ಆಗ ಯೆಹೋವಾಷನು ಯಾಜಕರಿಗೆ--ಕರ್ತನ ಮನೆಗೆ ತರಲ್ಪಟ್ಟ ಪ್ರತಿಷ್ಠಿತವಾದವುಗಳ ಹಣವೆಲ್ಲ ವನ್ನೂ ಹಾದು ಹೋಗುವ ಪ್ರತಿ ಮನುಷ್ಯನ ಹಣ ವನ್ನೂ ಪ್ರಾಣಗಳ ಎಣಿಕೆಯ ಹಣವನ್ನೂ ಪ್ರತಿ ಮನುಷ್ಯನು ತನ್ನ ಇಚ್ಚೆಯ ಪ್ರಕಾರ ಕರ್ತನ ಆಲಯಕ್ಕೆ ಕೊಡಬೇಕೆಂದು ತಕ್ಕೊಂಡು ಬಂದ ಹಣವೆಲ್ಲವನ್ನೂ
Cross references
ಆಗ ಕರ್ತನು ಮಾತನಾಡಿ ಮೋಶೆಗೆ--
ನೀನು ಇಸ್ರಾಯೇಲ್ ಮಕ್ಕಳ ಲೆಕ್ಕವನ್ನು ಅದರ ಸಂಖ್ಯೆಗೆ ಸರಿಯಾಗಿ ಎಣಿಸಿದಾಗ ಅವರಲ್ಲಿ ವ್ಯಾಧಿ ಉಂಟಾಗದ ಹಾಗೆ ಅವರನ್ನು ಕ್ರಮವಾಗಿ ಎಣಿಸಿ ಒಬ್ಬೊಬ್ಬನು ತನ್ನ ಪ್ರಾಣದ ವಿಮೋಚನೆಯ ಕ್ರಮವನ್ನು ಕರ್ತನಿಗೆ ಕೊಡಬೇಕು.
ಕರ್ತನಿಗೋಸ್ಕರ ನಿಮ್ಮೊಳಗಿಂದ ಕಾಣಿಕೆಗಳನ್ನು ತೆಗೆದು ಕೊಳ್ಳಿರಿ. ಮನಃಪೂರ್ವಕವಾಗಿ ಕರ್ತನಿಗೆ ತರಬೇಕಾದವುಗಳು; ಚಿನ್ನ, ಬೆಳ್ಳಿ, ಹಿತ್ತಾಳೆ
ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮುರುವುಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಪ್ರತಿಯೊಬ್ಬನೂ ಚಿನ್ನದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಿದನು.
ಹೀಗೆ ಮಾಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ತರುವದಕ್ಕೆ ಹೃದಯ ಪ್ರೇರಿತರಾದ ಇಸ್ರಾಯೇಲಿನ ಎಲ್ಲಾ ಪುರುಷರೂ ಸ್ತ್ರೀಯರೂ ಕರ್ತ ನಿಗೆ ಮನಃಪೂರ್ವಕವಾದ ಕಾಣಿಕೆಯನ್ನು ತಂದರು.
ಆಗ ಇಸ್ರಾ ಯೇಲ್ ಮಕ್ಕಳು ಪರಿಶುದ್ಧ ಆಲಯದ ಸೇವೆಯ ಕೆಲಸಕ್ಕೋಸ್ಕರವೂ ಅದನ್ನು ಮಾಡಿಸುವದಕ್ಕೋಸ್ಕ ರವೂ ತಂದ ಕಾಣಿಕೆಗಳನ್ನೆಲ್ಲಾ ಮೋಶೆಯ ಬಳಿಯಿಂದ ಅವರು ತಕ್ಕೊಂಡರು. ಇದಲ್ಲದೆ ಅವರು ಪ್ರತಿ ಉದಯ ದಲ್ಲಿ ಅವನಿಗೆ ಇನ್ನೂ ಉಚಿತವಾದ ಕಾಣಿಕೆಗಳನ್ನು ತರುತ್ತಿದ್ದರು.
ಯಾವನಾದರೂ ಅತಿಕ್ರಮಿಸಿ ಕರ್ತನ ಪರಿಶುದ್ಧ ವಾದವುಗಳನ್ನು ಅರಿಯದೆ ಪಾಪಮಾಡಿದ್ದರೆ ಅವನು ತನ್ನ ಅತಿಕ್ರಮಕ್ಕಾಗಿ ತನ್ನ ಹಿಂಡುಗಳಿಂದ ದೋಷವಿಲ್ಲದ ಟಗರನ್ನು ನಿನ್ನ ಅಂದಾಜಿನ ಪ್ರಕಾರ ಪವಿತ್ರ ಸ್ಥಳದ ಶೆಕೆಲುಗಳಿಗನುಸಾರವಾಗಿ ಬೆಳ್ಳಿಯ ಶೆಕೆಲುಗಳನ್ನು ಅತಿ ಕ್ರಮದ ಬಲಿಗಾಗಿ ಕರ್ತನಿಗೆ ತರಬೇಕು.
ಇಸ್ರಾಯೇಲ್ ಮಕ್ಕಳ ಸಂಗಡ ನೀನು ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಒಬ್ಬನು ಪ್ರತ್ಯೇಕವಾದ ಪ್ರಮಾ ಣವನ್ನು ಮಾಡಿಕೊಂಡರೆ ನೀನು ನೇಮಿಸಿದ ಕ್ರಯದ ಪ್ರಕಾರ ಜನರು ಕರ್ತನಿಗೆ ಮಾಡಬೇಕು.
ಆಗ ಯಾಜಕನು ಅದಕ್ಕೆ ಒಳ್ಳೇದಾಗಲಿ ಕೆಟ್ಟದ್ದಾಗಲಿ ಅದಕ್ಕೆ ಕ್ರಯಕಟ್ಟಬೇಕು. ಯಾಜಕನಾದ ನೀನು ಮಾಡಿದ ಕ್ರಯವೇ ಕ್ರಯವಾ ಗಿರಬೇಕು.
ಯಾವನಾದರೂ ತನ್ನ ಹತ್ತನೇ ಪಾಲುಗಳನ್ನು ವಿಮೋಚಿಸಬೇಕೆಂದಿದ್ದರೆ ಅದಕ್ಕಿಂತ ಹೆಚ್ಚಾಗಿ ಅದರ ಐದನೇ ಪಾಲನ್ನು ಕೊಡಬೇಕು.
ಆದರೆ ಆ ಕಾಲದ ವರೆಗೂ ಕರ್ತನ ಹೆಸರಿಗೆ ಆಲಯ ಕಟ್ಟಲ್ಪಡದೆ ಇದ್ದದರಿಂದ ಜನರು ಎತ್ತರದ ಸ್ಥಳಗಳಲ್ಲಿ ಬಲಿ ಅರ್ಪಿಸುತ್ತಿದ್ದರು.
ಸೊಲೊ ಮೋನನು ಕರ್ತನನ್ನು ಪ್ರೀತಿಮಾಡಿ ತನ್ನ ತಂದೆ ಯಾದ ದಾವೀದನ ಕಟ್ಟಳೆಗಳಲ್ಲಿ ನಡೆಯುತ್ತಾ ಇದ್ದರೂ ತಾನು ಎತ್ತರ ಸ್ಥಳಗಳಲ್ಲಿ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದನು.
ಇದಲ್ಲದೆ ಸೊಲೊಮೋನನು ತನ್ನ ಮನೆಯನ್ನು ಹದಿಮೂರು ವರುಷಗಳಲ್ಲಿ ಕಟ್ಟಿಸಿ ಅದನ್ನೆಲ್ಲಾ ಮುಗಿಸಿದನು.
ಆಗ ಯೆಹೂದದ ಅರಸನಾದ ಯೆಹೋವಾಷನೂ ಯೆಹೂದದ ಅರಸುಗಳಾಗಿರುವ ತನ್ನ ತಂದೆಗಳಾದ ಯೆಹೋಷಾಫಾಟನೂ ಯೆಹೋರಾಮನೂ ಅಹ ಜ್ಯನೂ ಅರ್ಪಿಸಿದ ಎಲ್ಲಾ ಪ್ರತಿಷ್ಠಿತವಾದವುಗಳನ್ನೂ ತಾನು ಪರಿಶುದ್ಧ ಮಾಡಿದವುಗಳನ್ನೂ ಕರ್ತನ ಮನೆಯ ಬೊಕ್ಕಸದಲ್ಲಿಯೂ ಅರಸನ ಮನೆಯಲ್ಲಿಯೂ ಸಿಕ್ಕಿದ ಸಕಲ ಬಂಗಾರವನ್ನೂ ತಕ್ಕೊಂಡು ಅರಾಮ್ಯರ ಅರಸ ನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟುಹೋದನು.
ಆದರೆ ಉನ್ನತ ಸ್ಥಳಗಳನ್ನು ತೆಗೆದು ಹಾಕಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಯರ್ಪಿಸಿ ಧೂಪವನ್ನು ಸುಡುತ್ತಿದ್ದರು.
ಆದರೆ ಉನ್ನತ ಸ್ಥಳಗಳು ಕೆಡವಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನು ಅರ್ಪಿಸಿ ಧೂಪವನ್ನು ಅರ್ಪಿಸುತ್ತಿದ್ದರು.
ಇದಲ್ಲದೆ ಅವನು ಉನ್ನತ ಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಸಮರ್ಪಿಸಿದನು.
ಅಲ್ಲಿ ಕರ್ತನು ತಮ್ಮ ಮುಂದೆ ಓಡಿಸಿಬಿಟ್ಟ ಅನ್ಯ ಜನಾಂಗಗಳ ಹಾಗೆ ಅವರು ಎಲ್ಲಾ ಉನ್ನತ ಸ್ಥಳಗಳಲ್ಲಿ ಧೂಪವನ್ನು ಸುಟ್ಟು ಕರ್ತನನ್ನು ಸಿಟ್ಟುಗೊಳಿಸುವ ಹಾಗೆ ಕೆಟ್ಟ ಕಾರ್ಯಗಳನ್ನು ಮಾಡಿದರು--
ನೀನು ಪ್ರಧಾನ ಯಾಜಕನಾದ ಹಿಲ್ಕೀಯನ ಬಳಿಗೆ ಹೋಗು, ಅವನು ಕರ್ತನ ಮನೆಯಲ್ಲಿ ದ್ವಾರಪಾಲಕರು ಜನರಿಂದ ತೆಗೆದುಕೊಂಡು ಕೂಡಿಸಿದ ಹಣವನ್ನು ಲೆಕ್ಕ ಮಾಡಲಿ.
ಇವುಗಳನ್ನು ಅರಸನಾದ ದಾವೀದನು ಎದೋಮ್ಯರು ಮೋವಾಬ್ಯರು ಅಮ್ಮೋನನ ಮಕ್ಕಳು ಫಿಲಿಷ್ಟಿಯರು ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿ ಬಂಗಾರವನ್ನು ಕರ್ತನಿಗೆ ಪ್ರತಿಷ್ಠೆಮಾಡಿದನು.
ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ.
ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.
ಅವನು ದೇವರ ಆಲಯದಲ್ಲಿ ತನ್ನ ತಂದೆಯೂ ತಾನೂ ಪರಿಶುದ್ಧ ಮಾಡಿದ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಸೇರಿಸಿದನು.ಆಸನ ಆಳ್ವಿಕೆಯಲ್ಲಿ ಮೂವತ್ತೈದನೇ ವರುಷದ ಪರಿಯಂತರ ಯುದ್ಧವಿಲ್ಲದೆ ಇತ್ತು.
ದೇವರ ಸೇವಕನಾದ ಮೋಶೆಯು ಅರಣ್ಯ ದಲ್ಲಿ ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಕಾಣಿಕೆಯನ್ನು ಕರ್ತನಿಗೆ ತರಬೇಕೆಂದು ಯೆಹೂದದಲ್ಲಿಯೂ ಯೆರೂ ಸಲೇಮಿನಲ್ಲಿಯೂ ಪ್ರಕಟಮಾಡಿದರು.
ಇದಲ್ಲದೆ ಅವನು ಯಾಜಕರನ್ನೂ ಲೇವಿಯರನ್ನೂ ಕರೆಕಳುಹಿಸಿ ಅವರನ್ನು ಮೂಡಣ ಬೀದಿಯಲ್ಲಿ ಕೂಡಿಸಿ ಕೊಂಡು ಅವರಿಗೆ ಹೇಳಿದ್ದೇನಂದರೆ--
ಅವರು ಅವುಗಳನ್ನು ಸಿದ್ಧಮಾಡಿದ ಮೇಲೆ ಕಾಣಿಕೆಗಳನ್ನೂ ದಶಮಾಂಶ ವನ್ನೂ ಪ್ರತಿಷ್ಠಿಸಲ್ಪಟ್ಟವುಗಳನ್ನೂ ನಂಬಿಕೆಯಾಗಿ ಒಳಗೆ ತಂದರು. ಇವುಗಳ ಮೇಲೆ ಲೇವಿಯನಾದ ಕೋನನ್ಯನು ಅಧಿಕಾರಿಯಾಗಿದ್ದನು. ಅವನ ತರು ವಾಯ ಸಹೋದರನಾದ ಶಿಮ್ಮಿಯು ಅಧಿಕಾರಿಯಾಗಿ ದ್ದನು.
ಆಗ ಅವನು ಯಾಜಕರನ್ನು ಅವರವರ ಕೆಲಸಗಳಲ್ಲಿ ನಿಲ್ಲಿಸಿ ಕರ್ತನ ಆಲಯದ ಸೇವೆ ಮಾಡುವದಕ್ಕೆ ಅವರನ್ನು ದೃಢ ಪಡಿಸಿ,
ಅವರ ಸುತ್ತಲಿರುವವರೆಲ್ಲರೂ ಮನಃ ಪೂರ್ವಕವಾದ ಎಲ್ಲಾ ಕಾಣಿಕೆಗಳ ಹೊರತಾಗಿ ಬೆಳ್ಳಿಯ ಸಾಮಾನು ಗಳಿಂದಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗಳಿಂದಲೂ ಬೆಲೆಯುಳ್ಳವುಗಳಿಂದಲೂ ಅವರಿಗೆ ಸಹಾಯ ಮಾಡಿದರು.
ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸದ ಬೊಕ್ಕಸಕ್ಕೆ ಅರವ ತ್ತೊಂದು ಸಾವಿರ ಬಂಗಾರದ ಪವನಗಳನ್ನು ಐದು ಸಾವಿರ ವಿಾನಾ ತೂಕ ಬೆಳ್ಳಿಯನ್ನೂ ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು.ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.
ಅದರ ಸಂಗಡ ಯೆರೂಸ ಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕೋಸ್ಕರ ಜನರಿಂದಲೂ ಯಾಜಕರಿಂದಲೂ ಕೊಡಲ್ಪಟ್ಟ ಮನಃ ಪೂರ್ವಕವಾದ ಅರ್ಪಣೆಯನ್ನೂ ತಕ್ಕೊಂಡು ಹೋಗಿ
ಅರಸನೂ ಅವನ ಸಲಹೆಗಾರರೂ ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ ಬಂಗಾರವನ್ನೂ ಸಾಮಾನುಗಳನ್ನೂ ಅವರಿಗೆ ತೂಗಿ ಕೊಟ್ಟೆನು.
ಯಾಕಂದರೆ ಇವರೆಲ್ಲರೂ ತಮಗಿರುವ ಸಮೃದ್ಧಿಯಲ್ಲಿ ದೇವರಿಗೆ ಕಾಣಿಕೆಗಳನ್ನು ಹಾಕಿದ್ದಾರೆ; ಆದರೆ ಈಕೆಯು ತನ್ನ ಬಡತನದಲ್ಲಿ ತನ್ನ ಜೀವನಕ್ಕೆ ಇದ್ದದ್ದನ್ನೆಲ್ಲಾ ಹಾಕಿದ್ದಾಳೆ ಅಂದನು.