ಇಸ್ರಾಯೇಲಿನ ಶ್ರಮೆಯು ಬಹಳ ಕಠಿಣವಾಗಿದೆ ಎಂದು ಕರ್ತನು ಕಂಡನು. ಯಾಕಂದರೆ ಮುಚ್ಚಲ್ಪಟ್ಟವನಾದರೂ ಬಿಡಲ್ಪಟ್ಟವನಾದರೂ ಇಸ್ರಾ ಯೇಲಿಗೆ ಸಹಾಯಕನಾದರೂ ಯಾವನೂ ಇರಲಿಲ್ಲ.
Cross references
ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.
ಆದದರಿಂದ ಈಗ ಕೇಳು, ಇಸ್ರಾಯೇಲ್ ಮಕ್ಕಳ ಕೂಗು ನನ್ನ ಬಳಿಗೆ ಬಂದಿತು; ಐಗುಪ್ತ್ಯರು ಅವರನ್ನು ಬಾಧಿಸುವ ಬಾಧೆಯನ್ನು ನಾನು ನೋಡಿದ್ದೇನೆ.
ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.
ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.
ಆದದರಿಂದ ಇಗೋ, ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟು ಕೊಂಡವರನ್ನೂ ಕಡಿದು ಬಿಟ್ಟು ಅದು ತೀರುವ ವರೆಗೆ ಮನುಷ್ಯನು ಕಸವನ್ನು ಹೇಗೆ ತೆಗೆದು ಹಾಕುತ್ತಾನೋ ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಜನಶೇಷವನ್ನು ತೆಗೆದು ಹಾಕುತ್ತೇನೆ.
ನೀನು ಕರ್ತನ ದೃಷ್ಟಿ ಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡ ದ್ದರಿಂದ ಇಗೋ, ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನ ಸಂತತಿಯನ್ನು ತೆಗೆದುಹಾಕಿ ಅಹಾಬ ನಿಗೆ ಒಬ್ಬ ಗಂಡಸಾದರೂ ಇಸ್ರಾಯೇಲಿನಲ್ಲಿ ಬಚ್ಚಿಡ ಲ್ಪಟ್ಟವನಾದರೂ ಉಳಿದವನಾದರೂ ಇರದ ಹಾಗೆ ತೆಗೆದುಬಿಡುವೆನು.
ಆದರೆ ಯೆಹೋವಾಹಾಜನು ಕರ್ತನನ್ನು ಬೇಡಿಕೊಂಡದ್ದರಿಂದ ಕರ್ತನು ಅವನ ಮೊರೆಯನ್ನು ಕೇಳಿದನು. ಯಾಕಂದರೆ ಅರಾಮ್ಯರ ಅರಸನು ಅವರನ್ನು ಬಾಧೆಪಡಿಸಿದ ಇಸ್ರಾಯೇಲಿನ ಬಾಧೆಯನ್ನು ಅವನು ಲಕ್ಷಿಸಿದನು.
ಆದರೆ ಕರ್ತನು ಅಬ್ರಹಾಮನ ಇಸಾಕನ ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಅವರಿಗೆ ದಯಮಾಡಿ ಅವರ ಮೇಲೆ ಕೃಪೆ ತೋರಿಸಿ ಅವರ ಕಡೆಗೆ ತಿರುಗಿದನು. ಇನ್ನೂ ಅವರನ್ನು ನಾಶ ಮಾಡಲು ಅವರನ್ನು ತನ್ನಿಂದ ತೊರೆದು ಬಿಡಲು ಮನಸ್ಸಾಗಲಿಲ್ಲ, ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲೂ ಇಲ್ಲ.
ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು.
ಆತನು ಅವರ ಹೃದಯವನ್ನು ಕಷ್ಟದಿಂದ ತಗ್ಗಿಸಿದಾಗ ಸಹಾಯಕ ನಿಲ್ಲದೆ ಕೆಳಗೆ ಬಿದ್ದರು.
ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
ಬೇಲಿ ಕಟ್ಟುವ ಮನುಷ್ಯನನ್ನು ದೇಶಕ್ಕೋಸ್ಕರ ನಾನು ಅದನು ನಾಶಮಾಡದ ಹಾಗೆ ಪೌಳಿಯ ಒಡಕಿನಲ್ಲಿ ನಿಲ್ಲತಕ್ಕ ವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ.ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.