ಆದರೆ ಉನ್ನತ ಸ್ಥಳಗಳು ಕೆಡವಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನು ಅರ್ಪಿಸಿ ಧೂಪವನ್ನು ಅರ್ಪಿಸುತ್ತಿದ್ದರು.
Cross references
ಉನ್ನತ ಸ್ಥಳಗಳಾದರೋ ಅವು ತೆಗೆದು ಹಾಕಲ್ಪಟ್ಟಿದ್ದಿಲ್ಲ; ಆದಾಗ್ಯೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ಕರ್ತನ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು.
ಅವನು ತನ್ನ ತಂದೆಯಾದ ಆಸನ ಎಲ್ಲಾ ಮಾರ್ಗ ಗಳಲ್ಲಿ ನಡೆದು ಅದನ್ನು ಬಿಟ್ಟು ತೊಲಗದೆ ಕರ್ತನ ಸಮ್ಮುಖದಲ್ಲಿ ಯಥಾರ್ಥವಾದದ್ದನ್ನು ಮಾಡಿದನು. ಆದರೂ ಉನ್ನತ ಸ್ಥಳಗಳನ್ನು ತೆಗೆದುಹಾಕಲಿಲ್ಲ; ಜನರು ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.
ಉನ್ನತ ಸ್ಥಳಗಳು ಮಾತ್ರ ಕೆಡವಲ್ಪಡದೆ ಇದ್ದವು; ಜನರು ಉನ್ನತ ಸ್ಥಳಗಳ ಮೇಲೆ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದರು.
ಆಗ ಯೆಹೋವಾಷನು ಯಾಜಕರಿಗೆ--ಕರ್ತನ ಮನೆಗೆ ತರಲ್ಪಟ್ಟ ಪ್ರತಿಷ್ಠಿತವಾದವುಗಳ ಹಣವೆಲ್ಲ ವನ್ನೂ ಹಾದು ಹೋಗುವ ಪ್ರತಿ ಮನುಷ್ಯನ ಹಣ ವನ್ನೂ ಪ್ರಾಣಗಳ ಎಣಿಕೆಯ ಹಣವನ್ನೂ ಪ್ರತಿ ಮನುಷ್ಯನು ತನ್ನ ಇಚ್ಚೆಯ ಪ್ರಕಾರ ಕರ್ತನ ಆಲಯಕ್ಕೆ ಕೊಡಬೇಕೆಂದು ತಕ್ಕೊಂಡು ಬಂದ ಹಣವೆಲ್ಲವನ್ನೂ
ಆದರೆ ಉನ್ನತ ಸ್ಥಳಗಳನ್ನು ತೆಗೆದು ಹಾಕಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಯರ್ಪಿಸಿ ಧೂಪವನ್ನು ಸುಡುತ್ತಿದ್ದರು.
ಇವನು ಕರ್ತನ ಮನೆಗೆ ಎತ್ತರವಾದ ಬಾಗಲನ್ನು ಕಟ್ಟಿಸಿದನು. ಆದರೆ ಉನ್ನತ ಸ್ಥಳಗಳು ತೆಗೆಯಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪವನ್ನೂ ಅರ್ಪಿಸುತ್ತಿದ್ದರು.
ಅವನು ಉನ್ನತ ಸ್ಥಳಗಳನ್ನು ತೆಗೆದುಹಾಕಿ, ವಿಗ್ರಹ ಗಳನ್ನು ಒಡೆದುಬಿಟ್ಟು, ತೋಪುಗಳನ್ನು ಕಡಿದುಹಾಕಿ, ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಆ ದಿವಸಗಳ ವರೆಗೂ ಇಸ್ರಾ ಯೇಲಿನ ಮಕ್ಕಳು ಅದಕ್ಕೆ ಧೂಪಸುಡುತ್ತಿದ್ದರು. ಅದನ್ನು ತಾಮ್ರದ ತುಂಡು ಎಂದು ಅವನು ಕರೆದನು.
ಅವನ ಹೃದಯವು ಕರ್ತನ ಮಾರ್ಗಗಳಲ್ಲಿ ಎತ್ತಲ್ಪಟ್ಟಿತು. ಇದಲ್ಲದೆ ಅವನು ಯೆಹೂ ದದಲ್ಲಿದ್ದ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ತೆಗೆದು ಹಾಕಿದನು.
ಈ ಹಿಜ್ಕೀಯನು ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದದವರಿಗೂ ಯೆರೂಸಲೇಮಿ ನವರಿಗೂ--ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು ಅದರ ಮೇಲೆ ಧೂಪವನ್ನರ್ಪಿಸಬೇಕೆಂದು ಹೇಳಿದ್ದಾನಲ್ಲವೇ?
ಅವನು ಇನ್ನೂ ಹುಡುಗನಾಗಿರುವಾಗ ತನ್ನ ಆಳ್ವಿಕೆಯ ಎಂಟನೇ ವರುಷದಲ್ಲಿ ತನ್ನ ಪಿತೃವಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕಹೊಯಿದ ವಿಗ್ರಹಗಳನ್ನೂ ತೆಗೆದುಹಾಕಿ ಯೆಹೂದ ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.