ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,
Cross references
ಅದಕ್ಕೆ ಅವನು--ನಾನು ಬರುವದಿಲ್ಲ: ನಾನು ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗು ತ್ತೇನೆ ಅಂದನು.
ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.
ನನ್ನ ಜನರಾದ ಇಸ್ರಾಯೇಲ್ಯರು ನನಗೆ ಅರ್ಪಿಸುವ ತಮ್ಮ ಅರ್ಪಣೆಗಳಲ್ಲಿ ಪ್ರಾಮುಖ್ಯವಾದವುಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವದಕ್ಕೆ ನನ್ನ ವಾಸಸ್ಥಳ ದಲ್ಲಿ ನಾನು ಆಜ್ಞಾಪಿಸಿದ ನನ್ನ ಬಲಿಯನ್ನೂ ಅರ್ಪಣೆಯನ್ನೂ ನೀವು ಒದ್ದು ನನಗಿಂತ ನಿನ್ನ ಮಕ್ಕಳನ್ನು ಘನಪಡಿಸುವದೇನು?
ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
ಅದಕ್ಕೆ ಆತನು ತನಗೆ ಹೇಳಿದವನಿಗೆ ಪ್ರತ್ಯುತ್ತರವಾಗಿ--ನನ್ನ ತಾಯಿ ಯಾರು? ಮತ್ತು ನನ್ನ ಸಹೋದರರು ಯಾರು? ಎಂದು ಹೇಳಿ ಶಿಷ್ಯರ ಕಡೆಗೆ ತನ್ನ ಕೈಚಾಚಿ--
ತರುವಾಯ ಆತನ ಸಹೋದರರೂ ತಾಯಿಯೂ ಅಲ್ಲಿಗೆ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೇಕಳುಹಿಸಿದರು.
ಯೇಸು ಆಕೆಗೆ-- ಸ್ತ್ರೀಯೇ, ನನ್ನ ಗೊಡವೆ ನಿನಗೆ ಯಾಕೆ? ನನ್ನ ಗಳಿಗೆ ಯು ಇನ್ನೂ ಬಂದಿಲ್ಲ ಅಂದನು.
ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ.
ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.
ಅನೇಕರು ಶಾರೀರಿಕ ರೀತಿಯಲ್ಲಿ ಹೊಗಳಿಕೊಳ್ಳು ವದರಿಂದ ನಾನೂ ಹೊಗಳಿಕೊಳ್ಳುತ್ತೇನೆ.
ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆಯಾದರೂ ಸಮ್ಮತಿಪಡಲಿಲ್ಲ.
ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.
ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.
ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.
ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನ ನಂಬಿ ಕೆಯ ವಿಷಯದಲ್ಲಿ ನೀವು ಪಕ್ಷಪಾತಿಗಳಾಗಿರಬಾರದು.
ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.