ಅಪರಾಧ ನಿರ್ಣಯದ ಸೇವೆಯು ಪ್ರಭಾವದಿಂದಿರುವದಾದರೆ ನೀತಿಯ ಸೇವೆಯು ಎಷ್ಟೋ ಅಧಿಕವಾದ ಪ್ರಭಾವವುಳ್ಳದ್ದಾಗಿರಬೇಕು.
Cross references
ಜನರಿಗೋಸ್ಕರ ಸುತ್ತಲೂ ಮೇರೆಗಳನ್ನು ಮಾಡಿಸಿ ಅವರಿಗೆ--ನೀವು ಬೆಟ್ಟವನ್ನು ಏರದಂತೆಯೂ ಅದರ ಮೇರೆಯನ್ನು ಮುಟ್ಟದಂತೆಯೂ ಜಾಗ್ರತೆಯಾಗಿರ್ರಿ; ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸಾಯ ಬೇಕು.
ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟವು ಹೊಗೆ ಹಾಯು ವದನ್ನೂ ನೋಡಿದರು; ಜನರು ಅದನ್ನು ನೋಡಿ ದೂರ ಹೋಗಿ ನಿಂತುಕೊಂಡರು.
ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.
ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ಈ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು.
ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ.
ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.
ಆದರೆ ಆ ಅಪರಾಧವು ಇದ್ದಂತೆ ಉಚಿತವಾದ ದಾನವು ಇರುವದಿಲ್ಲ; ಹೇಗಂದರೆ ಆ ಒಬ್ಬನ ಅಪ ರಾಧದಿಂದ ಎಲ್ಲಾ ಮನುಷ್ಯರು ಸತ್ತವರಾಗಿದ್ದರೆ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದಾದ ದಾನವೂ ಅನೇಕರಿಗೆ ಹೇರಳವಾಗಿ ದೊರೆಯುವದು ಮತ್ತೂ ನಿಶ್ಚಯವಲ್ಲವೇ.
ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
ಸೂರ್ಯನ ಮಹಿಮೆ ಒಂದು ವಿಧ, ಚಂದ್ರನ ಮಹಿಮೆ ಮತ್ತೊಂದು ವಿಧ, ನಕ್ಷತ್ರಗಳ ಮಹಿಮೆ ಇನ್ನೊಂದು ವಿಧ ಮಹಿಮೆಯಲ್ಲಿ ಒಂದು ನಕ್ಷತ್ರಕ್ಕೂ ಇನ್ನೊಂದು ನಕ್ಷತ್ರಕ್ಕೂ ಹೆಚ್ಚು ಕಡಿಮೆಯುಂಟಷ್ಟೆ.
ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ.
ಈಗ ಅತ್ಯಧಿಕವಾದ ಪ್ರಭಾವವುಳ್ಳದ್ದು ಬಂದದ್ದರಿಂದ ಪ್ರಭಾವವಾಗಿದ್ದದ್ದು ಈ ವಿಷಯದಲ್ಲಿ ಪ್ರಭಾವ ವಿಲ್ಲದ್ದಾಯಿತು.
ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.
ನಿಮ್ಮಲ್ಲಿ ಯಾರಾದರೂ ನ್ಯಾಯ ಪ್ರಮಾಣದ ಮೂಲಕ ನೀತಿವಂತರಾಗಬೇಕೆಂದಿದ್ದರೆ ಅವರಿಗೆ ಕ್ರಿಸ್ತನಿಂದ ಯಾವ ಪ್ರಯೋಜನವೂ ಆಗುವದಿಲ್ಲ; ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ.
ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದವುಗಳಿಗೆ ಸಾಕ್ಷಿಯಾಗಿ ದ್ದನು.
ಮುಟ್ಟಬಹುದಾದ ಮತ್ತು ಬೆಂಕಿ ಹತ್ತಿದಂಥ ಬೆಟ್ಟಕ್ಕೂ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ
ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--