ಆದರೆ ಕರ್ತನು ಅಬ್ರಹಾಮನ ಇಸಾಕನ ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಅವರಿಗೆ ದಯಮಾಡಿ ಅವರ ಮೇಲೆ ಕೃಪೆ ತೋರಿಸಿ ಅವರ ಕಡೆಗೆ ತಿರುಗಿದನು. ಇನ್ನೂ ಅವರನ್ನು ನಾಶ ಮಾಡಲು ಅವರನ್ನು ತನ್ನಿಂದ ತೊರೆದು ಬಿಡಲು ಮನಸ್ಸಾಗಲಿಲ್ಲ, ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲೂ ಇಲ್ಲ.
Cross references
ಆಗ ಕರ್ತನು--ನನ್ನ ಆತ್ಮನು ಮನುಷ್ಯನ ಸಂಗಡ ಯಾವಾಗಲೂ ವಿವಾದಮಾಡುವದಿಲ್ಲ; ಅವನು ಮನುಷ್ಯನಷ್ಟೆ. ಆದರೂ ಅವನ ದಿನಗಳು ಇನ್ನು ನೂರ ಇಪ್ಪತ್ತು ವರುಷಗಳಾಗಿರುವವು ಅಂದನು.
ನಿನ್ನ ಸಂತತಿಯನ್ನು ಭೂಮಿಯ ಧೂಳಿನಷ್ಟು ಮಾಡುವೆನು. ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ ನಿನ್ನ ಸಂತಾನವು ಸಹ ಲೆಕ್ಕಿಸಲ್ಪಡುವದು.
ನನಗೂ ನಿನಗೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ಮಾಡುವೆನು; ಇದಲ್ಲದೆ ನಿನ್ನನ್ನು ಅತ್ಯಧಿಕವಾಗಿ ಹೆಚ್ಚಿಸುವೆನು ಎಂದು ಅವನಿಗೆ ಹೇಳಿದನು.
ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
ಇದಲ್ಲದೆ ಆತನು ಅವನಿಗೆ--ನಾನು ನಿನ್ನ ತಂದೆಯ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಆಗಿದ್ದೇನೆ ಎಂದು ಹೇಳಿದನು. ಆಗ ಮೋಶೆಯು ದೇವರನ್ನು ನೋಡುವದಕ್ಕೆ ಭಯ ಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.
ಆಕಾಶದ ನಕ್ಷತ್ರಗಳ ಹಾಗೆ ನಿಮ್ಮ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯು ನಿತ್ಯವಾಗಿ ಸ್ವತಂತ್ರಿಸಿಕೊಳ್ಳುವರು ಎಂದು ಯಾರಿಗೆ ನಿನ್ನ ಆಣೆಯಿಟ್ಟು ಪ್ರಮಾಣಮಾಡಿ ದಿಯೋ ಆ ನಿನ್ನ ಸೇವಕರಾದ ಅಬ್ರಹಾಮನನ್ನೂ ಇಸಾಕನನ್ನೂ ಇಸ್ರಾಯೇಲನನ್ನೂ ಜ್ಞಾಪಕ ಮಾಡಿಕೋ ಅಂದನು.
ಅದಕ್ಕೆ ಆತನು--ನಾನು ನನ್ನ ಸರ್ವೋತ್ತಮತ್ವವನ್ನು ನಿನ್ನೆದುರಿಗೆ ಹಾದು ಹೋಗಗೊಡಿಸಿ ಕರ್ತನ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ ನಾನು ಯಾರಿಗೆ ಕೃಪೆಯುಳ್ಳವ ನಾಗಿರಬೇಕೋ ಅವರಿಗೆ ಕೃಪೆಯುಳ್ಳವನಾಗಿರುವೆನು; ನಾನು ಯಾರಿಗೆ ಕರುಣೆಯನ್ನು ತೋರಿಸಬೇಕೋ ಅವರಿಗೆ ಕರುಣೆಯನ್ನು ತೋರಿಸುವೆನು ಅಂದನು.
ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ
ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು.
ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.
ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.
ಆದರೆ ನನ್ನ ದೇವರಾದ ಕರ್ತನೇ, ನಿನ್ನ ಸೇವಕನ ಪ್ರಾರ್ಥನೆಗೂ ವಿಜ್ಞಾಪನೆಗೂ ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸುವ ಪ್ರಾರ್ಥನೆಯ ಕೂಗನ್ನೂ ಕೇಳು.
ಆದರೆ ಯೆಹೋವಾಹಾಜನು ಕರ್ತನನ್ನು ಬೇಡಿಕೊಂಡದ್ದರಿಂದ ಕರ್ತನು ಅವನ ಮೊರೆಯನ್ನು ಕೇಳಿದನು. ಯಾಕಂದರೆ ಅರಾಮ್ಯರ ಅರಸನು ಅವರನ್ನು ಬಾಧೆಪಡಿಸಿದ ಇಸ್ರಾಯೇಲಿನ ಬಾಧೆಯನ್ನು ಅವನು ಲಕ್ಷಿಸಿದನು.
ಇಸ್ರಾಯೇಲಿನ ಶ್ರಮೆಯು ಬಹಳ ಕಠಿಣವಾಗಿದೆ ಎಂದು ಕರ್ತನು ಕಂಡನು. ಯಾಕಂದರೆ ಮುಚ್ಚಲ್ಪಟ್ಟವನಾದರೂ ಬಿಡಲ್ಪಟ್ಟವನಾದರೂ ಇಸ್ರಾ ಯೇಲಿಗೆ ಸಹಾಯಕನಾದರೂ ಯಾವನೂ ಇರಲಿಲ್ಲ.
ಇದಲ್ಲದೆ ಇಸ್ರಾಯೇಲಿನ ನಾಮವನ್ನು ಆಕಾಶದ ಕೆಳಗಿನಿಂದ ಅಳಿಸಿ ಬಿಡುವೆನೆಂದು ಕರ್ತನು ಹೇಳಿದ್ದಿಲ್ಲ; ಆದರೆ ಯೋವಾಷನ ಮಗನಾದ ಯಾರೊಬ್ಬಾಮನ ಕೈಯಿಂದ ಅವರನ್ನು ರಕ್ಷಿಸಿದನು.
ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಬಹುಕೋಪ ಗೊಂಡು ಅವರನ್ನು ತನ್ನ ಸಮ್ಮುಖದಿಂದ ತೆಗೆದುಹಾಕಿ ದನು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿದದ್ದಿಲ್ಲ.
ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು.
ಹೀಗೆಯೇ ಇಸ್ರಾ ಯೇಲಿನವರು ಇಂದಿನ ವರೆಗೂ ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಯಾಗಿ ಒಯ್ಯಲ್ಪಟ್ಟರು.
ಕರ್ತನು ಅವರನ್ನು ತನ್ನ ಸಮ್ಮುಖದಿಂದ ದೊಬ್ಬಿ ಹಾಕುವ ವರೆಗೆ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಉಂಟಾದ ಆತನ ಕೋಪದ ನಿಮಿತ್ತ ಚಿದ್ಕೀಯನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದನು.
ಆದರೂ ನೀನು ನಿನ್ನ ಅಧಿಕವಾದ ಕರುಣೆಯ ನಿಮಿತ್ತ ಅವರನ್ನು ಸಂಪೂರ್ಣ ನಾಶಮಾಡಿ ಬಿಡ ಲಿಲ್ಲ; ಅವರನ್ನು ಕೈಬಿಡಲೂ ಇಲ್ಲ. ಯಾಕಂದರೆ ನೀನು ಕೃಪೆಯೂ ಕರುಣೆಯುಳ್ಳ ದೇವರಾಗಿದ್ದೀ.
ನಿನ್ನ ಸಮ್ಮುಖದಿಂದ ನನ್ನನ್ನು ಹೊರಗೆ ಹಾಕಬೇಡ; ನಿನ್ನ ಪರಿಶುದ್ಧಾತ್ಮನನ್ನು ನನ್ನಿಂದ ತೆಗೆದುಕೊಳ್ಳಬೇಡ.
ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ.
ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ.
ತನ್ನ ಒಡಂಬಡಿಕೆಯನ್ನೂ ಸಾವಿರ ತಲಾಂತರಗ ಳಿಗೆ ಆಜ್ಞಾಪಿಸಿದ ತನ್ನ ಮಾತನ್ನೂ
ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಇಸಾಕನಿಗೆ ಇಟ್ಟ ಆಣೆಯನ್ನೂ ಆತನು ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾನೆ.
ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.
ಹೀಗಿರಲು ಕರ್ತನು ನಿಮಗೆ ಕೃಪೆಯನ್ನು ತೋರಿಸ ಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು. ಕರ್ತನು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
ಕೇಳಿರಿ, ಕಿವಿಗೊಡಿರಿ, ಗರ್ವಪಡಬೇಡಿರಿ; ಕರ್ತನು ಮಾತನಾಡಿದ್ದಾನೆ.
ಆತನು ದುಃಖಪಡಿಸಿದರೂ ತನ್ನ ಕೃಪಾತಿಶಯದಿಂದ ಕನಿಕರಿಸುವನು.
ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ.
ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು
ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.