ಸತ್ಯವಾಕ್ಯದಿಂದ, ದೇವರ ಶಕ್ತಿಯಿಂದ, ಎಡಬಲಗೈ ಗಳಲ್ಲಿ ನೀತಿಯೆಂಬ ಆಯುಧಗಳಿಂದ,
Cross references
ಹೀಗೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯ ದಲ್ಲಿ ಒಣ ನೆಲದಲ್ಲೇ ಹೊರಟು ಹೋದರು. ನೀರು ಅವರಿಗೆ ಎಡಬಲದಲ್ಲಿ ಗೋಡೆಯಾಗಿತ್ತು.
ಸತ್ಯದ ವಾಕ್ಯವನ್ನು ನನ್ನ ಬಾಯಿಂದ ಪೂರ್ಣವಾಗಿ ತೆಗೆದುಹಾಕಬೇಡ; ನಿನ್ನ ನ್ಯಾಯವಿಧಿಗಳನ್ನು ನಿರೀಕ್ಷಿಸಿದ್ದೇನೆ,
ಆಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.
ನೀತಿಯೇ ಅವನಿಗೆ ನಡುಕಟ್ಟು, ನಂಬಿಗಸ್ತಿಕೆಯು ಅವನ ಸೊಂಟದ ಪಟ್ಟಿ.
ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು; ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.
ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.
ಕರ್ತನ ಹಸ್ತವು ಅವರೊಂದಿಗಿದ್ದದ ರಿಂದ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿ ಕೊಂಡರು.
ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.
ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ.
ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಮನುಷ್ಯಜ್ಞಾನ ವಾಕ್ಯಗಳನ್ನು ನಾನು ಪ್ರಯೋಗಿಸದೆ ಆತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.
ಆದರೆ ದೇವರು ಸತ್ಯವಂತನಾಗಿರುವ ಹಾಗೆಯೇ ನಮ್ಮ ಮಾತು ಹೌದೆಂದೂ ಅಲ್ಲವೆಂದೂ ಇರಲಿಲ್ಲ.
ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ
ಯಾಕಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದರಲ್ಲಿ ನಾಚಿಕೆಪಡಬೇಕಾಗಿ ಬರಲಿಲ್ಲ. ನಾವು ನಿಮಗೆ ಹೇಳಿದವುಗಳೆಲ್ಲಾ ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯೂ ಸತ್ಯವೆಂದು ಕಂಡುಬಂತು.
(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).
ಬಲಹೀನತೆಯ ಮೂಲಕ ಆತನು ಶಿಲುಬೆಗೆ ಹಾಕಲ್ಪಟ್ಟಿದ್ದಾಗ್ಯೂ ದೇವರ ಬಲದಿಂದ ಇನ್ನೂ ಬದುಕುತ್ತಾನೆ; ನಾವು ಸಹ ಆತನಲ್ಲಿ ಬಲಹೀನ ರಾಗಿದ್ದೇವೆ, ಆದರೂ ನಾವು ನಿಮಗೋಸ್ಕರವಾಗಿ ದೇವರ ಬಲದಿಂದ ಆತನೊಂದಿಗೆ ಬದುಕುವೆವು.
ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.
ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದ ದ್ದೆಂಬದನ್ನೂ ಆತನ ಬಲಾತಿಶಯವು ಎಷ್ಟು ಮಹತ್ತಾದ ದ್ದೆಂಬದನ್ನೂ ನೀವು ತಿಳುಕೊಳ್ಳು ವಂತೆ ಅನುಗ್ರಹಿಸಲಿ.
ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
ಆತನನ್ನೇ ಕೇಳಿದಿರಲ್ಲಾ, ಆತನಲ್ಲಿಯೇ ಉಪದೇಶ ವನ್ನು ಹೊಂದಿದಿರಲ್ಲಾ.
ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ.
ಪರಲೋಕದಲ್ಲಿ ನಿಮಗೋಸ್ಕರ ಇಡಲ್ಪಟ್ಟಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯೆಂಬ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದಿರಿ.
ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಅಭ್ಯಾಸಿಸು. ಅವಮಾನಕ್ಕೆ ಗುರಿ ಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ವಿಭಾಗಿಸುವವನೂ ಆಗಿರು.
ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.
ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.
ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.