ಅವಳು ದೃಷ್ಟಿಸಿ ನೋಡುವಾಗ ಇಗೋ, ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿ ಯಲ್ಲಿ ನಿಂತಿದ್ದನು. ಪ್ರಧಾನರೂ ತುತೂರಿ ಊದು ವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದಿದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.
Cross references
ರೂಬೇನನು ತಗ್ಗಿನ ಬಳಿಗೆ ತಿರಿಗಿ ಬಂದಾಗ ಇಗೋ, ಯೋಸೇಫನು ತಗ್ಗಿನಲ್ಲಿ ಇಲ್ಲದ್ದರಿಂದ ತನ್ನ ವಸ್ತ್ರಗಳನ್ನು ಹರಿದು ಕೊಂಡನು.
ಆಗ ಅವರು ತಮ್ಮ ವಸ್ತ್ರಗಳನ್ನು ಹರಿದುಕೊಂಡು ತಮ್ಮ ತಮ್ಮ ಕತ್ತೆಗಳ ಮೇಲೆ ಚೀಲಗಳನ್ನು ಹೇರಿಸಿ ಪಟ್ಟಣಕ್ಕೆ ಮರಳಿ ಬಂದರು.
ಕರ್ತನು ಮೋಶೆಗೆ ಹೇಳಿದ್ದೇನೆಂದರೆ
ಈ ಹೊತ್ತು ಅವನು ಇಳಿದು ಹೋಗಿ ಎತ್ತು ಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಅನೇಕ ವಾಗಿ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಸೈನ್ಯಾಧಿಪತಿ ಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಕರೆದಿ ದ್ದಾನೆ. ಇಗೋ, ಅವರು ಅವನ ಮುಂದೆ ತಿಂದು, ಕುಡಿದು--ಅರಸನಾದ ಅದೋನೀಯನನ್ನು ದೇವರು ರಕ್ಷಿಸಲಿ ಎಂದು ಅನ್ನುತ್ತಾರೆ.
ಆಗ ಯಾಜಕನಾದ ಚಾದೋಕನು ಗುಡಾರದೊಳಗಿಂದ ತೈಲದ ಕೊಂಬನ್ನು ತಂದು ಸೊಲೊಮೋನನನ್ನು ಅಭಿಷೇಕಿಸಿದನು. ಅವರು ತುತೂರಿಯನ್ನು ಊದಿದರು. ಆಗ ಜನರೆಲ್ಲರು--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅಂದರು.
ಅಹಾಬನು ಎಲೀಯನನ್ನು ನೋಡಿದಾಗ ಅವನಿಗೆ--ಇಸ್ರಾಯೇಲ್ಯರನ್ನು ಕಳವಳ ಗೊಳಿಸುವವನು ನೀನಲ್ಲವೋ ಅಂದನು.
ಆಗ ಅವರು ತ್ವರೆ ಪಟ್ಟು ಪ್ರತಿಯೊಬ್ಬನು ತನ್ನ ವಸ್ತ್ರವನ್ನು ತೆಗೆದು ಮೆಟ್ಟಲುಗಳ ಮೇಲೆ ಹಾಸಿ ಇವನನ್ನು ಕುಳ್ಳಿರಿಸಿ ತುತೂರಿಗಳನ್ನು ಊದಿ -- ಯೇಹುವು ಅರಸನಾಗಿ ದ್ದಾನೆಂದು ಹೇಳಿದರು.
ಆಗ ಯೋರಾ ಮನು ಅಹಜ್ಯನಿಗೆ--ಅಹಜ್ಯನೇ, ದ್ರೋಹ ಎಂದು ಹೇಳಿ ತನ್ನ ಕೈ ತಿರುಗಿಸಿಕೊಂಡು ಓಡಿಹೋದನು.
ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತು ಹೋದದ್ದನ್ನು ನೋಡಿ ಎದ್ದು ರಾಜ ಸಂತಾನದವರನ್ನೆಲ್ಲಾ ನಾಶಮಾಡಿದಳು.
ಆಗ ಯಾಜಕನು ಕರ್ತನ ಆಲಯದಲ್ಲಿದ್ದ ಅರಸನಾದ ದಾವೀದನ ಈಟಿಗಳನ್ನೂ ಗುರಾಣಿಗಳನ್ನೂ ನೂರಕ್ಕೆ ಅಧಿಪತಿಯಾದವರಿಗೆ ಕೊಟ್ಟನು.
ಅರಸನು ಸ್ತಂಭದ ಬಳಿಯಲ್ಲಿ ನಿಂತು ಕರ್ತನನ್ನು ಹಿಂಬಾಲಿಸು ವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆ ಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿ ರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವ ದಕ್ಕೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿ ದನು; ಜನರೆಲ್ಲರೂ ಒಡಂಬಡಿಕೆಗೆ ಒಪ್ಪಿದರು.
ಇದಲ್ಲದೆ ಅವರ ಬಳಿಯಲ್ಲಿದ್ದ ಇಸ್ಸಾಕಾರ್, ಜೆಬುಲೂನ್, ನಫ್ತಾಲಿಯರು ಮೊದಲುಗೊಂಡು ಎಲ್ಲರೂ ಕತ್ತೆ ಒಂಟೆ ಹೇಸರಕತ್ತೆ ಎತ್ತುಗಳ ಮೇಲೆ ರೊಟ್ಟಿಗಳನ್ನೂ ಆಹಾರವನ್ನೂ ಹಿಟ್ಟನ್ನೂ ಅಂಜೂರದ ಉಂಡೆಗಳನ್ನೂ ಒಣಗಿದ ದ್ರಾಕ್ಷೇ ಗೊನೆಗಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಎತ್ತುಗಳನ್ನೂ ಕುರಿ ಗಳನ್ನೂ ಬಹಳವಾಗಿ ತಂದರು; ಯಾಕಂದರೆ ಇಸ್ರಾ ಯೇಲಿನಲ್ಲಿ ಸಂತೋಷವಿತ್ತು.
ಅರಸನು ತನ್ನ ಸ್ಥಳದಲ್ಲಿ ನಿಂತುಕೊಂಡು ಕರ್ತನನ್ನು ಹಿಂಬಾಲಿಸುವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನೂ ತನ್ನ ಪೂರ್ಣಹೃದಯದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳ ಹಾಗೆ ಮಾಡುವದಕ್ಕೂ ಕರ್ತನ ಮುಂದೆ ಒಡಂಬಡಿಕೆ ಮಾಡಿದನು.
ನೀತಿವಂತರು ಅಧಿಕಾರದಲ್ಲಿ ದ್ದಾಗ ಜನರು ಹರ್ಷಿಸುತ್ತಾರೆ; ದುಷ್ಟನು ಆಳಿದರೆ ಜನರು ಶೋಕಿಸುತ್ತಾರೆ.
ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ--
ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು.