ಆಗ ಯಾಜಕನಾದ ಊರೀಯನು ಅರಸನಾದ ಆಹಾಜನು ದಮಸ್ಕದಿಂದ ಕಳುಹಿಸಿದ ಪ್ರಕಾರವೇ ಒಂದು ಬಲಿ ಪೀಠವನ್ನು ಕಟ್ಟಿಸಿದನು; ಹಾಗೆಯೇ ಅರಸನಾದ ಆಹಾಜನು ದಮಸ್ಕದಿಂದ ಬಂದಾಗ ಯಾಜಕನಾದ ಊರೀಯನು ಅದನ್ನು ಮಾಡಿಸಿದನು.
Cross references
ಆಗ ಅವನ ಪಟ್ಟಣದಲ್ಲಿರುವ ಹಿರಿಯರೂ ಗೌರವಸ್ಥರೂ ತಮಗೆ ಈಜೆಬೆಲಳು ಕಳುಹಿಸಿದ ಪತ್ರದ ಪ್ರಕಾರವೇ ಮಾಡಿ ದರು.
ಅರಸನಾದ ಆಹಾಜನು ಆಜ್ಞಾಪಿಸಿದ ಪ್ರಕಾರವೇ ಯಾಜಕನಾದ ಊರೀಯನು ಮಾಡಿದನು.
ಇದಲ್ಲದೆ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಇರಿಸುವೆನೆಂದು ಕರ್ತನು ಯಾವದನ್ನು ಕುರಿತು ಹೇಳಿದ್ದನೋ ಆ ಕರ್ತನ ಮನೆಯಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು.
ಈ ಮನೆಯಲ್ಲಿಯೂ ಇಸ್ರಾಯೇಲಿನ ಸಕಲ ಗೋತ್ರಗಳ ಲ್ಲಿಯೂ ನಾನು ಆದುಕೊಂಡ ಯೆರೂಸಲೇಮಿನ ಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನೆಂದು ಕರ್ತನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಯಾವದನ್ನು ಕುರಿತು ಹೇಳಿದ್ದನೋ ಆ ಮನೆಯಲ್ಲಿ ತಾನು ಮಾಡಿದ ತೋಪಿನ ಕೆತ್ತಿದ ವಿಗ್ರಹವನ್ನು ಇಟ್ಟನು.
ಆಗ ಯಾಜಕನಾದ ಅಜರ್ಯನು ಅವನ ಸಂಗಡ ಪರಾ ಕ್ರಮವುಳ್ಳ ಕರ್ತನ ಯಾಜಕರಾದ ಎಂಭತ್ತು ಮಂದಿಯು ಅರಸನಾದ ಉಜ್ಜೀಯನ ಹಿಂದೆ ಪ್ರವೇ ಶಿಸಿ ಅವನನ್ನು ಎದುರಿಸಿ--
ಇದ ಲ್ಲದೆ--ಯೆರೂಸಲೇಮಿನಲ್ಲಿ ನನ್ನ ಹೆಸರು ಯುಗ ಯುಗಕ್ಕೂ ಇರುವದೆಂದು ಕರ್ತನು ಹೇಳಿದ ಕರ್ತನ ಆಲಯದಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.
ನಾನು ನಂಬಿಗಸ್ತರಾದ ಯಾಜಕನಾದ ಊರೀಯನನ್ನು ಯೆಬೆ ರೆಕ್ಯನ ಮಗನಾದ ಜೆಕರ್ಯನನ್ನು ಸಾಕ್ಷಿಗಳನ್ನಾಗಿ ಇರಿಸಿಕೊಂಡೆನು.
ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ; ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ; ಪರಿಶುದ್ಧ ವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಭೇದವೆಣಿಸಲಿಲ್ಲ; ಶುದ್ಧಾಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ, ನನ್ನ ಸಬ್ಬತ್ತುಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದದರಿಂದ ನಾನು ಅವರಲ್ಲಿ ಅಪವಿತ್ರನಾದೆನು.
ಆದದರಿಂದ ಆ ಸಮಯದಲ್ಲಿ ಜನರೆಲ್ಲರು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ ನಾದಸ್ವರ ಮೊದಲಾದವುಗಳ ಶಬ್ದವನ್ನು ಕೇಳುವಾಗ ಎಲ್ಲಾ ಪ್ರಜೆಗಳು ಜನಾಂಗಗಳು, ಭಾಷೆಯವರು ಅಡ್ಡಬಿದ್ದು ಅರಸನಾದ ನೆಬೂಕದ್ನೆ ಚ್ಚರನು ನಿಲ್ಲಿಸಿದ ಪ್ರತಿಮೆಯನ್ನು ಆರಾಧಿಸಿದರು.
ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.
ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು.
ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ; ಅನೇಕರನ್ನು ನ್ಯಾಯಪ್ರಮಾಣಕ್ಕೆ ಎಡವುವಂತೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಕೆಡಿಸಿದ್ದೀರೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.
ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯ ರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.