ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
Cross references
ನೀನು ತೊಳೆದ ಮೇಲೆ ಆ ವ್ಯಾಧಿಯು ಯಾವದರಿಂದ ಹೊರಟು ಹೋಯಿತೋ ಆ ಬಟ್ಟೆಯನ್ನೂ ಹಾಸನ್ನೂ ಹೊಕ್ಕನ್ನೂ ಇಲ್ಲವೆ ಚರ್ಮದ ಯಾವದೇ ವಸ್ತುವನ್ನೂ ಎರಡನೆಯ ಸಾರಿ ತೊಳೆಯಬೇಕು, ಆಗ ಅದು ಶುದ್ಧವಾಗಿರುವದು.ಉಣ್ಣೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ ಹಾಸಿನ ಹೊಕ್ಕಿನ ಮತ್ತು ಚರ್ಮದಿಂದಾದ ಯಾವದ ರಿಂದಾಗಲಿ ಕುಷ್ಠವ್ಯಾಧಿಯವಿಷಯದಲ್ಲಿ ಅದನ್ನು ಶುದ್ಧವೆಂದು ಅಶುದ್ಧವೆಂದು ನುಡಿಯುವದಕ್ಕೆ ನ್ಯಾಯ ವಿಧಿಯು ಇದೇ.
ನೀವು ಈ ಕಾರ್ಯವನ್ನು ಕರ್ತನ ಭಯದಿಂದಲೂ ನಂಬಿಕೆಯಿಂದಲೂ ಪೂರ್ಣ ಹೃದಯದಿಂದಲೂ ಮಾಡಬೇಕು.
ಕರ್ತನ ಭಯವು ಪವಿತ್ರವಾಗಿದ್ದು ಎಂದೆಂದಿಗೂ ನೆಲೆಯಾಗಿದೆ. ಕರ್ತನ ನ್ಯಾಯಗಳು ಸತ್ಯವಾಗಿದ್ದು ಒಟ್ಟಾಗಿ ನೀತಿಯುಳ್ಳವುಗ ಳಾಗಿವೆ.
ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು.
ಯೌವನಸ್ಥನು ಯಾವದರಿಂದ ತನ್ನ ನಡತೆಯನ್ನು ಶುಚಿಮಾಡಿಕೊಳ್ಳುವನು? ನಿನ್ನ ವಾಕ್ಯವನ್ನು ಕೈಕೊಳ್ಳು ವದರಿಂದಲೇ.
ಕರ್ತನ ಭಯವು ದುಷ್ಟತ್ವವನ್ನು ಹಗೆಮಾಡುವದು; ಗರ್ವ ಅಹಂಭಾವ ಕೆಟ್ಟದಾರಿ ಮೂರ್ಖನಬಾಯಿ ಇವುಗಳನ್ನು ನಾನು ಹಗೆಮಾಡು ತ್ತೇನೆ.
ಕನಿಕರ ಮತ್ತು ಸತ್ಯದಿಂದ ಅಕ್ರಮವು ಶುದ್ಧೀಕರಿಸಲ್ಪಡುತ್ತದೆ; ಕರ್ತನ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.
ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪದಿಂದ ನಾನು ಶುದ್ಧನು ಎಂದು ಯಾರು ಹೇಳಬಲ್ಲರು?
ತಮ್ಮ ಮಲಿನತ್ವದಿಂದ ಇನ್ನು ತೊಳೆಯಲ್ಪಡದೆ ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವ ಒಂದು ವಂಶಾವಳಿಯು ಇದೆ.
ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ;
ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
ಶುದ್ಧ ಹೃದಯವುಳ್ಳವರು ಧನ್ಯರು; ಯಾಕಂದರೆ ಅವರು ದೇವರನ್ನು ನೋಡುವರು.
ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ.
ಮರವು ಒಳ್ಳೆಯದಾಗಿದ್ದರೆ ಅದರ ಫಲವೂ ಒಳ್ಳೆಯದೆಂದು ಎಣಿಸಿರಿ; ಇಲ್ಲವೇ ಮರವು ಕೆಟ್ಟದ್ದಾಗಿದ್ದರೆ ಅದರ ಫಲವೂ ಕೆಟ್ಟದ್ದೆಂದೆಣಿಸಿರಿ; ಯಾಕಂದರೆ ಮರವು ತನ್ನ ಫಲದಿಂದಲೇ ತಿಳಿಯಲ್ಪ ಡುವದು.
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ.
ಆಗ ಕರ್ತನು ಅವನಿಗೆ-- ಫರಿಸಾಯರಾದ ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನ ದಿಂದಲೂ ತುಂಬಿರುತ್ತದೆ
ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
ಆದದರಿಂದ ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ದೇವರ ಎಲ್ಲಾ ವಾಗ್ದಾನ ಗಳು ಆತನಲ್ಲಿ ಹೌದಾಗಿವೆ, ಆತನಲ್ಲಿಯೇ ಆಮೆನ್ ಆಗಿವೆ.
ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.
ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.
ಇಷ್ಟ ರೊಳಗೆ ನಾನು ಪಡಕೊಂಡು ಸಿದ್ಧಿಗೆ ಬಂದವನೆಂದು ಹೇಳುವದಿಲ್ಲ; ನಾನು ಯಾವದನ್ನು ಹೊಂದುವದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಹಿಡಿದುಕೊಂಡನೊ ಅದನ್ನು ಹಿಡಿದುಕೊಳ್ಳುವದಕ್ಕೋಸ್ಕರ ಹಿಂದಟ್ಟುತ್ತಾ ಇದ್ದೇನೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.
ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧತೆಗೆ ಕರೆದನು.
ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ.
ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.
ಹೀಗಿರಲಾಗಿ ಆತನ ವಿಶ್ರಾಂತಿಯಲ್ಲಿ ಸೇರುವೆವೆಂಬ ವಾಗ್ದಾನವು ಇನ್ನೂ ಇರು ವಲ್ಲಿ ನಿಮ್ಮೊಳಗೆ ಯಾವನಾದರೂ ಆದರಿಂದ ತಪ್ಪುವವನಾದಾನೋ ಎಂದು ನಾವು ಭಯಪಡೋಣ.
ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ
ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.
ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಆತನು ಅತ್ಯಂತ ಮಹತ್ವ ವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯ ಪಾಲಿಸಿದ್ದಾನೆ.