ಮಾನ ಅವಮಾನಗಳಿಂದ, ಕೀರ್ತಿ ಅಪಕೀರ್ತಿಗಳಿಂದ, ಕೂಡಿದವರಾಗಿದ್ದು ಮೋಸಗಾರರೆನಿಸಿಕೊಂಡರೂ ಸತ್ಯವಂತರೂ
Cross references
ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು.
ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ?
ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು
ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ.
ಅವರು ಬಂದು ಆತನಿಗೆ--ಬೋಧಕನೇ, ನೀನು ಸತ್ಯವಂತನೂ ಯಾವ ಮನುಷ್ಯನನ್ನು ಲಕ್ಷಿಸದವನೂ ಎಂದು ನಮಗೆ ತಿಳಿದದೆ; ಯಾಕಂದರೆ ನೀನು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀ; ಕೈಸರನಿಗೆ ಕಪ್ಪಕೊಡುವದು ನ್ಯಾಯವೋ, ನ್ಯಾಯವಲ್ಲವೋ?
ಆ ಜನಗಳಲ್ಲಿ ಆತನ ವಿಷಯವಾಗಿ ಬಹಳ ಗುಣುಗುಟ್ಟುವಿಕೆ ಇತ್ತು; ಯಾಕಂದರೆ ಕೆಲವರು--ಆತನು ಒಬ್ಬ ಒಳ್ಳೇ ಮನುಷ್ಯನಾಗಿದ್ದಾನೆ ಅಂದರು; ಬೇರೆ ಕೆಲವರು--ಅಲ್ಲ; ಆತನು ಜನರನ್ನು ಮೋಸ ಗೊಳಿಸುತ್ತಾನೆ ಎಂದು ಅನ್ನುತ್ತಿದ್ದರು.
ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು.
ಮಿಕ್ಕಾದ ವರಲ್ಲಿ ಒಬ್ಬರಿಗೂ ಅವರ ಜೊತೆ ಸೇರುವದಕ್ಕೆ ಧೈರ್ಯ ವಿರಲಿಲ್ಲ; ಆದರೂ ಜನರು ಅವರನ್ನು ಹೊಗಳುತ್ತಿದ್ದರು.
ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.
ಆದದರಿಂದ ಸಹೋದರರೇ, ಈ ಕೆಲಸದ ಮೇಲೆ ನಾವು ನೇಮಿಸುವಂತೆ ಪವಿತ್ರಾತ್ಮನಿಂದಲೂ ಜ್ಞಾನ ದಿಂದಲೂ ತುಂಬಿದ ಯಥಾರ್ಥವಾದ ಏಳು ಮಂದಿ ಯನ್ನು ನಿಮ್ಮಲ್ಲಿಂದ ಆರಿಸಿಕೊಳ್ಳಿರಿ.
ಅವರು--ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡು ವವನೂ ಯೆಹೂದ್ಯ ಜನಾಂಗದವರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇ ಕಳುಹಿಸಿಕೊಂಡು ನಿನ್ನ ಮಾತುಗಳನ್ನು ಕೇಳಬೇಕೆಂದು ಅವನು ಪರಿಶುದ್ಧ ದೂತ
ಪೌಲನು ಮಾಡಿದ್ದನ್ನು ಜನರು ನೋಡಿ--ದೇವತೆಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದು ಬಂದರು ಎಂದು ಲುಕವೋನ್ಯ ಭಾಷೆಯಲ್ಲಿ ತಮ್ಮ ಸ್ವರವೆತ್ತಿ ಕೂಗಿದರು.
ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ--ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ.
ಅವರ ಬಳಿಗೆ ಬಂದು ಅವರು ವಿನಯವಾಗಿ ಮಾತನಾಡಿ ಹೊರಗೆ ಕರೆದುಕೊಂಡು ಹೋಗಿ ಊರನ್ನು ಬಿಟ್ಟು ಹೋಗ ಬೇಕೆಂದು ಅವರನ್ನು ಬೇಡಿಕೊಂಡರು.ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಹೊರಟು ಹೋದರು.
ಅಲ್ಲಿ ವಾಸಿಸುತ್ತಿದ್ದ ಅನನೀಯ ಎಂಬ ಒಬ್ಬ ಮನುಷ್ಯನು ಎಲ್ಲಾ ಯೆಹೂದ್ಯರಿಂದ ಒಳ್ಳೆಯವನೆಂದು ಸಾಕ್ಷಿಪಡೆದು ನ್ಯಾಯಪ್ರಮಾಣದ ಪ್ರಕಾರ ಭಕ್ತಿಯುಳ್ಳವನಾಗಿದ್ದನು.
ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು.
ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
ಆದರೆ ನಿನ್ನ ಅಭಿಪ್ರಾಯ ವೇನೆಂದು ನಿನ್ನಿಂದಲೇ ಕೇಳುವದಕ್ಕೆ ನಾವು ಅಪೇಕ್ಷಿಸು ತ್ತೇವೆ; ಎಲ್ಲಾ ಕಡೆಯಲ್ಲಿಯೂ ಈ ಪಂಗಡದ ವಿಷಯ ದಲ್ಲಿ ಜನರು ವಿರುದ್ಧವಾಗಿ ಮಾತನಾಡುತ್ತಾರೆಂಬದು ನಮಗೆ ಗೊತ್ತದೆ ಎಂದು ಹೇಳಿದರು.
(ದೂಷಿಸಲ್ಪಡುವ ಪ್ರಕಾರವಾಗಿ ಯೂ ನಾವು ಹೇಳುತ್ತೇವೆಂದು ಕೆಲವರು ಅನ್ನುವ ಪ್ರಕಾರವಾಗಿಯೂ)--ಒಳ್ಳೆಯದು ಬರುವ ಹಾಗೆ ನಾವು ಕೆಟ್ಟದ್ದನ್ನು ಮಾಡೋಣವೇ? ಅಂಥವರ ದಂಡ ನೆಯು ನ್ಯಾಯವಾಗಿದೆ.
ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು.
ಇದಲ್ಲದೆ ಅವನು ನಿಂದೆಗೆ ಗುರಿ ಯಾಗದಂತೆಯೂ ಸೈತಾನನ ಉರ್ಲಿಗೆ ಸಿಕ್ಕಿಬೀಳ ದಂತೆಯೂ ಹೊರಗಿನವರಿಂದ ಒಳ್ಳೇಸಾಕ್ಷಿಯನ್ನು ಹೊಂದಿದವನಾಗಿರತಕ್ಕದ್ದು.
ಆದದರಿಂದ ಇದಕ್ಕಾಗಿ ನಾವು ಕಷ್ಟಪಡುವವರೂ ನಿಂದೆಯನ್ನನುಭವಿಸುವವರೂ ಆಗಿದ್ದೇವೆ; ಯಾಕಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕನಾಗಿರುವ ಜೀವವುಳ್ಳ ದೇವರನ್ನು ನಾವು ನಂಬಿ ದ್ದೇವೆ.
ಆದದರಿಂದ ನಾವು ಆತನ ನಿಮಿತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟು ಹೋಗೋಣ.
ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.
ದೇಮೇತ್ರಿ ಯನು ಎಲ್ಲರಿಂದಲೂ ಸತ್ಯದಿಂದಲೂ ಒಳ್ಳೇ ಸಾಕ್ಷಿ ಹೊಂದಿದ್ದಾನೆ. ಹೌದು, ನಾವು ಸಹ ಸಾಕ್ಷಿ ಹೇಳುವವ ರಾಗಿದ್ದೇವೆ, ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀವು ಬಲ್ಲಿರಿ.
ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು