ಎಲೀಷನು ಸತ್ತ ತರುವಾಯ ಅವನನ್ನು ಹೂಣಿ ಟ್ಟರು. ವರುಷದ ಆರಂಭದಲ್ಲಿ ಮೋವಾಬ್ಯರ ದಂಡು ಗಳು ದೇಶದಲ್ಲಿ ಪ್ರವೇಶಿಸಿದವು.
Cross references
ಇವುಗಳಾದ ಮೇಲೆ ಒಬ್ಬನು ಯೋಸೇಫನಿಗೆ--ಇಗೋ, ನಿನ್ನ ತಂದೆಯು ಅಸ್ವಸ್ಥ ನಾಗಿದ್ದಾನೆ ಎಂದು ಹೇಳಿದನು. ಆಗ ಅವನು ತನ್ನ ಇಬ್ಬರು ಕುಮಾರರಾದ ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಕರಕೊಂಡು ಬಂದನು.
ಯಾಕೋ ಬನು ತನ್ನ ಕುಮಾರರಿಗೆ ಆಜ್ಞಾಪಿಸಿ ಮುಗಿಸಿದ ಮೇಲೆ ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ತಿರಿಗಿ ಕೆಟ್ಟತನ ಮಾಡಿದರು. ಅವರು ಕರ್ತನ ಮುಂದೆ ಕೆಟ್ಟತನ ಮಾಡಿದ್ದರಿಂದ ಕರ್ತನು ಮೋವಾಬ್ಯರ ಅರಸನಾದ ಎಗ್ಲೋನನನ್ನು ಇಸ್ರಾಯೇಲಿಗೆ ವಿರೋಧವಾಗಿ ಬಲ ಪಡಿಸಿದನು.
ಇಸ್ರಾಯೇಲ್ಯರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ ಅಮಾಲೇ ಕ್ಯರೂ ಮೂಡಣದ ಮಕ್ಕಳೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು
ಅಹಾ ಬನು ಸತ್ತ ತರುವಾಯ ಏನಾಯಿತಂದರೆ, ಮೋವಾ ಬಿನ ಅರಸನು ಇಸ್ರಾಯೇಲಿನ ಅರಸನಿಗೆ ವಿರೋಧ ವಾಗಿ ತಿರುಗಿಬಿದ್ದನು.
ಇದಲ್ಲದೆ ಅವನು ಹೋಗಿಮೋವಾಬಿನ ಅರಸನು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾನೆ; ನೀನು ನನ್ನ ಸಂಗಡ ಮೋವಾಬಿನ ಮೇಲೆ ಯುದ್ಧಮಾಡಲು ಬರುವಿಯೋ ಎಂದು ಯೆಹೂದದ ಅರಸನಾದ ಯೆಹೋಷಾಫಾಟನಿಗೆ ಹೇಳಿ ಕಳುಹಿಸಿ ದನು. ಅದಕ್ಕವನು--ನಾನು ಬರುವೆನು; ನಾನು ನಿನ್ನ ವನೇ, ನನ್ನ ಜನರು ನಿನ್ನ ಜನರೇ, ಹಾಗೆಯೇ ನನ್ನ ಕುದುರೆಗಳು ನಿನ್ನ ಕುದುರೆಗಳಂತೆಯೇ ಅಂದನು.
ಅವರು ಇಸ್ರಾಯೇಲಿನ ದಂಡಿಗೆ ಬಂದಾಗ ಇಸ್ರಾಯೇಲ್ಯರು ಎದ್ದು ಮೋವಾಬ್ಯರು ತಮ್ಮ ಮುಂದೆ ಓಡಿಹೋಗುವ ಹಾಗೆ ಅವರನ್ನು ಹೊಡೆದು ಮೋವಾಬ್ಯರನ್ನು ಅವರ ದೇಶದ ವರೆಗೂ ಹೊಡೆಯುತ್ತಾ ಬಂದರು.
ಅರಾಮ್ಯರು ಗುಂಪುಗುಂಪಾಗಿ ಹೊರಟು ಇಸ್ರಾಯೇಲ್ ದೇಶದಿಂದ ಒಬ್ಬ ಹುಡುಗಿಯನ್ನು ಸೆರೆಯಾಗಿ ಹಿಡುಕೊಂಡು ಬಂದರು. ಅವಳು ನಾಮಾ ನನ ಹೆಂಡತಿಗೆ ಸೇವಕಳಾಗಿದ್ದಳು.
ಆಗ ಅರಸನು ಅವರಿಗೋಸ್ಕರ ದೊಡ್ಡ ಔತಣ ಮಾಡಿಸಿದನು. ಅವರು ತಿಂದು ಕುಡಿದ ತರುವಾಯ ಅವರನ್ನು ಕಳುಹಿಸಿ ಬಿಟ್ಟನು. ಅವರು ತಮ್ಮ ಯಜಮಾನನ ಬಳಿಗೆ ಹೋದರು. ಅರಾಮ್ಯರ ದಂಡುಗಳು ಇಸ್ರಾಯೇಲ್ ದೇಶದಲ್ಲಿ ತಿರಿಗಿ ಬಾರದೆ ಹೋದವು.
ಆದರೆ ಕರ್ತನು ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನ್ಯರ ಗುಂಪುಗಳನ್ನೂ ಅವನ ಮೇಲೆ ಕಳುಹಿಸಿದನು. ಕರ್ತನು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ ಯೆಹೂದವನ್ನು ನಾಶ ಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು.
ಅವನು ದೇವರಿಗೋಸ್ಕರವಾಗಿಯೂ ಆತನ ಆಲಯಕ್ಕೋಸ್ಕರ ವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೇದನ್ನು ಮಾಡಿ ದ್ದದ್ದರಿಂದ ಅವರು ಅವನನ್ನು ದಾವೀದನ ಪಟ್ಟಣ ದಲ್ಲಿ ಅರಸುಗಳ ಬಳಿಯಲ್ಲಿ ಹೂಣಿಟ್ಟರು.
ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ?
ಭಕ್ತರಾದ ಜನರು ಸ್ತೆಫನನನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.