ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
Cross references
ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು.
ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು.
ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು.
ಆತನಿಗೆ ಪರಿಚಿತನಾಗಿ ಸಮಾಧಾನದಿಂದಿರು; ಇದರಿಂದ ನಿನಗೆ ಮೇಲು ಬರುವದು.
ಇಗೋ, ನಾನು ದೇವರ ಮುಂದೆ ನಿನ್ನ ಹಾಗೆಯೇ ಇದ್ದೇನೆ; ಮಣ್ಣಿನಿಂದ ನಾನು ಸಹ ರೂಪಿಸಲ್ಪಟ್ಟಿದ್ದೇನೆ.
ಸಹಸ್ರ ಜನರಲ್ಲಿ ಒಬ್ಬನಾದ ಮಧ್ಯಸ್ಥ ನಾಗಿರುವ ದೂತನು ಮನುಷ್ಯನಿಗೆ ಅವನ ಯಥಾರ್ಥ ತೆಯನ್ನು ತಿಳಿಸುವದಕ್ಕೆ ಅವನ ಬಳಿಯಲ್ಲಿದ್ದರೆ,
ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
ದುಷ್ಟ ಸೇವಕನು ಕೇಡಿಗೆ ಬೀಳುತ್ತಾನೆ; ನಂಬಿಕೆಯಾದ ರಾಯಭಾರಿಯು ಆರೋಗ್ಯದಾಯಕ.
ಇಲ್ಲದಿದ್ದರೆ ಅವನು ನನ್ನ ಸಂಗಡ ಸಮಾಧಾನ ಮಾಡಿಕೊಳ್ಳುವ ಹಾಗೆ ನನ್ನ ಬಲವನ್ನು ಹಿಡುಕೊ ಳ್ಳಲಿ, ನನ್ನೊಡನೆ ಸಮಾಧಾನ ಮಾಡಿಕೊಳ್ಳಲಿ.
ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
ಅವರ ಪ್ರವಾದನೆಯನು ಕೇಳುವ ಜನರು ಕ್ಷಾಮದ ಮತ್ತು ಕತ್ತಿಯ ನಿಮಿತ್ತ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಹೆಂಡತಿಯರನ್ನೂ ಕುಮಾರರನ್ನೂ ಕುಮಾರ್ತೆಯರನ್ನೂ ಹೂಣಿಡುವದಕ್ಕೆ ಯಾರೂ ಇರು ವದಿಲ್ಲ; ನಾನು ಅವರ ಕೆಟ್ಟತನವನ್ನು ಅವರ ಮೇಲೆ ಹೊಯಿದು ಬಿಡುವೆನು.
ನೀನು ಅವನಿಗೆ ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ; ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.
ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.
ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.
ಆಗ ಯಜ ಮಾನನು ಸೇವಕನಿಗೆ--ನೀನು ಬೀದಿಗಳಿಗೂ ಬೇಲಿಗಳ ಬಳಿಗೂ ಹೊರಟುಹೋಗಿ ನನ್ನ ಮನೆ ತುಂಬಿಕೊಳ್ಳುವಂತೆ ಒಳಗೆ ಬರಲು ಅವರನ್ನು ಬಲ ವಂತಮಾಡು;
ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.
ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ
ನಾನೇ ನಾನಾಗಿ ಏನೂ ತಿಳಿಯದವನಾಗಿದ್ದೇನೆ; ಆದಾಗ್ಯೂ ಅದರಿಂದ ನಾನು ನೀತಿವಂತನಾಗಲಿಲ್ಲ; ನನ್ನನ್ನು ವಿಚಾರಿಸುವಾತನು ಕರ್ತನೇ.
ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ.
ನಾವು ಕರ್ತನ ಭಯವನ್ನು ಅರಿತವರಾದ ಕಾರಣ ಮನುಷ್ಯರನ್ನು ಒಡಂಬಡಿಸುತ್ತೇವೆ; ಆದರೆ ನಾವು ದೇವರಿಗೂ ನಿಮ್ಮ ಮನಸ್ಸಾಕ್ಷಿಗಳಿಗೂ ತೋರಿ ಬಂದಿದ್ದೇವೆಂದು ನಾನು ಭರವಸವುಳ್ಳವನಾಗಿದ್ದೇನೆ.
ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
ಆ ಸುವಾರ್ತೆಯ ಮರ್ಮದ ನಿಮಿತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ; ಮಾತನಾಡಬೇಕಾದ ರೀತಿಯಲ್ಲಿ ನಾನು ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.
ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.