ಆಗ ಅರಸನು ಐವತ್ತು ಮಂದಿಗೆ ಪ್ರಧಾನನನ್ನು ಅವನ ಐವತ್ತು ಮಂದಿಯ ಸಂಗಡ ಇವನ ಬಳಿಗೆ ಕಳುಹಿಸಿದನು. ಅವನು ಇವನ ಬಳಿಗೆ ಹೋದಾಗ ಇಗೋ, ಇವನು ಬೆಟ್ಟದ ತುದಿಯ ಮೇಲೆ ಕುಳಿತಿದ್ದನು. ಆಗ ಅವನು ಎಲೀಯನಿಗೆ--ದೇವರ ಮನುಷ್ಯನೇ, ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು.
Cross references
ಇದು ಸೌಲನಿಗೆ ತಿಳಿಸಲ್ಪಟ್ಟಾಗ ಅವನು ಬೇರೆ ದೂತರನ್ನು ಕಳುಹಿಸಿದನು; ಅವರೂ ಹಾಗೆಯೇ ಪ್ರವಾದಿಸಿದರು. ಮೂರನೆಯ ಸಾರಿ ಸೌಲನು ದೂತ ರನ್ನು ಕಳುಹಿಸಿದನು; ಅವರೂ ಹಾಗೆಯೇ ಪ್ರವಾದಿ ಸಿದರು.
ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.
ಈಜೆಬೆ ಲಳು ಕರ್ತನ ಪ್ರವಾದಿಗಳನ್ನು ಕೊಲ್ಲುವಾಗ ಓಬ ದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಐವತ್ತು ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು ಅವರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.)
ನಿನ್ನ ದೇವರಾದ ಕರ್ತನ ಜೀವದಾಣೆ, ನನ್ನ ಯಜಮಾನನು ನಿನ್ನನ್ನು ಹುಡುಕಲು ಕಳುಹಿಸದ ಜನಾಂಗವೂ ರಾಜ್ಯವೂ ಒಂದೂ ಇಲ್ಲ. ಅವರು--ಅವನು ಇಲ್ಲ ಎಂದು ಹೇಳಿ ದಾಗ ಅವರು ನಿನ್ನನ್ನು ಕಂಡಿದ್ದಿಲ್ಲವೆಂದು ರಾಜ್ಯಕ್ಕೂ ಜನಾಂಗಕ್ಕೂ ಆಣೆ ಇಡಿಸಿಕೊಂಡನು.
ಅಹಾಬನು ತಿಂದು ಕುಡಿಯು ವದಕ್ಕೆ ಹೋದನು; ಎಲೀಯನು ಕರ್ಮೆಲ್ ಬೆಟ್ಟಕ್ಕೆ ಏರಿ ನೆಲದ ಮೇಲೆ ಬಿದ್ದು ತನ್ನ ಮುಖವನ್ನು ತನ್ನ ಮೊಣಕಾಲುಗಳ ನಡುವೆ ಬೊಗ್ಗಿಸಿ
ಈಜೆಬೆಲಳು ಎಲೀಯನ ಬಳಿಗೆ ದೂತ ನನ್ನು ಕಳುಹಿಸಿ--ನಾನು ನಾಳೆ ಇಷ್ಟು ಹೊತ್ತಿಗೆ ಅವ ರಲ್ಲಿರುವ ಒಬ್ಬೊಬ್ಬನ ಪ್ರಾಣದ ಹಾಗೆ ನಿನ್ನ ಪ್ರಾಣಕ್ಕೂ ಮಾಡದೆ ಹೋದರೆ ದೇವರುಗಳು ನನಗೆ ಹೀಗೆಯೂ ಹೆಚ್ಚಾಗಿಯೂ ಮಾಡಲಿ ಎಂದು ಹೇಳಿದಳು.
ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.
ಆಗ ಇಸ್ರಾಯೇಲಿನ ಅರಸನು ಹೇಳಿದ್ದೇ ನಂದರೆ -- ವಿಾಕಾಯೆಹುನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗ ನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ತಕ್ಕೊಂಡುಹೋಗಿ
ಅವನು ಆ ಸ್ಥಳವನ್ನು ಬಿಟ್ಟು ಕರ್ಮೆಲು ಬೆಟ್ಟಕ್ಕೆ ಹೋದನು; ಅಲ್ಲಿಂದ ಸಮಾರ್ಯಕ್ಕೆ ಹಿಂತಿರುಗಿದನು.
ಆಗ ಏನಾಯಿತಂದರೆ, ದೇವರ ಮನುಷ್ಯನು ದೂರದಿಂದ ಅವಳನ್ನು ನೋಡಿ ಅವನು ತನ್ನ ಸೇವಕನಾದ ಗೇಹಜಿಗೆ -- ಇಗೋ, ಆ ಶೂನೇಮ್ಯಳು.
ಆಗ ಅವನು--ನಾನು ಕಳುಹಿಸಿ ಅವನನ್ನು ಹಿಡಿಯುವ ಹಾಗೆ ನೀನು ಹೋಗಿ ಅವನು ಎಲ್ಲಿದ್ದಾನೋ ನೋಡಿರಿ ಅಂದನು. ಆಗ ಇಗೋ, ದೋತಾನಿನಲ್ಲಿದ್ದಾನೆಂದು ಅವನಿಗೆ ತಿಳಿಸಿದರು.
ಇನ್ನೂ ಅಮಚ್ಯನು ಆಮೋಸನಿಗೆ ಹೇಳಿದ್ದೇನಂದರೆ--ಓ ದರ್ಶಿಯೇ, ಯೆಹೂದ ದೇಶಕ್ಕೆ ಓಡಿಹೋಗು; ಅಲ್ಲಿ ರೊಟ್ಟಿ ತಿಂದು ಅಲ್ಲಿಯೇ ಪ್ರವಾದಿಸು.
ಯಾಕಂದರೆ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾಗಿದ್ದ ಹೆರೋದ್ಯಳ ನಿಮಿತ್ತವಾಗಿ ಯೋಹಾನನನ್ನು ಹಿಡಿದು ಕಟ್ಟಿ ಸೆರೆಯಲ್ಲಿ ಹಾಕಿದ್ದನು.
ಕ್ರಿಸ್ತನೇ, ನಿನ್ನನ್ನು ಹೊಡೆದವರು ಯಾರು? ನಮಗೆ ಪ್ರವಾದನೆ ಹೇಳು ಅಂದರು.
ತರುವಾಯ ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು ಅದನ್ನು ಆತನ ತಲೆಯ ಮೇಲಿಟ್ಟು ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ--ಯೆಹೂದ್ಯರ ಅರಸನೇ, ವಂದನೆ ಎಂದು ಹೇಳಿ ಆತನನ್ನು ಹಾಸ್ಯಮಾಡಿದರು.
ಅದೇ ಮೇರೆಗೆ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನಿಗೆ ಹಾಸ್ಯ ಮಾಡಿ--
ಇದ ಲ್ಲದೆ ಹಾದುಹೋಗುತ್ತಿದ್ದವರು ತಮ್ಮ ತಲೆಗಳನ್ನು ಅಲ್ಲಾಡಿಸಿ-ಹಾ! ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ,
ಇಸ್ರಾಯೇ ಲ್ಯರ ಅರಸನಾದ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ನಾವು ನೋಡಿ ನಂಬುವೆವು ಎಂದು ತಮ್ಮಲ್ಲಿ ಅಂದುಕೊಂಡರು; ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರೂ ಆತನನ್ನು ದೂಷಿಸಿದರು.
ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.