ಆಗ ಎಲೀಷನು ಮರಣಕರವಾದ ವ್ಯಾಧಿ ಯಿಂದ ಬಿದ್ದು ಸತ್ತಾಗ ಇಸ್ರಾಯೇಲಿನ ಅರಸನಾದ ಯೋವಾಷನು ಅವನ ಬಳಿಗೆ ಬಂದು ಅವನ ಮುಂದೆ ಬಿದ್ದು ಅತ್ತು ಅವನಿಗೆ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೂ ಅದರ ಕುದುರೆ ರಾಹುತನೂ ಆದವನೇ ಅಂದನು.
Cross references
ಇವುಗಳಾದ ಮೇಲೆ ಒಬ್ಬನು ಯೋಸೇಫನಿಗೆ--ಇಗೋ, ನಿನ್ನ ತಂದೆಯು ಅಸ್ವಸ್ಥ ನಾಗಿದ್ದಾನೆ ಎಂದು ಹೇಳಿದನು. ಆಗ ಅವನು ತನ್ನ ಇಬ್ಬರು ಕುಮಾರರಾದ ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಕರಕೊಂಡು ಬಂದನು.
ಯಾಕೋ ಬನು ತನ್ನ ಕುಮಾರರಿಗೆ ಆಜ್ಞಾಪಿಸಿ ಮುಗಿಸಿದ ಮೇಲೆ ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
ಆಗ ಯೋಸೇಫನು ತನ್ನ ತಂದೆಯ ಮುಖದ ಮೇಲೆ ಬಿದ್ದು ಅತ್ತು ಅವನಿಗೆ ಮುದ್ದಿಟ್ಟನು.
ಎಲೀ ಷನು ಅದನ್ನು ನೋಡಿ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೇ, ಅದರ ಕುದುರೆ ರಾಹುತರಾಗಿದ್ದವನೇ ಎಂದು ಕೂಗಿದನು. ಮತ್ತೆ ಅವ ನನ್ನು ಕಾಣಲಿಲ್ಲ. ಆಗ ಅವನು ತನ್ನ ವಸ್ತ್ರಗಳನ್ನು ತೆಗೆದು ಎರಡು ತುಂಡಾಗಿ ಹರಿದನು.
ಇಸ್ರಾಯೇಲಿನ ಅರಸನು ಅವರನ್ನು ಕಂಡಾಗ ಎಲೀಷನಿಗೆ--ನನ್ನ ತಂದೆಯೇ, ನಾನು ಹೊಡೆಯಲೋ? ಹೊಡೆಯ ಲೋ? ಅಂದನು.
ಆ ದಿವಸಗಳಲ್ಲಿ ಹಿಜ್ಕೀಯನು ಮರಣಕರರೋಗದಲ್ಲಿ ಬಿದ್ದಿದ್ದನು. ಆಗ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಬದುಕದೆ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.
ಕರ್ತನೇ, ಸಹಾಯಮಾಡು; ಯಾಕಂದರೆ ಭಕ್ತನು ಮುಗಿದು ಹೋಗುತ್ತಾನೆ; ನಂಬಿಗಸ್ತರು ಮನುಷ್ಯನ ಮಕ್ಕಳೊಳಗಿಂದ ಇಲ್ಲದೆ ಹೋಗುತ್ತಾರೆ.
ಯಥಾರ್ಥವಂತರ ಆಶೀರ್ವಾದದಿಂದ ಪಟ್ಟ ಣವು ಹೆಚ್ಚಿಸಲ್ಪಡುತ್ತದೆ. ದುಷ್ಟರ ಬಾಯಿಂದ ಅದು ಕೆಡವಲ್ಪಡುತ್ತದೆ.
ನೀತಿವಂತನು ನಾಶವಾಗುವನು, ಅದನ್ನು ಯಾವ ಮನುಷ್ಯನು ಮನಸ್ಸಿಗೆ ತಾರನು. ಕರುಣೆಯುಳ್ಳ ಮನುಷ್ಯರು ತೆಗೆದುಹಾಕಲ್ಪಡುವರು, ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾಗು ತ್ತಾನೆಂಬದನ್ನು ಯಾರೂ ಯೋಚಿಸರು.
ನೋಹ ದಾನಿಯೇಲ ಯೋಬ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರು ಎಂದು ದೇವರಾದ ಕರ್ತನು ಹೇಳುತ್ತಾನೆ.
ಬೇಲಿ ಕಟ್ಟುವ ಮನುಷ್ಯನನ್ನು ದೇಶಕ್ಕೋಸ್ಕರ ನಾನು ಅದನು ನಾಶಮಾಡದ ಹಾಗೆ ಪೌಳಿಯ ಒಡಕಿನಲ್ಲಿ ನಿಲ್ಲತಕ್ಕ ವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ.ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ?
ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು.
ಆದದ ರಿಂದ ಅವನ ಸಹೋದರಿಯರು--ಕರ್ತನೇ, ಇಗೋ, ನೀನು ಪ್ರೀತಿಮಾಡುತ್ತಿರುವವನು ಅಸ್ವಸ್ಥನಾಗಿದ್ದಾನೆ ಎಂದು ಆತನಿಗೆ ಹೇಳಿಕಳುಹಿಸಿದರು.
ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು.
ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು, ತಾನು ಅಸ್ವಸ್ಥನಾಗಿದ್ದ ವರ್ತಮಾನವನ್ನು ನೀವು ಕೇಳಿದ್ದರಿಂದ ತುಂಬಾ ವ್ಯಸನಪಟ್ಟನು.