ಯೇಹುವು ಅಲ್ಲಿಂದ ಹೋಗಿ ತನ್ನನ್ನು ಎದುರು ಗೊಳ್ಳಲು ರೇಕಾಬನ ಮಗನಾದ ಯೆಹೋನಾದಾ ಬನನ್ನು ಕಂಡು ಅವನನ್ನು ವಂದಿಸಿ ಅವನಿಗೆ--ನನ್ನ ಹೃದಯವು ನಿನ್ನ ಹೃದಯದೊಂದಿಗೆ ಇರುವಂತೆ ನಿನ್ನ ಹೃದಯವು ನನ್ನೊಂದಿಗೆ ಸರಿಯಾಗಿದೆಯೋ ಅಂದನು. ಯೆಹೋನಾದಾಬನು--ಅದೆ ಅಂದನು. ಹಾಗಾದರೆ ನಿನ್ನ ಕೈಕೊಡು ಅಂದನು. ಇವನು ತನ್ನ ಕೈಕೊಟ್ಟನು. ತನ್ನ ಬಳಿಗೆ ರಥದ ಮೇಲೆ ಏರಿಸಿಕೊಂಡು ಅವ ನಿಗೆ--
Cross references
ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
ಯೋಸೇಫನು ತನ್ನ ತಂದೆಯಾದ ಯಾಕೋಬ ನನ್ನು ಕರಕೊಂಡು ಬಂದು ಫರೋಹನ ಮುಂದೆ ನಿಲ್ಲಿಸಿದನು. ಯಾಕೋಬನು ಫರೋಹನನ್ನು ಆಶೀರ್ವ ದಿಸಿದನು.
ಆಗ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.
ಈಗ ಆ ಮನುಷ್ಯರು ಅವನ ಮಾತಿನಲ್ಲಿ ಏನಾದರೂ ಬಂದೀತೆಂದು ಜಾಗ್ರೆತೆ ಯಿಂದ ನೋಡಿಕೊಂಡು ಅದನ್ನು ಅವಸರದಿಂದ ಹಿಡಿದರು. ಅವರು--ನಿನ್ನ ಸಹೋದರನಾದ ಬೆನ್ಹದ ದನು ಎಂದು ಹೇಳಿದರು. ಆಗ ಅವನು--ನೀವು ಹೋಗಿ ಅವನನ್ನು ಕರೆತನ್ನಿರಿ ಅಂದನು. ಬೆನ್ಹದದನು ಅವನ ಬಳಿಗೆ ಬಂದಾಗ ಅವನು ಇವನನ್ನು ರಥದ ಲ್ಲೇರ ಮಾಡಿದನು.
ಯೋರಾಮನು ರಥಹೂಡಬೇಕೆಂದು ಹೇಳಿದನು. ಅವನ ರಥವು ಸಿದ್ಧವಾಯಿತು. ಆಗ ಇಸ್ರಾಯೇಲಿನ ಅರಸನಾದ ಯೋರಾಮನೂ ಯೆಹೂ ದದ ಅರಸನಾದ ಅಹಜ್ಯನೂ ಹೊರಟು ಅವನವನು ತನ್ನ ತನ್ನ ರಥದಲ್ಲಿ ಏರಿ ಯೇಹುವಿಗೆ ಎದುರಾಗಿ ಹೊರಟು ಇಜ್ರೇಲ್ಯನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.
ಯೆಹೂ ದದ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ--ನೀವು ಯಾರು ಅಂದನು. ಅದಕ್ಕವರು--ನಾವು ಅಹಜ್ಯನ ಸಹೋದರರು; ಅರಸನ ಮಕ್ಕ ಳನ್ನೂ ರಾಣಿಯ ಮಕ್ಕಳನ್ನೂ ವಂದಿಸಲು ಹೋಗುತ್ತೇವೆ ಅಂದರು.
ಯಾಬೇಚಿನಲ್ಲಿ ವಾಸವಾಗಿದ್ದ ಸಂತತಿಗಳು ಯಾರಂದರೆ, ತಿರ್ರಾತ್ಯರು, ಶಿಮ್ಗಾತ್ಯರು, ಸೂಕಾತ್ಯರು; ಇವರೇ ರೇಕಾಬನ ಮನೆಗೆ ತಂದೆಯಾದ ಹಮತನಿಂದ ಹುಟ್ಟಿದ ಕೇನ್ಯರು.
ಆಗ ದಾವೀದನು ಅವರನ್ನು ಎದುರು ಗೊಳ್ಳಲು ಹೊರಟುಹೋಗಿ ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದು--ನನಗೆ ಸಹಾಯವಾಗಿ ನನ್ನ ಬಳಿಗೆ ನೀವು ಸಮಾಧಾನವಾಗಿ ಬಂದರೆ ನನ್ನ ಹೃದಯವು ನಿಮ್ಮ ಸಂಗಡ ಏಕವಾಗಿರುವದು. ಆದರೆ ದೋಷವು ನನ್ನ ಕೈಗಳಲ್ಲಿ ಇಲ್ಲದಿರುವಾಗ ನೀವು ನನ್ನ ವೈರಿಗಳಿಗೆ ನನ್ನನ್ನು ಮೋಸದಿಂದ ಒಪ್ಪಿಸಿಕೊಡಲು ಬಂದರೆ ನಮ್ಮ ಪಿತೃ ಗಳ ದೇವರು ನೋಡಿ ಗದರಿಸಲಿ ಅಂದನು.
ಆಗ ಆತ್ಮನು ಅದಿಪತಿಗಳ ಮುಖ್ಯಸ್ಥನಾದ ಅಮಸಾಯಿಯ ಮೇಲೆ ಬಂದನು; ಆಗ ಅವನು--ದಾವೀದನೇ, ನಾವು ನಿನ್ನವರು; ಇಷಯನ ಮಗನೇ, ನಾವು ನಿನ್ನ ಕಡೆಯವ ರಾಗಿದ್ದೇವೆ; ಸಮಾಧಾನ, ನಿನಗೆ ಸಮಾಧಾನ; ನಿನ್ನ ಸಹಾಯಕರಿಗೆ ಸಮಾಧಾನ; ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾನೆ ಅಂದನು. ಆಗ ದಾವೀದನು ಅವರನ್ನು ಅಂಗೀಕರಿಸಿ ಅವರನ್ನು ದಂಡಿನ ಅಧಿಪತಿ ಗಳಾಗಿ ಮಾಡಿದನು.
ಇವರು ತಮ್ಮ ಸ್ತ್ರೀಯರನ್ನು ಹೊರಡಿಸಿ ಬಿಡುವೆವೆಂದು ತಮ್ಮ ಕೈಕೊಟ್ಟು ತಾವು ಅಪರಾಧಸ್ತರಾದದರಿಂದ ಅಪರಾಧ ಕಳೆಯುವದಕ್ಕೆ ಮಂದೆಯಿಂದ ತಂದ ಒಂದು ಟಗ ರನ್ನು ಅರ್ಪಿಸಿದರು.
ಆದರೆ ಬೆತ್ಹಕ್ಕೆರೆಮಿನ ಅರ್ಧಪಾಲಿಗೆ ಅಧಿಪತಿ ಯಾಗಿರುವ ರೆಕಾಬನ ಮಗನಾದ ಮಲ್ಕೀಯನು ತಿಪ್ಪೆ ಬಾಗಲನ್ನು ಭದ್ರಪಡಿಸಿದನು; ಇವನು ಅದನ್ನು ಕಟ್ಟಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದನು.
ನನಗೋಸ್ಕರ ದುರ್ಮಾರ್ಗಿಗಳಿಗೆ ವಿರೋಧ ವಾಗಿ ಏಳುವವನ್ಯಾರು? ಇಲ್ಲವೆ ಅಪರಾಧ ಮಾಡು ವವರಿಗೆ ವಿರೋಧವಾಗಿ ನನಗೋಸ್ಕರ ನಿಂತು ಕೊಳ್ಳುವವನಾರು?
ಆದದರಿಂದ ನೀನು ಹೋಗಿ ನನ್ನ ಬಾಯಿಂದ ಕೇಳಿ ನೀನು ಬರೆದ ಸುರಳಿಯಲ್ಲಿ ಕರ್ತನ ಆಲಯದೊಳಗೆ ಉಪವಾಸದ ದಿವಸದಲ್ಲಿ ಕರ್ತನ ವಾಕ್ಯಗಳನ್ನು ಜನರಿಗೆ ಕೇಳುವಂತೆ ಓದಿ ಹೇಳು ಮತ್ತು ತಮ್ಮ ಪಟ್ಟಣಗಳಿಂದ ಬರುವ ಯೆಹೂದದವರೆಲ್ಲರೂ ಕೇಳುವಂತೆಯೂ ಅವುಗಳನ್ನು ಓದಿ ಹೇಳಬೇಕು.
ಆದದರಿಂದ ಪ್ರಧಾನರೆಲ್ಲರೂ ಕೂಷಿಯ ಮಗನಾದ ಶೆಲೆಮ್ಯನ ಮಗನಾದ ನೆಥನ್ಯನ ಮಗನಾದ ಯೆಹೂದಿಯನ್ನು ಬಾರೂಕನ ಬಳಿಗೆ ಕಳುಹಿಸಿ--ನೀನು ಜನರಿಗೆ ಓದಿ ಹೇಳಿದ ಸುರಳಿಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಬಾ ಎಂದು ಹೇಳಿದರು; ಹಾಗೆಯೇ ನೇರೀಯನ ಮಗನಾದ ಬಾರೂಕನು ಸುರಳಿಯನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು.
ಅವನು ಪ್ರಮಾಣವನ್ನು ತಿರಸ್ಕರಿಸಿ ಕೈಕೊಟ್ಟಾಗ್ಯೂ; ಇಗೋ, ಒಡಂಬಡಿಕೆಯನ್ನು ವಿಾರಿ ಇವುಗಳನ್ನೆಲ್ಲಾ ಮಾಡಿದ್ದ ರಿಂದ ತಪ್ಪಿಸಿಕೊಳ್ಳುವದಿಲ್ಲ.
ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ
ಅವನು-ಯಾರಾದರೂ ನನಗೆ ತಿಳಿಸದ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ ಫಿಲಿಪ್ಪನು ಮೇಲಕ್ಕೆ ಬಂದು ತನ್ನ ಬಳಿಯಲ್ಲಿ ಕೂತುಕೊಳ್ಳಬೇಕೆಂದು ಅವನು ಅಪೇಕ್ಷೆಪಟ್ಟನು.
ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.
ಸಹೋದರರೇ, ನಾನು ನಿಮ್ಮ ಹಾಗೆ ಆದದ್ದ ರಿಂದ ನೀವೂ ನನ್ನ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಕೇಡು ಮಾಡ ಲಿಲ್ಲ.