕ್ಕೋಸ್ಕರ ನಾನು ಬರೆದ ನ್ಯಾಯ ಪ್ರಮಾಣವನ್ನು ಆಜ್ಞೆಗೆಳನ್ನು ಕೊಡುವೆನು ಎಂದು ಹೇಳಿದನು.
ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.
ಆಗ ಮೋಶೆಯು ತಿರುಗಿಕೊಂಡು ಎರಡೂ ಬದಿಯಲ್ಲಿ ಬರೆದಿರುವ ಹಲಗೆಗಳಾದ ಸಾಕ್ಷಿಯ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದಿ ಳಿದನು; ಆ ಹಲಗೆಗಳು ಈ ಪಕ್ಕದಲ್ಲಿಯೂ ಆ ಪಕ್ಕದಲ್ಲಿಯೂ ಬರೆಯಲ್ಪಟ್ಟಿದ್ದವು.
ಇದಾದ ಮೇಲೆ ಮೋಶೆಯು ಪಾಳೆಯದ ಸವಿಾಪಕ್ಕೆ ಬಂದು ಆ ಕರುವನ್ನೂ ಅವರ ನಾಟ್ಯವನ್ನೂ ನೋಡಿ ಕೋಪ ಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬಿಸಾಡಿ ಬೆಟ್ಟದ ಅಡಿಯಲ್ಲಿ ಅವುಗಳನ್ನು ಒಡೆದುಬಿಟ್ಟನು.
ಕರ್ತನು ಮೋಶೆಗೆ--ಮೊದಲಿನವುಗಳಂತಿರುವ ಕಲ್ಲಿನ ಎರಡು ಹಲಗೆಗಳನ್ನು ಕೆತ್ತಿಸಿಕೋ. ಆಗ ನೀನು ಒಡೆದ ಆ ಮೊದಲನೆಯ ಹಲಗೆಗಳ ಮೇಲೆ ಇದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು.
ಮೋಶೆಯು ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಅಲ್ಲಿ ಕರ್ತನ ಸಂಗಡ ಇದ್ದನು. ಆತನು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದನು.
ಇದಲ್ಲದೆ ನಾನು ಈಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನ್ಯಾಯಪ್ರಮಾಣದ ಪ್ರಕಾರ ನೀತಿಯುಳ್ಳ ನಿಯಮ ನ್ಯಾಯಗಳುಳ್ಳ ದೊಡ್ಡ ಜನಾಂಗ ಯಾವದು?
ಆತನು ಹತ್ತು ಆಜ್ಞೆಗಳೆಂಬ ತನ್ನ ಒಡಂಬಡಿಕೆಯನ್ನು ನಿಮಗೆ ತಿಳಿಸಿ ಅದನ್ನು ಅನುಸರಿಸಬೇಕೆಂದು ನಿಮಗೆ ಆಜ್ಞಾಪಿಸಿ ಅವುಗಳನ್ನು ಕಲ್ಲಿನ ಎರಡು ಹಲಗೆಗಳ ಮೇಲೆ ಬರೆದನು.
ಈ ಮಾತುಗಳನ್ನು ಕರ್ತನು ಬೆಂಕಿಯ ಮೇಘದ ಕಾರ್ಗತ್ತಲೆಯ ಮಧ್ಯದಿಂದಲೂ ಮಹಾಶಬ್ದ ದಿಂದಲೂ ಬೆಟ್ಟದಲ್ಲಿ ನಿಮ್ಮ ಸಭೆಗೆಲ್ಲಾ ಹೇಳಿದನು; ಹೆಚ್ಚೇನೂ ಕೂಡಿಸಲಿಲ್ಲ. ಇವುಗಳನ್ನು ಆತನು ಕಲ್ಲಿನ ಎರಡು ಹಲಗೆಗಳಲ್ಲಿ ಬರೆದು ನನಗೆ ಕೊಟ್ಟನು.
ಆ ಕಲ್ಲಿನ ಹಲಗೆಗಳನ್ನು ಅಂದರೆ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತಕ್ಕೊಳ್ಳುವದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿದ್ದೆನು.
ಆಗ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದೆನು; ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿತ್ತು; ಒಡಂಬಡಿ ಕೆಯ ಎರಡು ಹಲಗೆಗಳು ನನ್ನ ಎರಡು ಕೈಗಳಲ್ಲಿ ಇದ್ದವು.
ಆ ಕಾಲದಲ್ಲಿ ಕರ್ತನು ನನಗೆ--ಮೊದಲಿ ನವುಗಳ ಹಾಗೆ ಎರಡು ಕಲ್ಲಿನ ಹಲಗೆ ಗಳನ್ನು ನೀನು ಕೆತ್ತಿಕೊಂಡು ಬೆಟ್ಟವನ್ನೇರಿ ನನ್ನ ಬಳಿಗೆ ಬಾ; ಮರದ ಮಂಜೂಷವನ್ನು ನಿನಗೆ ಮಾಡಿಕೊಳ್ಳ ಬೇಕು.
ಸೀನಾಯ್ ಪರ್ವ ತದ ಮೇಲಕ್ಕೆ ಇಳಿದು ಬಂದಿ; ಆಕಾಶದಿಂದ ಅವರ ಸಂಗಡ ಮಾತನಾಡಿದಿ; ಸರಿಯಾದ ನ್ಯಾಯಗಳನ್ನೂ ಸತ್ಯವಾದ ನ್ಯಾಯಪ್ರಮಾಣಗಳನ್ನೂ ಉತ್ತಮವಾದ ಕಟ್ಟಳೆ ಗಳನ್ನೂ ಆಜ್ಞೆಗಳನ್ನೂ ಅವರಿಗೆ ಕೊಟ್ಟಿ.
ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು.
ಆದದರಿಂದ ನಿನ್ನ ಆಜ್ಞೆಗಳನ್ನು ಬಂಗಾರ ಕ್ಕಿಂತಲೂ ಹೌದು, ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಮಾಡಿದ್ದೇನೆ.
ಕರ್ತನೇ, ನಿನ್ನ ರಕ್ಷಣೆಗೆ ಆಶೆಪಟ್ಟಿದೇನೆ. ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
ಆತನು ಪ್ರಾರ್ಥನೆ ಮಾಡುತ್ತಿದ್ದಾಗ ಆತನ ಮುಖ ಭಾವವು ಬದಲಾಯಿತು; ಉಡುಪು ಬೆಳ್ಳಗಾಗಿ ಪ್ರಕಾಶಮಾನವಾಯಿತು.
ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.
ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ;
ಜೀವಿಸುವದಕ್ಕಾಗಿರುವ ಆಜ್ಞೆಯೇ ಮರಣಕ್ಕಾಯಿತೆಂದು ನಾನು ಕಂಡುಕೊಂಡೆನು.
ಹೀಗಿರಲಾಗಿ ನ್ಯಾಯಪ್ರಮಾಣವು ಪರಿ ಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದ್ದು ಸರಿ.
ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ.
ನಂಬುವ ಪ್ರತಿಯೊಬ್ಬನು ನೀತಿವಂತನಾಗುವಂತೆ ಕ್ರಿಸ್ತನು ನ್ಯಾಯಪ್ರಮಾಣದ ಅಂತ್ಯವಾಗಿದ್ದಾನೆ.
ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವದು.
ನೀವು ಕ್ರಿಸ್ತನು ನಮ್ಮ ಕೈಯಿಂದ ಬರೆಯಿಸಿ ಕೊಟ್ಟ ಪತ್ರಿಕೆಯಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಆದರೆ ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಹಲಿಗೆಗಳ ಮೇಲೆಯಲ್ಲ, ಮನುಷ್ಯನ ಹೃದಯವೆಂಬ ಹಲಿಗೆಗಳ ಮೇಲೆ ಬರೆದದ್ದು.
ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ.
ಅಪರಾಧ ನಿರ್ಣಯದ ಸೇವೆಯು ಪ್ರಭಾವದಿಂದಿರುವದಾದರೆ ನೀತಿಯ ಸೇವೆಯು ಎಷ್ಟೋ ಅಧಿಕವಾದ ಪ್ರಭಾವವುಳ್ಳದ್ದಾಗಿರಬೇಕು.
ಗತಿಸಿಹೋಗು ವದರ ಅಂತ್ಯವನ್ನು ಇಸ್ರಾಯೇಲ್ಯರು ದೃಷ್ಟಿಸಿ ನೋಡಲಾರದಂತೆ ತನ್ನ ಮುಖದ ಮೇಲೆ ಮುಸುಕು ಹಾಕಿಕೊಳ್ಳುವ ಮೋಶೆಯ ಹಾಗೆ ಅಲ್ಲ.
ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಕಲ್ಲಿನ ಹಲಿಗೆ ಗಳೂ ಇದ್ದವು;