ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು.
Cross references
ಅದು ನಿನ್ನ ದೇವರಾದ ಕರ್ತನು ಪರಾಂಬರಿಸುವ ದೇಶವೇ; ವರುಷದ ಆರಂಭ ದಿಂದ ಅಂತ್ಯದ ವರೆಗೂ ಯಾವಾಗಲೂ ನಿನ್ನ ದೇವ ರಾದ ಕರ್ತನ ಕಣ್ಣುಗಳು ಅದರ ಮೇಲೆ ಇವೆ.
ಆತನು--ನನ್ನ ಮುಖವನ್ನು ಅವರಿಗೆ ಮರೆ ಮಾಡುವೆನು; ಅವರ ಅಂತ್ಯವು ಏನೆಂದು ನೋಡು ವೆನು; ಅವರು ಮೂರ್ಖ ಸಂತತಿಯೇ, ನಂಬಿಕೆಯಿಲ್ಲದ ಮಕ್ಕಳೇ.
ನಿಮ್ಮ ದೇವರಾದ ಕರ್ತನು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿ ಬಿಡುವದಿಲ್ಲ. ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದೊಳಗಿಂದ ನೀವು ನಾಶವಾಗುವ ವರೆಗೂ ಅವರು ನಿಮಗೆ ಉರುಲಾಗಿಯೂ ಬೋನಾ ಗಿಯೂ ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯ ವಾಗಿ ತಿಳಿದುಕೊಳ್ಳುವಿರಿ.
ಆದರೆ ಮೊದಲು ಆ ಪಟ್ಟಣಕ್ಕೆ ಲಯಿಷೆಂಬ ಹೆಸರು ಇತ್ತು. ಆಗ ದಾನನ ಮಕ್ಕಳು ಆ ಕೆತ್ತಿದ ವಿಗ್ರಹವನ್ನು ತಮಗೆ ಸ್ಥಾಪಿಸಿಕೊಂಡರು. ಮನಸ್ಸೆಯ ಮೊಮ್ಮಗನೂ ಗೆರ್ಷೋಮನ ಮಗನೂ ಯೋನಾ ತಾನನೂ ಅವನ ಮಕ್ಕಳೂ ಆ ದೇಶದವರು ಸೆರೆಯಾಗಿ ಒಯ್ಯಲ್ಪಡುವ ದಿವಸದ ವರೆಗೂ ದಾನನ ಗೋತ್ರದ ವರಿಗೆ ಯಾಜಕರಾಗಿದ್ದರು.ದೇವರ ಮನೆ ಶಿಲೋವಿ ನಲ್ಲಿ ಇರುವ ಮಟ್ಟಿಗೂ ವಿಾಕನು ಮಾಡಿದ ವಿಗ್ರಹ ವನ್ನು ಅವರು ಇಟ್ಟುಕೊಂಡಿದ್ದರು.
ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು.
ಆದಕ್ಕೆ ಸಮುವೇಲನು ಸೌಲನಿಗೆ--ನಾನು ನಿನ್ನ ಸಂಗಡ ಹಿಂತಿರುಗಿ ಬರುವದಿಲ್ಲ; ಯಾಕಂದರೆ ನೀನು ಕರ್ತನ ವಾಕ್ಯವನ್ನು ತಿರಸ್ಕಾರಮಾಡಿದಿ; ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿರದ ಹಾಗೆ ತಿರ ಸ್ಕಾರ ಮಾಡಿಬಿಟ್ಟನು.
ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು.
ಆದದ ರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪಿಸಿ ಕೊಂಡು ಅವರನ್ನು ಅರಾಮ್ಯರ ಅರಸನಾದ ಹಜಾ ಯೇಲನ ಕೈಯಲ್ಲಿಯೂ ಹಜಾಯೇಲನ ಮಗನಾದ ಬೆನ್ಹದದನ ಕೈಯಲ್ಲಿಯೂ ಎಲ್ಲಾ ದಿವಸಗಳಲ್ಲಿ ಒಪ್ಪಿಸಿ ಕೊಟ್ಟನು.
ಆದರೂ ಯೆಹೋವಾಹಾಜನಿಗೆ ಐವತ್ತು ಕುದುರೆ ರಾಹುತ ರನ್ನೂ ಹತ್ತು ರಥಗಳನ್ನೂ ಹತ್ತು ಸಾವಿರ ಕಾಲಾಳು ಗಳನ್ನೂ ಹೊರತು ಜನರಲ್ಲಿ ಏನೂ ಬಿಡಲಿಲ್ಲ. ಯಾಕಂದರೆ ಅರಾಮ್ಯರ ಅರಸನು ಅವರನ್ನು ಸಂಹ ರಿಸಿ ತುಳಿಯಲ್ಪಟ್ಟ ಧೂಳಿನ ಹಾಗೆ ಮಾಡಿದ್ದನು.
ಆದರೆ ಕರ್ತನು ಅಬ್ರಹಾಮನ ಇಸಾಕನ ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಅವರಿಗೆ ದಯಮಾಡಿ ಅವರ ಮೇಲೆ ಕೃಪೆ ತೋರಿಸಿ ಅವರ ಕಡೆಗೆ ತಿರುಗಿದನು. ಇನ್ನೂ ಅವರನ್ನು ನಾಶ ಮಾಡಲು ಅವರನ್ನು ತನ್ನಿಂದ ತೊರೆದು ಬಿಡಲು ಮನಸ್ಸಾಗಲಿಲ್ಲ, ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲೂ ಇಲ್ಲ.
ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು; ಅವನು ತನ್ನ ದಿವಸಗಳಲ್ಲೆಲ್ಲಾ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.
ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು.
ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಬಹುಕೋಪ ಗೊಂಡು ಅವರನ್ನು ತನ್ನ ಸಮ್ಮುಖದಿಂದ ತೆಗೆದುಹಾಕಿ ದನು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿದದ್ದಿಲ್ಲ.
ಇಸ್ರಾಯೇಲಿನ ಅರಸನಾಗಿರುವ ಏಲನ ಮಗ ನಾದ ಹೋಶೇಯನ ಆಳ್ವಿಕೆಯ ಏಳನೇ ವರುಷದಲ್ಲಿ, ಅರಸನಾಗಿರುವ ಹಿಜ್ಕೀಯನ ನಾಲ್ಕನೇ ವರುಷದಲ್ಲಿ ಏನಾಯಿತಂದರೆ, ಅಶ್ಶೂರಿನ ಅರಸನಾದ ಶಲ್ಮನೆಸೆರನು ಸಮಾರ್ಯದ ಮೇಲೆ ಬಂದು ಅದನ್ನು ಮುತ್ತಿಗೆ ಹಾಕಿದನು.
ಇದಲ್ಲದೆ ನಾನು ನನ್ನ ಬಾಧ್ಯತೆಗೆ ಉಳಿದಿರುವವರನ್ನು ಬಿಟ್ಟು ಬಿಟ್ಟು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿಬಿಡುವೆನು. ಅವರು ತಮ್ಮ ಶತ್ರುಗಳಿಗೆ ಕೊಳ್ಳೆಯೂ ಸೂರೆಯೂ ಆಗಿ ಹೋಗುವರು.
ಕರ್ತನು--ನಾನು ಇಸ್ರಾ ಯೇಲನ್ನು ತೆಗೆದು ಹಾಕಿದ ಹಾಗೆ ಯೆಹೂದವನ್ನು ಸಹ ನನ್ನ ಸಮ್ಮುಖದಿಂದ ತೆಗೆದುಹಾಕುವೆನು; ಇದ ಲ್ಲದೆ ನಾನು ಆದುಕೊಂಡ ಈ ಪಟ್ಟಣವಾದ ಯೆರೂ ಸಲೇಮನ್ನೂ ನನ್ನ ಹೆಸರು ಅಲ್ಲಿರುವದೆಂದು ನಾನು ಹೇಳಿದ ಮನೆಯನ್ನೂ ತೆಗೆದುಬಿಡುವೆನು ಅಂದನು.
ನಿಶ್ಚಯವಾಗಿ ಕರ್ತನ ಅಪ್ಪಣೆಯಿಂದ ಇದು ಯೆಹೂದದ ಮೇಲೆ ಆಯಿತು. ಅದೇನಂದರೆ, ಮನಸ್ಸೆಯು ತನ್ನ ಎಲ್ಲಾ ಕೃತ್ಯಗಳಿಂದ ಮಾಡಿದ ಪಾಪಗಳ ನಿಮಿತ್ತ ಅವರನ್ನು ಆತನು ತನ್ನ ಸಮ್ಮುಖದಿಂದ ತೆಗೆದು ಹಾಕುವದಕ್ಕೋಸ್ಕರವೇ.
ಆತನ ಸೇವ ಕನಾದ ಇಸ್ರಾಯೇಲಿನ ಸಂತಾನವೇ, ಆತನು ಆದು ಕೊಂಡ ಯಾಕೋಬನ ಮಕ್ಕಳೇ,
ಆದದರಿಂದ ಅವನ ದೇವರಾದ ಕರ್ತನು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದನು. ಅರಾಮ್ಯರು ಅವನನ್ನು ಹೊಡೆದು ಅವರಲ್ಲಿ ಅನೇಕರನ್ನು ಸೆರೆ ಯಾಗಿ ಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಇವನು ಇಸ್ರಾಯೇಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪ ಟ್ಟದ್ದರಿಂದ ಅವನು ಇವನನ್ನು ಹೊಡೆದು ದೊಡ್ಡ ಸಂಹಾರ ಮಾಡಿದನು.
ಆಗ ಇಸ್ರಾಯೇಲ್ ಸಂತಾನದವರು ತಮ್ಮನ್ನು ಸಮಸ್ತ ಅನ್ಯ ಜನರಿಂದ ಪ್ರತ್ಯೇಕಿಸಿಕೊಂಡು ನಿಂತು ತಮ್ಮ ಪಾಪ ಗಳನ್ನೂ ತಮ್ಮ ತಂದೆಗಳ ಅಕ್ರಮಗಳನ್ನೂ ಅರಿಕೆ ಮಾಡಿದರು.
ಆದದರಿಂದ ನೀನು ಬಾಧಿಸುವ ವಿರೋಧಿಗಳ ಕೈಯಲ್ಲಿ ಅವರನ್ನು ಒಪ್ಪಿಸಿದಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿನ್ನನ್ನು ಕೂಗಿದಾಗ ನೀನು ಪರಲೋಕದಿಂದ ಕೇಳಿ, ನಿನ್ನ ಅಧಿಕವಾದ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವದಕ್ಕೆ, ರಕ್ಷಕರನ್ನು ಅವರಿಗೆ ಕೊಟ್ಟಿ.
ಆಗ ದ್ರೋಹಿಗಳಿಗೆ ನಿನ್ನ ಮಾರ್ಗಗಳನ್ನು ಕಲಿಸುವೆನು; ಪಾಪಾತ್ಮರು ನಿನ್ನ ಕಡೆಗೆ ತಿರುಗುವರು.
ಅಡವಿಯಿಂದ ಬಂದ ಹಂದಿಯು ಅದನ್ನು ಹಾಳುಮಾಡುತ್ತದೆ ಕಾಡಿನ ಮೃಗವು ಅದನ್ನು ಮೇಯ್ದು ಬಿಡುತ್ತದೆ.
ಆದದರಿಂದ ಯಾಕೋಬಿನ ಮನೆತನದವರು ಮೂಡಣ ದೇಶ ಗಳಲ್ಲಿ ಮಗ್ನರಾಗಿ ಫಿಲಿಷ್ಟಿಯರಂತೆ ಕಣಿ ಹೇಳುವವ ರಾಗಿಯೂ ಅನ್ಯ ದೇಶಗಳವರ ಮಧ್ಯದಲ್ಲಿ ಮೆಚ್ಚಿಕೆ ಯುಳ್ಳವರಾಗಿಯೂ ಇರುವದರಿಂದ ಈ ನಿನ್ನ ಜನರನ್ನು ತಳ್ಳಿಬಿಟ್ಟಿದ್ದೀ.
ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಕರ್ತನು ಅನ್ನುತ್ತಾನೆ; ನನ್ನ ಹೆಸರಿನಿಂದ ಕರೆಯಲ್ಪಟ್ಟ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವದಕ್ಕೆ ತಮ್ಮ ಅಸಹ್ಯವಾದ ವುಗಳನ್ನು ಇಟ್ಟಿದ್ದಾರೆ.
ಸಮಾ ಧಾನಕ್ಕೆ ಕಾದುಕೊಂಡೆವು, ಒಳ್ಳೇದೇನೂ ಬರಲಿಲ್ಲ; ಆರೋಗ್ಯದ ಸಮಯಕ್ಕೆ ಕಾದಿದ್ದೆವು; ಇಗೋ, ಕಳ ವಳವನ್ನು ನೋಡುತ್ತೇವೆ.
ಹೀಗಾದರೂ ಈಗ ಅದು ಕತ್ತಿಯಿಂದಲೂ ಬರದಿಂದಲೂ ಜಾಡ್ಯದಿಂದಲೂ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದೆಂದು ನೀವು ಹೇಳುವ ಈ ಪಟ್ಟಣದ ವಿಷಯ ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--
ಅವಳು ತಿರುಗಿ ಬಸುರಾಗಿ ಮಗಳನ್ನು ಹೆತ್ತಳು. ಆಗ ದೇವರು ಅವನಿಗೆ-- ಅವಳನ್ನು ಲೋರುಹಾಮ ಎಂಬ ಹೆಸರಿನಿಂದ ಕರೆ; ಯಾಕಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನ ದವರನ್ನು ಕರುಣಿಸುವದೇ ಇಲ್ಲ; ಆದರೆ ನಾನು ಅವರನ್ನು ಸಂಪೂರ್ಣವಾಗಿ ತೆಗೆದುಬಿಡುತ್ತೇನೆ.
ಗರ್ಭದಲ್ಲಿ ಅವನು ತನ್ನ ಸಹೋದರ ನನ್ನು ಹಿಮ್ಮಡಿಯಿಂದ ಹಿಡಿದು ತನ್ನ ಶಕ್ತಿಯಿಂದ ದೇವರೊಂದಿಗೆ ಬಲಹೊಂದಿದನು.
ಆದರೆ ಯೋನನು ಕರ್ತನ ಸಮ್ಮುಖದಿಂದ ತಾರ್ಷೀಷಿಗೆ ಓಡಿ ಹೋಗುವದಕ್ಕೆ ಎದ್ದು ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು ಅದರ ಪ್ರಯಾಣದ ತೆರವನ್ನು ಕೊಟ್ಟು ಕರ್ತನ ಸಮ್ಮುಖದಿಂದ ಅವರ ಸಂಗಡ ತಾರ್ಷಿಷಿಗೆ ಹೋಗುವದಕ್ಕೆ ಅದನ್ನು ಹತ್ತಿದನು.
ಆಗ ಆ ಮನುಷ್ಯರು ಬಹಳ ಭಯಪಟ್ಟು--ಇದನ್ನು ಯಾಕೆ ಮಾಡಿದ್ದೀ ಎಂದು ಅವನಿಗೆ ಹೇಳಿದರು, ಕರ್ತನ ಸಮ್ಮುಖದಿಂದ ಓಡಿ ಹೋಗುತ್ತಾನೆಂದು ಆ ಮನುಷ್ಯರಿಗೆ ತಿಳಿದಿತ್ತು; ಅವನು ಅವರಿಗೆ ಹೇಳಿದ್ದನು.
ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ.
ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.