ಆದರೆ ನಿಮ್ಮ ವಿಷಯವಾಗಿ ಅದೇ ಹಿತಚಿಂತನೆ ಯನ್ನು ದೇವರು ತೀತನ ಹೃದಯದಲ್ಲಿ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಸ್ತೋತ್ರವಾಗಲಿ.
Cross references
ಹಿಜ್ಕೀಯನೂ ಪ್ರಧಾನರೂ ಬಂದು ರಾಶಿಗಳನ್ನು ನೋಡಿದಾಗ ಅವರು ಕರ್ತನನ್ನೂ ಆತನ ಜನವಾದ ಇಸ್ರಾಯೇ ಲನ್ನೂ ಸ್ತುತಿಸಿದರು.
ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
ಆದರೆ ಯೆರೂಸಲೇಮಿಗೋಸ್ಕರ ಮಾಡಲು ನನ್ನ ದೇವರು ನನ್ನ ಹೃದಯದಲ್ಲಿ ಇಟ್ಟದ್ದನ್ನು ಯಾರಿಗೂ ತಿಳಿಸದೆ ಇದ್ದೆನು; ನಾನು ಹತ್ತಿಕೊಂಡಿದ್ದ ಪಶುವಿನ ಹೊರತು ಮತ್ತೊಂದು ಪಶುವು ನನ್ನ ಸಂಗಡ ಇರಲಿಲ್ಲ.
ಈ ಪಟ್ಟಣವು ಅದು ಕಟ್ಟಲ್ಪಟ್ಟ ದಿನವು ಮೊದಲುಗೊಂಡು ಈ ದಿನದ ವರೆಗೂ ನನ್ನ ಕೋಪಕ್ಕೂ ಉಗ್ರಕ್ಕೂ ಗುರಿಯಾಗಿತ್ತು.
ಆದರೂ ನನ್ನ ಸಹೋದರನಾದ ತೀತನು ನನಗೆ ಸಿಕ್ಕಲಿಲ್ಲವಾದ ಕಾರಣ ನನ್ನ ಆತ್ಮಕ್ಕೆ ಉಪಶಮನವಿಲ್ಲದೆ ಅಲ್ಲಿದ್ದವರಿಂದ ಕಳುಹಿಸಿ ಕೊಂಡವನಾಗಿ ಹೊರಟು ಮಕೆದೋನ್ಯಕ್ಕೆ ಬಂದೆನು.
ಅವನ ಬರುವಿಕೆಯಿಂದಮಾತ್ರವಲ್ಲದೆ ಅವನು ನಿಮ್ಮ ಯಥಾರ್ಥವಾದ ಹಂಬಲ, ನಿಮ್ಮ ಗೋಳಾಟ, ನನ್ನ ಕಡೆಗಿರುವ ನಿಮ್ಮ ಆಸಕ್ತಿಯ ಮನಸ್ಸು ಮತ್ತು ತಾನು ನಿಮ್ಮಲ್ಲಿ ಹೊಂದಿದ ಆದರಣೆ ಇವುಗಳನ್ನು ನಮಗೆ ತಿಳಿಸಿದಾಗ ನಾನು ಹೆಚ್ಚಾಗಿ ಸಂತೋಷಪಟ್ಟೆನು.
ನಾನು ಹೀಗೆ ನಿಮಗೆ ಬರೆದದ್ದು ಅನ್ಯಾಯ ಮಾಡಿದವನಿ ಗೋಸ್ಕರವಲ್ಲ, ಅನ್ಯಾಯ ಸಹಿಸಿದವನಿಗೋಸ್ಕರವೂ ಅಲ್ಲ; ದೇವರ ದೃಷ್ಟಿಯಲ್ಲಿ ನಿಮಗೋಸ್ಕರ ನಮಗಿರುವ ಚಿಂತೆಯು ನಿಮಗೆ ತೋರಿ ಬರುವದಕ್ಕೋಸ್ಕರವೇ ಬರೆದೆನು.
ಅವನ ಹಾಗೆ ನಿಮ್ಮ ಕಾರ್ಯಗಳನ್ನು ಕುರಿತು ಸ್ವಾಭಾವಿಕವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ.
ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
ಯಾಕಂದರೆ ಅವರು ದೇವರ ಚಿತ್ತವನ್ನು ನೆರವೇರಿಸುವದಕ್ಕೆ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವಂತೆ ದೇವರು ತನ್ನ ವಾಕ್ಯಗಳು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರೇಪಿಸಿದನು.ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.