ಆದರೂ ನಿಮಗೆ ದುಃಖವಾಯಿತೆಂದು ನಾನು ಸಂತೋಷಪಡದೆ ನೀವು ದುಃಖಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಈಗ ಸಂತೋಷ ಪಡುತ್ತೇನೆ; ಯಾಕಂದರೆ ನೀವು ದೇವರ ಚಿತ್ತಾನುಸಾರ ವಾಗಿ ದುಃಖಿಸಿದ್ದರಿಂದ ನಮ್ಮಿಂದ ಯಾವದರಲ್ಲಿಯೂ ನೀವು ನಷ್ಟಪಡಲಿಲ್ಲವಲ್ಲಾ.
Cross references
ನನ್ನ ಅಕ್ರಮವನ್ನು ತಿಳಿಸುವೆನು; ನನ್ನ ಪಾಪಕ್ಕೋಸ್ಕರ ದುಃಖಪಡುವೆನು.
ನಗೆಗಿಂತ ದುಃಖವು ವಾಸಿ; ಹೃದಯದ ದುಃಖದ ಭಾವನೆಯಿಂದ ಹೃದಯವು ಗುಣವಾಗುತ್ತದೆ.
ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು.
ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು.
ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ.
ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.
ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
ನಾವು ನಾಶವಾಗುವವರಿಗೆ ಮರಣದಿಂದಾದ ಮರಣದ ವಾಸನೆಯಾಗಿಯೂ ರಕ್ಷಿಸಲ್ಪಟ್ಟವರಿಗೆ ಜೀವದಿಂದಾದ ಜೀವದ ಸುವಾಸನೆ ಯಾಗಿಯೂ ಇದ್ದೇವೆ; ಹೀಗಿರುವಾಗ ಇವುಗಳಿಗೆ ಯೋಗ್ಯನು ಯಾರು?ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
ಆದಾಗ್ಯೂ ಕುಗ್ಗಿಹೋದ ವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದನು.
ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾನು ನಾಚಿಕಪಡುವದಿಲ್ಲ; ಆದರೆ ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಭಕ್ತವೃದ್ಧಿಗಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟನು.
ಸತ್ಯಕ್ಕೆ ವಿರುದ್ಧವಾಗಿ ನಾವೇನು ಮಾಡದೆ ಸತ್ಯಕ್ಕಾಗಿಯೇ ಮಾಡುತ್ತೇವೆ.