ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ.
Cross references
ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು.
ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.
ಚದುರಿಸಿದಾಗ್ಯೂ ವೃದ್ಧಿಯಾಗುತ್ತದೆ; ಬೇಕಾದದ್ದಕ್ಕಿಂತ ಹೆಚ್ಚಿನದನ್ನು ಬಿಗಿಹಿಡಿಯುವಂಥದ್ದು ಬಡತನಕ್ಕೆ ನಡಿಸುತ್ತದೆ.
ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
ದಯಾದೃಷ್ಟಿಯುಳ್ಳವನು ಆಶೀ ರ್ವಾದವನ್ನು ಹೊಂದುವನು; ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.
ನಿನ್ನ ರೊಟ್ಟಿಯನ್ನು ನೀರಿನ ಮೇಲೆ ಹಾಕು, ಬಹಳ ದಿನಗಳ ಮೇಲೆ ಅದು ನಿನಗೆ ಸಿಗುವದು.
ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು, ಸಂಜೆ ತನಕ ನಿನ್ನ ಕೈಯನ್ನು ಹಿಂತೆಗೆಯಬೇಡ; ಇದೋ, ಅದೋ ಯಾವದೋ ಕೈಗೂಡಿ ಬರು ವದೋ ಇಲ್ಲವೆ ಎರಡೂ ಒಂದೇ ರೀತಿ ಒಳ್ಳೆಯದಾ ಗುವವೋ ಎಂದು ನಿನಗೆ ತಿಳಿಯದು.
ಕೊಡಿರಿ, ಆಗ ನಿಮಗೂ ಕೊಡ ಲ್ಪಡುವದು. ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು; ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು.
ಆಗ ಮೊದಲನೆಯವನು ಬಂದು--ಒಡೆಯನೇ, ನಿನ್ನ ಮೊಹರಿನಿಂದ ಹತ್ತು ಮೊಹರಿಗಳನ್ನು ಸಂಪಾದಿಸಿದ್ದೇನೆ ಅಂದನು.
ಅದಕ್ಕೆ ಅವನು ಅದೇ ಪ್ರಕಾರ--ನೀನು ಸಹ ಐದು ಪಟ್ಟಣಗಳ ಮೇಲಿರು ಎಂದು ಅವನಿಗೆ ಹೇಳಿದನು.
ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.
ಆದರೆ ಸಹೋದರರೇ, ನಾನು ಹೇಳುವದೇ ನಂದರೆ--ಸಮಯವು ಸಂಕೋಚವಾದದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವ ರಂತೆಯೂ
ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು.
ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.)
ನಾನು ಹೇಳುವದೇನಂದರೆ, ದೇವರು ಕ್ರಿಸ್ತನಲ್ಲಿ ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರುಷಗಳ ಮೇಲೆ ಬಂದ ನ್ಯಾಯಪ್ರಮಾಣವು ರದ್ದು ಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವದಿಲ್ಲ.
ನಾನು ಹೇಳುವದೇನಂದರೆ, ಆತ್ಮನನ್ನು ಅನು ಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರಭಾವದ ಅಭಿಲಾಷೆಯನ್ನು ಎಷ್ಟು ಮಾತ್ರಕ್ಕೂ ನೆರವೇರಿಸು ವದಿಲ್ಲ.
ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.
ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ;
ಯಾರಾದರೂ ರಂಜನೆಯಾದ ಮಾತುಗಳಿಂದ ನಿಮ್ಮನ್ನು ಮೋಸಗೊಳಿಸಿಯಾರೆಂದು ನಾನು ಇದನ್ನು ಹೇಳುತ್ತೇನೆ.
ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.