ಬಲಾಧಿಕ್ಯವು ನಮ್ಮದಲ್ಲ, ಅದು ದೇವರದಾಗಿ ರುವ ಹಾಗೆ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.
Cross references
ಆಗ ಕರ್ತನು ಗಿದ್ಯೋನನಿಗೆ--ನಾನು ಮಿದ್ಯಾನ್ಯ ರನ್ನು ಜನರ ಕೈಗಳಿಗೆ ಒಪ್ಪಿಸಿಕೊಡುವದಕ್ಕೆ ನಿನ್ನ ಸಂಗಡ ಇರುವ ಜನರು ಬಹಳವಾಗಿದ್ದಾರೆ; ಇಸ್ರಾಯೇಲ್ಯರುನನ್ನ ಕೈ ನನ್ನನ್ನು ರಕ್ಷಿಸಿತು ಎಂದು ನನಗೆ ವಿರೋಧವಾಗಿ ಹೆಚ್ಚಳ ಪಟ್ಟಾರು.
ಗಿದ್ಯೋನನು ಬಂದಾಗ ಇಗೋ, ಒಬ್ಬನು ತನ್ನ ಜೊತೆಗಾರನಿಗೆ ತನಗಾದ ಸ್ವಪ್ನವನ್ನು ವಿವರಿಸಿ ಹೇಳಿದ್ದೇ ನಂದರೆ--ಇಗೋ, ನಾನು ಒಂದು ಕನಸನ್ನು ಕಂಡೆನು. ಇಗೋ, ಒಂದು ಜವೆಗೋಧಿಯ ರೊಟ್ಟಿಯು ಮಿದ್ಯಾ ನ್ಯರ ದಂಡಿನ ಮೇಲೆ ಹೊರಳಿ ಒಂದು ಡೇರೆಯಮೇಲೆ ಬಂದು ಅದು ಬೀಳುವ ಹಾಗೆ ಅದನ್ನು ಹೊಡೆದು ಕೆಡವಿಹಾಕಿತು; ಆಗ ಡೇರೆಯು ಬಿದ್ದುಹೋಯಿತು ಅಂದನು.
ಆ ಮುನ್ನೂರು ಜನರನ್ನು ಮೂರು ಗುಂಪಾಗಿ ವಿಭಾಗಿಸಿ ಎಲ್ಲರ ಕೈಯಲ್ಲಿ ತುತೂರಿಗಳನ್ನೂ ಬರಿದಾದ ಕೊಡಗಳನ್ನೂ ಅವುಗಳಲ್ಲಿ ಇಡುವ ಪಂಜುಗಳನ್ನೂ ಕೊಟ್ಟು ಅವರಿಗೆ ಹೇಳಿದ್ದೇ ನಂದರೆ--
ಧೂಳಿನಲ್ಲಿ ಅಸ್ತಿವಾರ ಇರುವ ಮಣ್ಣಿನ ಮನೆಗಳ ನಿವಾಸಿಗಳು ಎಷ್ಟು ಕಡಿಮೆ? ನುಸಿಯ ಮುಂದೆ ಅವರು ಜಜ್ಜಲ್ಪಡುತ್ತಾರೆ.
ಕುಂಬಾ ರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀ ಎಂದು ಜ್ಞಾಪಕ ಮಾಡಿಕೋ ಎಂದು ಬೇಡಿಕೊಳ್ಳುತ್ತೇನೆ; ಆದಾಗ್ಯೂ ನನ್ನನ್ನು ಧೂಳಿಗೆ ತಿರುಗಿಸುತ್ತಿಯೋ?
ಅಪರಂಜಿಗೆ ಸಮಾನರಾದ ಚೀಯೋನಿನ ಅಮೂಲ್ಯ ಕುಮಾರರು ಹೇಗೆ ಮಣ್ಣಿನ ಪಾತ್ರೆಗಳಂತೆಯೂ ಕುಂಬಾರನ ಕೈಕೆಲಸದ ಹಾಗೆಯೂ ಎಣಿಸಲ್ಪಟ್ಟಿ ದ್ದಾರಲ್ಲಾ!
ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.
ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
ಇದಲ್ಲದೆ ದೇವರು ಇರುವವುಗಳನ್ನು ಇಲ್ಲದಂತಾಗಿ ಮಾಡುವ ಹಾಗೆ ಈ ಲೋಕದ ಹೀನವಾದವರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣನೆಗೆ ಬಾರದವರನ್ನೂ ಆರಿಸಿಕೊಂಡಿದ್ದಾನೆ.
ಇದಲ್ಲದೆ ನಾನು ನಿಮ್ಮ ಬಳಿಯಲ್ಲಿದ್ದಾಗ ಬಲಹೀನನೂ ಭಯಪಡುವವನೂ ಬಹುನಡುಗು ವವನೂ ಆಗಿದ್ದೆನು.
ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು.
ನಮ್ಮಿಂದಲೇ ಏನಾದರೂ ಉಂಟಾಯಿ ತೆಂದು ಆಲೋಚಿಸಿಕೊಳ್ಳುವದಕ್ಕೆ ನಮ್ಮಷ್ಟಕ್ಕೆ ನಾವೇ ಸಮರ್ಥರೆಂತಲ್ಲ; ನಮಗಿರುವ ಸಾಮರ್ಥ್ಯವು ದೇವರಿಂದಲೇ ಬಂದದ್ದು;
ಆದದರಿಂದ ನಾವು ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಡುವದಿಲ್ಲ.
ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು.
ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.
ಅವರು--ಅವನ ಪತ್ರಿಕೆಗಳು ಗೌರವವಾದವುಗಳೂ ಬಲವುಳ್ಳವುಗಳೂ ಆಗಿವೆ; ಅವನು ಸಾಕ್ಷಾತ್ತಾಗಿ ಬಂದರೆ ಅವನು ನಿರ್ಬಲನು, ಅವನ ಮಾತು ಗಣನೆಗೆಬಾರದ್ದು ಎಂದು ಅನ್ನುತ್ತಾರೆ.
ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು.
ಬಲಹೀನತೆಯ ಮೂಲಕ ಆತನು ಶಿಲುಬೆಗೆ ಹಾಕಲ್ಪಟ್ಟಿದ್ದಾಗ್ಯೂ ದೇವರ ಬಲದಿಂದ ಇನ್ನೂ ಬದುಕುತ್ತಾನೆ; ನಾವು ಸಹ ಆತನಲ್ಲಿ ಬಲಹೀನ ರಾಗಿದ್ದೇವೆ, ಆದರೂ ನಾವು ನಿಮಗೋಸ್ಕರವಾಗಿ ದೇವರ ಬಲದಿಂದ ಆತನೊಂದಿಗೆ ಬದುಕುವೆವು.
ನನ್ನ ಶರೀರಕ್ಕೆ ಅಸೌಖ್ಯವಿದ್ದದರಿಂದ ನಾನು ನಿಮ್ಮಲ್ಲಿದ್ದು ಮೊದಲನೆಯ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ.
ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದ ದ್ದೆಂಬದನ್ನೂ ಆತನ ಬಲಾತಿಶಯವು ಎಷ್ಟು ಮಹತ್ತಾದ ದ್ದೆಂಬದನ್ನೂ ನೀವು ತಿಳುಕೊಳ್ಳು ವಂತೆ ಅನುಗ್ರಹಿಸಲಿ.
ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)
ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.
ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
ಅನ್ಯಜನಗಳಲ್ಲಿ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ (ಪರಿಶುದ್ಧರಿಗೆ) ತಿಳಿಸುವದಕ್ಕೆ ಮನಸ್ಸು ಮಾಡಿ ಕೊಂಡನು. ಈ ಮರ್ಮವು ಏನೆಂದರೆ ನಿಮ್ಮಲ್ಲಿರುವ ಕ್ರಿಸ್ತನು ಮಹಿಮೆಯ ನಿರೀಕ್ಷೆಯಾಗಿದ್ದಾನೆ ಎಂಬದೇ.
ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.
ಾಪ್ತಿಸ್ಮದಲ್ಲಿ ಆತನೊಂದಿಗೆ ಹೂಣಲ್ಪಟ್ಟು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಕಾರ್ಯದಲ್ಲಿ ನಂಬಿಕೆಯಿಟ್ಟಿರುವದರಿಂದ ನೀವು ಸಹ ಅದರಲ್ಲಿ (ಬಾಪ್ತಿಸ್ಮದಲ್ಲಿ) ಎಬ್ಬಿಸಲ್ಪಟ್ಟಿದ್ದೀರಿ.
ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ.
ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ ಮರದ ಪಾತ್ರೆಗಳೂ ಮಣ್ಣಿನ ಪಾತ್ರೆಗಳೂ ಇರುತ್ತವೆ; ಕೆಲವು ಗೌರವಕ್ಕೂ ಕೆಲವು ಅಗೌರವಕ್ಕೂ ಇರುತ್ತವೆ.