ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.
Cross references
ಬಡತನವು ನಿನ್ನ ಮಧ್ಯದಲ್ಲಿರದ ಹಾಗೆ; ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನಪಡಿಸಿಕೊಳ್ಳು ವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಕರ್ತನು ನಿನ್ನನ್ನು ಬಹಳವಾಗಿ ಆಶೀರ್ವದಿಸುವನು.
ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ.
ಉದಾರಿಯು ಪುಷ್ಠನಾಗು ವನು; ನೀರು ಹಾಯಿಸುವವನಿಗೆ ನೀರು ದೊರೆಯು ವದು.
ಇನ್ನು ಮೇಲೆ ನೀಚ ಮನುಷ್ಯನು ಘನವಂತನೆನಿಸಿಕೊಳ್ಳನು. ಇಲ್ಲವೆ ಜಿಪುಣನು ಉದಾರ ನೆಂದು ಹೇಳಲಾಗದು.
ಆಗ ಅಲ್ಲಿ ಒಬ್ಬ ಬಡ ವಿಧವೆಯು ಬಂದು ಒಂದು ಫಾರ್ದಿಂಗದಷ್ಟು ಎರಡು ನಾಣ್ಯಗಳನ್ನು ಹಾಕಿದಳು.
ಇದಲ್ಲದೆ ಐಶ್ವರ್ಯವಂತರು ತಮ್ಮ ಕಾಣಿಕೆಗಳನ್ನು ಬೊಕ್ಕಸದಲ್ಲಿ ಹಾಕುವದನ್ನು ಆತನು ಕಣ್ಣೆತ್ತಿ ನೋಡಿದನು.
ಅವರು ಚರಸ್ಥಿರಾಸ್ತಿಗಳನ್ನು ಮಾರಿ ಪ್ರತಿಯೊಬ್ಬನಿಗೆ ಅಗತ್ಯವಿದ್ದ ಹಾಗೆ ಹಂಚಿ ಕೊಟ್ಟರು.
ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ.
ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.
ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು.
ಈ ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು.
ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನನ್ನೂ ಅನುಸರಿಸುವವರಾದಿರಿ.
ಸಹೋ ದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನ ಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.
ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ.
ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ.