ಹೀಗಿದ್ದ ಮೇಲೆ ಆತ್ಮ ಸಂಬಂಧವಾದ ಸೇವೆಯು ಎಷ್ಟೋ ಹೆಚ್ಚಾಗಿ ಪ್ರಭಾವದಿಂದಿರುವದಲ್ಲವೇ?
Cross references
ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು;
ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.
ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.
ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
(ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.)
ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ.
ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ.
ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ.
ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?
ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ;
ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ.
ಕರ್ತನು ಆ ಆತ್ಮನೇ ಆಗಿದ್ದಾನೆ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು.ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
ಯಾಕಂದರೆ ನಾವು ಸಾರದಿದ್ದ ಬೇರೊಬ್ಬ ಯೇಸುವನ್ನು ನಿಮ್ಮ ಬಳಿಗೆ ಬರುವವನು ಪ್ರಕಟಿಸುವಾಗಲೂ ನೀವು ಹೊಂದದೆ ಇದ್ದ ಬೇರೊಂದು ಆತ್ಮವನ್ನು ಹೊಂದುವಾಗಲೂ ಅಂಗೀಕರಿಸದಿದ್ದ ಬೇರೊಂದು ಸುವಾರ್ತೆಯನ್ನು ಸ್ವೀಕರಿಸುವಾಗಲೂ ನೀವು ಚೆನ್ನಾಗಿ ಸಹಿಸಿಕೊಳ್ಳು ತ್ತಿದ್ದೀರಿ.
ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ಆತ್ಮನನ್ನು ಹೊಂದಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ? ಇಲ್ಲವೆ ಕೇಳಿ ನಂಬಿದ್ದ ರಿಂದಲೋ?
ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.
ನಾವಾದರೋ ಆತ್ಮನ ಮೂಲಕ ನಂಬಿಕೆಯಿಂದಾದ ನೀತಿಯ ನಿರೀಕ್ಷೆಗಾಗಿ ಎದುರು ನೋಡುತ್ತೇವೆ.
ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.
ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ
ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ ಪ್ರಾಕೃತಮನುಷ್ಯರೂ ಆತ್ಮವಿಲ್ಲದವರೂ ಆಗಿದ್ದಾರೆ.