ಹಾಗೆಯೇ ಅವರನ್ನು ಕತ್ತಿಯಿಂದ ಸಂಹರಿಸಿದರು. ಕಾವಲು ಗಾರನೂ ಅಧಿಪತಿಗಳೂ ಅವರನ್ನು ಹೊರಗೆ ಹಾಕಿದ ತರುವಾಯ ಬಾಳನ ಮನೆಯ ಪಟ್ಟಣಕ್ಕೆ ಹೋಗಿ ಬಾಳನ ಮನೆಯಿಂದ ವಿಗ್ರಹವನ್ನು ತಂದು ಅವುಗಳನ್ನು ಸುಟ್ಟುಬಿಟ್ಟರು.
Cross references
ಅವರಿಗೆ ಮಾಡಬೇಕಾದ ದ್ದೇನಂದರೆ ಅವರ ಬಲಿಪೀಠಗಳನ್ನು ಒಡೆದುಹಾಕ ಬೇಕು; ಅವರ ವಿಗ್ರಹಗಳನ್ನು ಮುರಿದುಹಾಕಬೇಕು; ಅವರ ತೋಪುಗಳನ್ನು ಕಡಿದುಹಾಕಬೇಕು; ಅವರು ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು.
ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟುಹೋದದರಿಂದ ದಾವೀದನೂ ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು.
ಅವರು ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ ಹಸುರಾದ ಪ್ರತಿ ಗಿಡದ ಕೆಳಗೂ ತೋಪು ಗಳನ್ನು ವಿಗ್ರಹಗಳನ್ನು ಉನ್ನತ ಸ್ಥಳಗಳನ್ನು ತಮಗಾಗಿ ಮಾಡಿಕೊಂಡರು. ಇದಲ್ಲದೆ ದೇಶದಲ್ಲಿ ಪುರುಷ ಸಂಗಮರಿದ್ದರು.
ಇದಲ್ಲದೆ ಆಸನು ತನ್ನ ತಾಯಿಯಾದ ಮಾಕಾ ತೋಪಿನಲ್ಲಿ ಒಂದು ವಿಗ್ರಹವನ್ನು ಮಾಡಿಸಿ ಇಟ್ಟದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿ ಅವಳ ವಿಗ್ರಹ ವನ್ನು ಕಡಿದುಬಿಟ್ಟು ಕಿದ್ರೋನೆಂಬ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.
ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ತನ್ನ ತಂದೆ ತಾಯಿಯ ಹಾಗೂ ಅಲ್ಲ; ತನ್ನ ತಂದೆಯು ಮಾಡಿಟ್ಟ ಬಾಳನ ಸ್ತಂಭವನ್ನು ತೆಗೆದುಹಾಕಿದನು.
ದೇಶದ ಜನರೆಲ್ಲರೂ ಬಾಳನ ಮನೆಯಲ್ಲಿ ಹೊಕ್ಕು ಅದನ್ನು ಕೆಡವಿಹಾಕಿ ಅವನ ಬಲಿಪೀಠಗಳನ್ನೂ ವಿಗ್ರಹ ಗಳನ್ನೂ ಸಂಪೂರ್ಣವಾಗಿ ತುಂಡುತುಂಡಾಗಿ ಒಡೆದು ಬಿಟ್ಟು ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು. ಇದಲ್ಲದೆ ಯಾಜಕನು ಕರ್ತನ ಮನೆಯಲ್ಲಿ ಅಧಿಕಾರಿಗಳನ್ನು ನೇಮಿಸಿ ದನು.
ಅವನು ಉನ್ನತ ಸ್ಥಳಗಳನ್ನು ತೆಗೆದುಹಾಕಿ, ವಿಗ್ರಹ ಗಳನ್ನು ಒಡೆದುಬಿಟ್ಟು, ತೋಪುಗಳನ್ನು ಕಡಿದುಹಾಕಿ, ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಆ ದಿವಸಗಳ ವರೆಗೂ ಇಸ್ರಾ ಯೇಲಿನ ಮಕ್ಕಳು ಅದಕ್ಕೆ ಧೂಪಸುಡುತ್ತಿದ್ದರು. ಅದನ್ನು ತಾಮ್ರದ ತುಂಡು ಎಂದು ಅವನು ಕರೆದನು.
ಅವು ದೇವರುಗಳಲ್ಲ, ಮನುಷ್ಯನ ಕೈಕೆಲಸವಾದ ಕಟ್ಟಿಗೆಯೂ ಕಲ್ಲೂ ಆಗಿದ್ದವು.
ಅರ ಸನು--ಬಾಳನಿಗೋಸ್ಕರವೂ ವಿಗ್ರಹದ ತೋಪುಗಳಿ ಗೋಸ್ಕರವೂ ಆಕಾಶದ ಸೈನ್ಯಕ್ಕೋಸ್ಕರವೂ ಮಾಡ ಲ್ಪಟ್ಟಿದ್ದ ಎಲ್ಲಾ ಪಾತ್ರೆಗಳನ್ನು ಕರ್ತನ ಆಲಯದಿಂದ ಹೊರಗೆ ತಕ್ಕೊಂಡು ಬರಬೇಕೆಂದು ಪ್ರಧಾನ ಯಾಜಕ ನಾದ ಹಿಲ್ಕೀಯನಿಗೂ ಎರಡನೇ ತರಗತಿಯ ಯಾಜಕ ರಿಗೂ ದ್ವಾರಪಾಲಕರಿಗೂ ಆಜ್ಞಾಪಿಸಿದನು ಮತ್ತು ಅವನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಸುಡಿಸಿ ಅವುಗಳ ಬೂದಿ ಯನ್ನು ಬೇತೇಲಿಗೆ ತರುವಂತೆ ಮಾಡಿದನು.
ಕರ್ತನ ಆಲಯದೊ ಳಗಿಂದ ವಿಗ್ರಹದ ತೋಪನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ಅದನ್ನು ತರಿಸಿ ಅವನು ಕಿದ್ರೋನ್ ಹಳ್ಳದ ಬಳಿಯಲ್ಲಿ ಸುಟ್ಟು ಧೂಳಾಗಿ ಪುಡಿಮಾಡಿ ಆ ಧೂಳಿನ ಪುಡಿಯನ್ನು ಜನರ ಸಮಾಧಿ ಗಳ ಮೇಲೆ ಹಾಕಿಸಿದನು.
ಯೆಹೂದದ ಅರಸರು ಉಂಟು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ ಮನಸ್ಸೆಯು ಕರ್ತನ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠ ಗಳನ್ನೂ ಅರಸನು ಕೆಡವಿಸಿ ಅಲ್ಲಿಂದ ಅದರ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.
ಫಿಲಿಷ್ಟಿಯರು ತಮ್ಮ ದೇವರು ಗಳನ್ನು ಅಲ್ಲಿ ಬಿಟ್ಟುಬಿಟ್ಟದ್ದರಿಂದ ದಾವೀದನು ಅಪ್ಪಣೆ ಕೊಟ್ಟಾಗ ಬೆಂಕಿಯಿಂದ ಅವು ಸುಡಲ್ಪಟ್ಟವು.
ಅವನು ಬಲಿಪೀಠಗಳನ್ನೂ ತೋಪುಗಳನ್ನೂ ಕೆಡವಿ ಹಾಕಿ ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿ ಮಾಡಿ ಇಸ್ರಾಯೇಲ್ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡಿಸಿದ ತರುವಾಯ ಯೆರೂಸಲೇಮಿಗೆ ಹಿಂತಿರುಗಿದನು.